AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಭವ್ ಕುಮಾರ್​​ಗೆ ಜಾಮೀನು ಸಿಕ್ಕಿದ ಬೆನ್ನಲ್ಲೇ ದ್ರೌಪದಿ ವಸ್ತ್ರಾಹರಣದ ಚಿತ್ರ ಪೋಸ್ಟ್ ಮಾಡಿದ ಸ್ವಾತಿ ಮಲಿವಾಲ್

ಮೇ 13 ರಂದು, ಮುಖ್ಯಮಂತ್ರಿಯ ಸಿವಿಲ್ ಲೈನ್ಸ್ ನಿವಾಸದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದರು. ಕೆಲವು ದಿನಗಳ ನಂತರ, ಅವರನ್ನು ಕೇಜ್ರಿವಾಲ್ ಅವರ ಮನೆಯಿಂದ ಪೊಲೀಸರು ಬಂಧಿಸಿದರು. ಈ ಪ್ರಕರಣದಲ್ಲಿ ಬಿಭವ್ ಕುಮಾರ್‌ಗೆ ಸುಪ್ರೀಂಕೋರ್ಟ್ ಸೋಮವಾರ ಜಾಮೀನು ನೀಡಿತ್ತು.

ಬಿಭವ್ ಕುಮಾರ್​​ಗೆ ಜಾಮೀನು ಸಿಕ್ಕಿದ ಬೆನ್ನಲ್ಲೇ ದ್ರೌಪದಿ ವಸ್ತ್ರಾಹರಣದ ಚಿತ್ರ ಪೋಸ್ಟ್ ಮಾಡಿದ ಸ್ವಾತಿ ಮಲಿವಾಲ್
ಸ್ವಾತಿ ಮಲಿವಾಲ್
ರಶ್ಮಿ ಕಲ್ಲಕಟ್ಟ
|

Updated on: Sep 03, 2024 | 4:44 PM

Share

ದೆಹಲಿ ಸೆಪ್ಟೆಂಬರ್ 03: ಬಿಭವ್ ಕುಮಾರ್‌ಗೆ (Bibhav Kumar) ಸುಪ್ರೀಂಕೋರ್ಟ್ (Supreme Court) ಜಾಮೀನು ನೀಡಿದ ಒಂದು ದಿನದ ನಂತರ, ಆಮ್ ಆದ್ಮಿ ಪಕ್ಷದ (AAP) ನಾಯಕಿ ಸ್ವಾತಿ ಮಲಿವಾಲ್ ಅವರು ಮಂಗಳವಾರ ದ್ರೌಪದಿಯ ವಸ್ತ್ರಾಹರಣ ಮಾಡಲು ದುಶ್ಶಾಸನ ಪ್ರಯತ್ನಿಸುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಈ ಚಿತ್ರವನ್ನು ಮಾತ್ರ ಮಲಿವಾಲ್ ಪೋಸ್ಟ್ ಮಾಡಿದ್ದು, ಅವರು ಬೇರೇನೂ ಬರೆದಿಲ್ಲ.  ಹಿಂದೂ ಮಹಾಕಾವ್ಯ ಮಹಾಭಾರತದಲ್ಲಿ, ದುಶ್ಶಾಸನನು ದ್ರೌಪದಿಯನ್ನು ವಸ್ತ್ರಾಪಹರಣ ಮಾಡಲು ಪ್ರಯತ್ನಿಸುತ್ತಾನೆ. ಆದರೆ ಕೌರವರ ವಿರುದ್ಧದ ಯುದ್ಧದಲ್ಲಿ ಪಾಂಡವರಿಗೆ ಮಾರ್ಗದರ್ಶನ ನೀಡುವ ಭಗವಾನ್ ಕೃಷ್ಣನ ದೈವಿಕ ಹಸ್ತಕ್ಷೇಪದಿಂದ ದ್ರೌಪದಿಯನ್ನು ರಕ್ಷಿಸುತ್ತಾನೆ.

ಮೇ 13 ರಂದು, ಮುಖ್ಯಮಂತ್ರಿಯ ಸಿವಿಲ್ ಲೈನ್ಸ್ ನಿವಾಸದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಾಜಿ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದರು. ಕೆಲವು ದಿನಗಳ ನಂತರ, ಅವರನ್ನು ಕೇಜ್ರಿವಾಲ್ ಅವರ ಮನೆಯಿಂದ ಪೊಲೀಸರು ಬಂಧಿಸಿದರು.

ಸ್ವಾತಿ ಮಲಿವಾಲ್  ಪೋಸ್ಟ್

ಏತನ್ಮಧ್ಯೆ, ತನ್ನ ಜಾಮೀನು ಆದೇಶದಲ್ಲಿ, ಪ್ರಕರಣದ ಎಲ್ಲಾ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ಮಾಡುವವರೆಗೆ ಕುಮಾರ್ ಅವರು ಸಿಎಂ ನಿವಾಸಕ್ಕೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿದೆ. ಹೆಚ್ಚುವರಿಯಾಗಿ, ‘ದುರ್ಬಲ’ ಸಾಕ್ಷಿಗಳನ್ನು ಪರೀಕ್ಷಿಸುವವರೆಗೆ ಅವರು ಪ್ರಕರಣದ ಕುರಿತು ಬಿಭವ್ ಕುಮಾರ್ ಏನೂ ಮಾತನಾಡುವಂತಿಲ್ಲ

ತನ್ನ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್), ಮಲಿವಾಲ್, ಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ‘ನನ್ನ ಘನತೆಗೆ ಘಾಸಿ ಮಾಡಿದ್ದಾರೆ. ನನಗೆ ಕಪಾಳಮೋಕ್ಷ ಮಾಡಿದ್ದಾರೆ. ನೆಲದ ಮೇಲೆ ಬಿದ್ದಾಗ ಒದ್ದು ನನಗೆ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Naxal Encounter: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌; 9 ನಕ್ಸಲರ ಹತ್ಯೆ

‘ಯಾವುದೇ ಪ್ರಚೋದನೆ ಇಲ್ಲದೇ ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದರು. ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಎದೆ ಮತ್ತು ಸೊಂಟಕ್ಕೆ ಒದೆದಿದ್ದಾರೆ. ಉದ್ದೇಶಪೂರ್ವಕವಾಗಿ ನನ್ನ ಅಂಗಿಯನ್ನು ಎಳೆದರು’ ಎಂದು ಅವರು ಕುಮಾರ್ ವಿರುದ್ಧ ಆರೋಪಿಸಿದರು.

ಮಲಿವಾಲ್ ಎಎಪಿಯಿಂದ ರಾಜ್ಯಸಭೆಯ ಸದಸ್ಯರಾಗಿದ್ದಾರೆ ಮತ್ತು ಈ ಹಿಂದೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥರಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ