AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸಾವು

ರಿಜ್ವಾನ್ ಗ್ರಾಹಕರ ಮನೆ ಬಾಗಿಲಿಗೆ ಬಂದಾಗ ನಾಯಿ ಅವರತ್ತ ನುಗ್ಗಿತು. ಅದನ್ನು ನೋಡಿ ಹೆದರಿ ಓಡಿಹೋಗುವಾಗ ರಿಜ್ವಾನ್ ಕೆಳಗೆ ಬಿದ್ದಿದ್ದರು. ಇದರಿಂದ ಅವರ ತಲೆಗೆ ಗಂಭೀರವಾದ ಗಾಯಗಳಾಗಿತ್ತು.

ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 16, 2023 | 1:47 PM

Share

ಹೈದರಾಬಾದ್: ಫುಡ್ ಡೆಲಿವರಿಗೆ (Food Delivery) ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ (Swiggy Delivery Agent) ಹೈದರಾಬಾದ್​ನ ಅಪಾರ್ಟ್​ಮೆಂಟ್​ನ 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿತ್ತು. ಇದೀಗ ಆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ವಿಗ್ಗಿ ಡೆಲಿವರಿ ಬಾಯ್ ಫುಡ್ ಆರ್ಡರ್ ಮಾಡಿದವರ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತ್ತು. ಆಗ ಹೆದರಿದ ಡೆಲಿವರಿ ಬಾಯ್ ಭಯದಿಂದ ತಪ್ಪಿಸಿಕೊಳ್ಳಲು ಹೋಗಿ ಮಹಡಿಯಿಂದ ಕೆಳಗೆ ಹಾರಿದ್ದರು.

23 ವರ್ಷದ ಮೊಹಮ್ಮದ್ ರಿಜ್ವಾನ್ ಜನವರಿ 11ರಂದು ಬಂಜಾರಾ ಹಿಲ್ಸ್‌ನ ಲುಂಬಿನಿ ರಾಕ್ ಕ್ಯಾಸಲ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಗ್ರಾಹಕರ ಮುದ್ದಿನ ಜರ್ಮನ್ ಶೆಫರ್ಡ್‌ನಿಂದ ತಪ್ಪಿಸಿಕೊಂಡು ಓಡುತ್ತಿದ್ದಾಗ ಕೆಳಗೆ ಬಿದ್ದಿದ್ದರು. ಅವರು ಭಾನುವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!

ಪೊಲೀಸರ ಪ್ರಕಾರ, ರಿಜ್ವಾನ್ ಗ್ರಾಹಕರ ಮನೆ ಬಾಗಿಲಿಗೆ ಬಂದಾಗ, ನಾಯಿ ಅವರತ್ತ ನುಗ್ಗಿತು. ಅದನ್ನು ನೋಡಿ ಹೆದರಿ ಓಡಿಹೋಗುವಾಗ ರಿಜ್ವಾನ್ ಕೆಳಗೆ ಬಿದ್ದಿದ್ದರು. ಇದರಿಂದ ಅವರ ತಲೆಗೆ ಗಂಭೀರವಾದ ಗಾಯಗಳಾಗಿತ್ತು. ತಕ್ಷಣ ನಾಯಿಯ ಮಾಲೀಕರು ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೇರಿಸಿದ್ದರು.

ಸ್ವಿಗ್ಗಿ ಡೆಲಿವರಿ ಏಜೆಂಟ್ 25 ವರ್ಷದ ರಿಜ್ವಾನ್ ಕಳೆದ 3 ವರ್ಷಗಳಿಂದ ಸ್ವಿಗ್ಗಿಯೊಂದಿಗೆ ಕೆಲಸ ಮಾಡುತ್ತಿದ್ದರು. ಫ್ಲಾಟ್ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ರಿಜ್ವಾನ್​ನ ಸಹೋದರ ಬಂಜಾರಾ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದರು. ನಾಯಿಯ ಮಾಲೀಕರ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು