AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಟೀಮ್​ ಇಂಡಿಯಾಗೆ ಶುಭ ಕೋರಿದ ರಾಹುಲ್​ ಗಾಂಧಿ

ಭಾರತ ಕ್ರಿಕೆಟ್​ ತಂಡವು 17 ವರ್ಷದ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್​ಗೆ ಮುತ್ತಿಕ್ಕಿದೆ. ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಮಣಿಸಿತು. ವಿಶ್ವಕಪ್​ ಗೆಲುವಿಗೆ ಜನಪ್ರತಿನಿಧಿಗಳು, ಸಿನಿಮಾ ತಾರೆಯರು ಸೇರಿದಂತೆ ಅನೇಕರು ಶುಭಾಶಯ ತಿಳಿಸುತ್ತಿದ್ದಾರೆ. ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿ ಅವರು ಟ್ವೀಟ್​ ಮಾಡುವ ಮೂಲಕ ಟೀಮ್​ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.

T20 World Cup: ಟೀಮ್​ ಇಂಡಿಯಾಗೆ ಶುಭ ಕೋರಿದ ರಾಹುಲ್​ ಗಾಂಧಿ
ಟೀಮ್​ ಇಂಡಿಯಾ, ರಾಹುಲ್​ ಗಾಂಧಿ
ವಿವೇಕ ಬಿರಾದಾರ
|

Updated on:Jun 30, 2024 | 8:29 AM

Share

ಭಾರತ ಕ್ರಿಕೆಟ್​ ತಂಡವು 17 ವರ್ಷದ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ (T20 World Cup) ಗೆದ್ದಿದೆ. ಬಾರ್ಬಡೋಸ್​ನಲ್ಲಿ ನಡೆದ ಟಿ20 ವಿಶ್ವಕಪ್​​​ನ ಫೈನಲ್​ ಪಂದ್ಯದಲ್ಲಿ ಸೌತ್​ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಸೋಲಿಸುವ ಮೂಲಕ ಟೀಮ್​ ಇಂಡಿಯಾ (Team India) ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಟೀಮ್​ ಇಂಡಿಯಾ ಗೆಲವಿಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು, ಸಿನಿಮಾ ತಾರೆಯರು ಸೇರಿದಂತೆ ಅನೇಕರು ಶುಭಾಶಯ ತಿಳಿಸುತ್ತಿದ್ದಾರೆ. ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿ (Rahul Gandi) ಅವರು ಟ್ವೀಟ್​ ಮಾಡುವ ಮೂಲಕ ಟೀಮ್​ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.

“ವಿಶ್ವಕಪ್​ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ ಮತ್ತು ವಿಶ್ವಕಪ್​ ಗೆದ್ದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು! ಸೂರ್ಯಕುಮಾರ್​ ಯಾದವ್​ ಎಂತಹ ಅದ್ಭುತ ಕ್ಯಾಚ್ ಹಿಡಿದಿರಿ! ಈ ಗೆಲುವು ರೋಹಿತ್ ಶರ್ಮಾ ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಟೀಮ್ ಇಂಡಿಯಾ ರಾಹುಲ್ ದ್ರಾವಿಡ್​​​ ಅವರ ಮಾರ್ಗದರ್ಶನವನ್ನು ಕಳೆದುಕೊಳ್ಳಲಿದೆ. ಟೀಮ್​ ಇಂಡಿಯಾ ನಮ್ಮ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದೆ.” ಎಂದು ಸಂಸದ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತದ ಪರ ವಿರಾಟ್ ಕೊಹ್ಲಿ (76) ಆಕರ್ಷಕದ ಅರ್ಧಶತಕ ಬಾರಿಸಿದರೆ, ಅಕ್ಷರ್ ಪಟೇಲ್ 47 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 176 ರನ್ ಕಲೆಹಾಕಿತು.

ಇದನ್ನೂ ಓದಿ: ಹುಟ್ಟುಹಬ್ಬದ ಉಡುಗೊರೆಗೆ ಧನ್ಯವಾದಗಳು: ವಿಶ್ವಕಪ್ ಗೆದ್ದ ಬೆನ್ನಲ್ಲೇ ಧೋನಿಯ ಅಚ್ಚರಿಯ ಪೋಸ್ಟ್

ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ದಿಟ್ಟ ಹೋರಾಟವನ್ನೇ ನಡೆಸಿದ್ದರು. ಅದರಲ್ಲೂ 15 ಓವರ್​ ತನಕ ಪಂದ್ಯವು ಸೌತ್ ಆಫ್ರಿಕಾ ಪರವಿತ್ತು. ಆದರೆ ಅಂತಿಮ ಹಂತದಲ್ಲಿ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಪರಿಣಾಮ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ ಕಲೆಹಾಕಿತು. ಈ ಮೂಲಕ ಭಾರತ ತಂಡವು 7 ರನ್​ಗಳ ರೋಚಕ ಜಯ ಸಾಧಿಸಿದೆ.ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಆಟಗಾರರು ಕುಣಿದು ಕುಪ್ಪಳಿಸಿದರು.

Published On - 8:22 am, Sun, 30 June 24

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?