ಪುದುಚೇರಿಯಲ್ಲಿ ಸರ್ಕಾರ ರಚಿಸಲು  ಎನ್.ರಂಗಸ್ವಾಮಿ ಸಿದ್ಧತೆ,  ಮೇ 7 ಅಥವಾ 9ಕ್ಕೆ  ಪ್ರಮಾಣ ವಚನ 

NR Congress chief N Rangaswamy: ವೇಳೆ ಮಾಜಿ ಸಿಎಂ ರಂಗಸ್ವಾಮಿ ನೇತೃತ್ವದ ಎನ್ ಆರ್ ಕಾಂಗ್ರೆಸ್ ಪಕ್ಷ 10 ಸೀಟುಗಳನ್ನು ಗೆಲ್ಲುವ ಮೂಲಕ ಎನ್​ಡಿಎ ಮೈತ್ರಿಕೂಟ 16 ಸೀಟುಗಳ ಸರಳ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.

ಪುದುಚೇರಿಯಲ್ಲಿ ಸರ್ಕಾರ ರಚಿಸಲು  ಎನ್.ರಂಗಸ್ವಾಮಿ ಸಿದ್ಧತೆ,  ಮೇ 7 ಅಥವಾ 9ಕ್ಕೆ  ಪ್ರಮಾಣ ವಚನ 
ಎನ್.ರಂಗಸ್ವಾಮಿ
Follow us
|

Updated on:May 04, 2021 | 1:51 PM

ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಸರ್ಕಾರ ರಚನೆಗೆ ಎನ್ .ಆರ್.ಕಾಂಗ್ರೆಸ್ ಮುಖ್ಯಸ್ಥ ಎನ್.ರಂಗಸ್ವಾಮಿ ಮುಂದೆ ಬಂದಿದ್ದಾರೆ. ಪುದುಚೇರಿಯಲ್ಲಿ ಸ್ಪರ್ಧಿಸಿದ 9 ಸೀಟುಗಳಲ್ಲಿ ಬಿಜೆಪಿ 6 ಸೀಟುಗಳನ್ನು ಗೆದ್ದಿತ್ತು. ಅದೇ ವೇಳೆ ಮಾಜಿ ಸಿಎಂ ರಂಗಸ್ವಾಮಿ ನೇತೃತ್ವದ ಎನ್ ಆರ್ ಕಾಂಗ್ರೆಸ್ ಪಕ್ಷ 10 ಸೀಟುಗಳನ್ನು ಗೆಲ್ಲುವ ಮೂಲಕ ಎನ್​ಡಿಎ ಮೈತ್ರಿಕೂಟ 16 ಸೀಟುಗಳ ಸರಳ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.  ಎನ್​ಡಿಎ ನೇತೃತ್ವದ ಸರ್ಕಾರದ ಮುಖ್ಯಮಂತ್ರಿಯಾಗಿ ಎನ್.ರಂಗಸ್ವಾಮಿ ಅವರು ಮೇ 7 ಅಥವಾ 9ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ರಂಗಸ್ವಾಮಿಯ ಜನಪ್ರಿಯತೆಯ ಬಗ್ಗೆ ಅಸಮಧಾನದಿಂದ ವರ್ತಿಸುತ್ತಿದ್ದ ಬಿಜೆಪಿ ಅಂತಿಮವಾಗಿ ಅವರನ್ನು ತಮ್ಮ ಸಿಎಂ ಅಭ್ಯರ್ಥಿಯಾಗಿ ಅಂಗೀಕರಿಸುತ್ತದೆಯೇ ಎಂಬ ಬಗ್ಗೆ ಎದ್ದಿತ್ತು .ರಂಗಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಬಿಜೆಪಿ ಮೌನ ವಹಿಸಿದ್ದು ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಘೋಷಿಸಲಾಗುವುದು ಎಂದು ಹೇಳಿತ್ತು.

ಎನ್‌ಡಿಎ ಮೈತ್ರಿಕೂಟವು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಹೊಂದಿರುವ ದಕ್ಷಿಣದ ರಾಜ್ಯದಲ್ಲಿ ಗೆಲುವು ಸಾಧಿಸಿದ ನಂತರ ಸೋಮವಾರ ಎನ್‌ಆರ್ ಕಾಂಗ್ರೆಸ್ ಅನ್ನು ಭೇಟಿ ಮಾಡಿದೆ. ಬಿಜೆಪಿ ತನ್ನ 6 ಶಾಸಕರನ್ನು ಹೊಂದಿದ್ದು, ತನ್ನದೇ ಆದ ಒಬ್ಬರನ್ನು ಸಿಎಂ ಆಗಿ ನೇಮಿಸಲು ಉತ್ಸುಕವಾಗಿತ್ತು. ಆದರೆ ರಂಗಸ್ವಾಮಿ ಬಿಟ್ಟುಕೊಡಲಿಲ್ಲ. ಸೋಮವಾರ ಸಂಜೆ ರಂಗಸ್ವಾಮಿ ಅವರು ಸರ್ಕಾರ ರಚಿಸುವ ಹಕ್ಕು ಪಡೆಯಲು ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿPuducherry elections results 2021: ಪುದುಚೇರಿಯಲ್ಲಿ ಎನ್​ಡಿಎ ಒಕ್ಕೂಟಕ್ಕೆ ಮುನ್ನಡೆ; ಒಂದು ಕ್ಷೇತ್ರದಲ್ಲಿ ಗೆದ್ದ ಕಾಂಗ್ರೆಸ್​

ರಾಜಕೀಯ ವಿಶ್ಲೇಷಣೆ: ದಕ್ಷಿಣದಲ್ಲಿ ನಡೆಯಲಿಲ್ಲ ಬಿಜೆಪಿ ಜಾದೂ, ಎಲ್ಲೆಡೆ ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್​, ಟಿಎಂಸಿ ಗೆಲುವಿನಲ್ಲಿದೆ ಹಲವು ಪಾಠ

Published On - 1:33 pm, Tue, 4 May 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ