AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸಾವು

ರಿಜ್ವಾನ್ ಗ್ರಾಹಕರ ಮನೆ ಬಾಗಿಲಿಗೆ ಬಂದಾಗ ನಾಯಿ ಅವರತ್ತ ನುಗ್ಗಿತು. ಅದನ್ನು ನೋಡಿ ಹೆದರಿ ಓಡಿಹೋಗುವಾಗ ರಿಜ್ವಾನ್ ಕೆಳಗೆ ಬಿದ್ದಿದ್ದರು. ಇದರಿಂದ ಅವರ ತಲೆಗೆ ಗಂಭೀರವಾದ ಗಾಯಗಳಾಗಿತ್ತು.

ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 16, 2023 | 1:47 PM

Share

ಹೈದರಾಬಾದ್: ಫುಡ್ ಡೆಲಿವರಿಗೆ (Food Delivery) ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ (Swiggy Delivery Agent) ಹೈದರಾಬಾದ್​ನ ಅಪಾರ್ಟ್​ಮೆಂಟ್​ನ 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿತ್ತು. ಇದೀಗ ಆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ವಿಗ್ಗಿ ಡೆಲಿವರಿ ಬಾಯ್ ಫುಡ್ ಆರ್ಡರ್ ಮಾಡಿದವರ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತ್ತು. ಆಗ ಹೆದರಿದ ಡೆಲಿವರಿ ಬಾಯ್ ಭಯದಿಂದ ತಪ್ಪಿಸಿಕೊಳ್ಳಲು ಹೋಗಿ ಮಹಡಿಯಿಂದ ಕೆಳಗೆ ಹಾರಿದ್ದರು.

23 ವರ್ಷದ ಮೊಹಮ್ಮದ್ ರಿಜ್ವಾನ್ ಜನವರಿ 11ರಂದು ಬಂಜಾರಾ ಹಿಲ್ಸ್‌ನ ಲುಂಬಿನಿ ರಾಕ್ ಕ್ಯಾಸಲ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಗ್ರಾಹಕರ ಮುದ್ದಿನ ಜರ್ಮನ್ ಶೆಫರ್ಡ್‌ನಿಂದ ತಪ್ಪಿಸಿಕೊಂಡು ಓಡುತ್ತಿದ್ದಾಗ ಕೆಳಗೆ ಬಿದ್ದಿದ್ದರು. ಅವರು ಭಾನುವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!

ಪೊಲೀಸರ ಪ್ರಕಾರ, ರಿಜ್ವಾನ್ ಗ್ರಾಹಕರ ಮನೆ ಬಾಗಿಲಿಗೆ ಬಂದಾಗ, ನಾಯಿ ಅವರತ್ತ ನುಗ್ಗಿತು. ಅದನ್ನು ನೋಡಿ ಹೆದರಿ ಓಡಿಹೋಗುವಾಗ ರಿಜ್ವಾನ್ ಕೆಳಗೆ ಬಿದ್ದಿದ್ದರು. ಇದರಿಂದ ಅವರ ತಲೆಗೆ ಗಂಭೀರವಾದ ಗಾಯಗಳಾಗಿತ್ತು. ತಕ್ಷಣ ನಾಯಿಯ ಮಾಲೀಕರು ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೇರಿಸಿದ್ದರು.

ಸ್ವಿಗ್ಗಿ ಡೆಲಿವರಿ ಏಜೆಂಟ್ 25 ವರ್ಷದ ರಿಜ್ವಾನ್ ಕಳೆದ 3 ವರ್ಷಗಳಿಂದ ಸ್ವಿಗ್ಗಿಯೊಂದಿಗೆ ಕೆಲಸ ಮಾಡುತ್ತಿದ್ದರು. ಫ್ಲಾಟ್ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ರಿಜ್ವಾನ್​ನ ಸಹೋದರ ಬಂಜಾರಾ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದರು. ನಾಯಿಯ ಮಾಲೀಕರ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?