AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ; 346.50 ಕೋಟಿ ರೂ. ಪಾವತಿಸಿದ ಕೇಂದ್ರ

2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದಿಂದಾಗಿ 2024 ಆಗಸ್ಟ್​.05ರವರೆಗೆ ಸುಮಾರು ರೂ.346.50 ಕೋಟಿ ಮೊತ್ತವನ್ನ ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ.

ತುಮಕೂರು ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ; 346.50 ಕೋಟಿ ರೂ. ಪಾವತಿಸಿದ ಕೇಂದ್ರ
ವಿ ಸೋಮಣ್ಣ
TV9 Web
| Edited By: |

Updated on: Aug 06, 2024 | 10:02 AM

Share

ದೆಹಲಿ, ಆಗಸ್ಟ್.06: ಕೊಬ್ಬರಿ ಬೆಳೆಯುವ ರೈತರಿಗೆ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಸಿಹಿ ಸುದ್ದಿ ನೀಡಿದ್ದಾರೆ. 2024ರ ಸಾಲಿನಲ್ಲಿ ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೆ ಕೊಬ್ಬರಿ (Dry Coconut) ಖರೀದಿಗೆ ಸಂಬಂಧಪಟ್ಟ ಮೊತ್ತ ಪಾವತಿ ಮಾಡಲಾಗಿದೆ. ಸುಮಾರು ರೂ.346.50 ಕೋಟಿ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ. ಈ ಬಗ್ಗೆ ಖುದ್ದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.378 ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದಿಂದಾಗಿ 2024 ಆಗಸ್ಟ್​.05ರವರೆಗೆ ಸುಮಾರು ರೂ.346.50 ಕೋಟಿ ಮೊತ್ತವನ್ನು (ಪ್ರತಿಶತ 92 ರಷ್ಟು) ರೈತರ ಖಾತೆಗೆ ನೇರವಾಗಿ(ಡಿಬಿಟಿ ಮುಖೇನ) ಪಾವತಿಸಲಾಗಿದೆ.

ಇದನ್ನೂ ಓದಿ: Karnataka Rains: ಬೆಂಗಳೂರು, ಕರಾವಳಿ ಸೇರಿದಂತೆ ಹಲವೆಡೆ ಆಗಸ್ಟ್ 12ರವರೆಗೆ ಭಾರಿ ಮಳೆ

ಸುಮಾರು 24600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆಯೆಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ. ಬಾಕಿ ಉಳಿದ ಸುಮಾರು 2438 ರೈತರ ಖಾತೆಗೆ ಅಂದಾಜು 31.64ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ (ಪ್ರತಿಶತ 8ರಷ್ಟು ಮಾತ್ರ). ಈ ಮೊತ್ತವನ್ನು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಎಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.691 ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಸಚಿವ ಸೋಮಣ್ಣ ಅವರು ತಿಳಿಸಿದ್ದಾರೆ. ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ ಸೋಮಣ್ಣ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ತುಮಕೂರಿನ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ