AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ನಮ್ಮ ಸೈನಿಕರು ಸತ್ತಿದ್ದಾರೆ, ನೀವು ಟಿ20 ಆಡುತ್ತೀರಾ?; ಪ್ರಧಾನಿ ಮೋದಿ ವಿರುದ್ಧ ಓವೈಸಿ ವಾಗ್ದಾಳಿ

ICC T20 World Cup 2021: ಕಾಶ್ಮೀರದಲ್ಲಿ ಪಾಕಿಸ್ತಾನ ಭಾರತದ ಜನರ ಜೀವನದ ಜೊತೆಗೆ ಪ್ರತಿ ದಿನವೂ 20-20 ಮ್ಯಾಚ್ ಆಡುತ್ತಿದೆ. ಪಾಕಿಸ್ತಾನದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ 9 ಭಾರತೀಯ ಸೈನಿಕರು ಮೃತಪಟ್ಟಿದ್ದಾರೆ. ಆದರೆ ಅಕ್ಟೋಬರ್ 24ರಂದು ಭಾರತ ಪಾಕಿಸ್ತಾನದ ವಿರುದ್ಧ ಟ್ವೆಂಟಿ-20 ಆಡುತ್ತಿದೆ ಎಂದು ಓವೈಸಿ ಕಿಡಿ ಕಾರಿದ್ದಾರೆ.

ಪಾಕಿಸ್ತಾನದಿಂದ ನಮ್ಮ ಸೈನಿಕರು ಸತ್ತಿದ್ದಾರೆ, ನೀವು ಟಿ20 ಆಡುತ್ತೀರಾ?; ಪ್ರಧಾನಿ ಮೋದಿ ವಿರುದ್ಧ ಓವೈಸಿ ವಾಗ್ದಾಳಿ
ಅಸಾದುದ್ದೀನ್​ ಓವೈಸಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 19, 2021 | 2:48 PM

ನವದೆಹಲಿ: ಪಾಕಿಸ್ತಾನದಿಂದಾಗಿ ನಮ್ಮ ಸೈನಿಕರು ಸತ್ತಿದ್ದಾರೆ, ಸಾಯುತ್ತಲೇ ಇದ್ದಾರೆ. ಆದರೆ, ನೀವು ಟಿ-20 ಮ್ಯಾಚ್ ಆಡುತ್ತಿದ್ದೀರಾ? ಕಾಶ್ಮೀರದಲ್ಲಿ ಪಾಕಿಸ್ತಾನ ಭಾರತದ ಜನರ ಜೀವನದ ಜೊತೆಗೆ ಪ್ರತಿ ದಿನವೂ 20-20 ಮ್ಯಾಚ್ ಆಡುತ್ತಿದೆ. ಕಾಶ್ಮೀರದಲ್ಲಿ ಟಾರ್ಗೆಟ್ ಮಾಡಿ ಭಾರತೀಯರನ್ನು ಹತ್ಯೆ ಮಾಡಲಾಗುತ್ತಿದೆ. ಜನರ ಜೀವವನ್ನು ರಕ್ಷಣೆ ಮಾಡುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಬಿಹಾರದ ಬಡ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾದರೆ ಗುಪ್ತಚರ ಇಲಾಖೆ, ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ಎಂದು ಎಐಎಂಐಎಂ (All India Majlis-e-Ittehadul Muslimeen) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿ ಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂಧನ ಬೆಲೆಗಳಲ್ಲಿನ ಏರಿಕೆ ಹಾಗೂ ಲಡಾಖ್‌ನಲ್ಲಿ ನಮ್ಮ ಗಡಿಯೊಳಗೆ ಚೀನಾ ಪಡೆ ನೆಲೆಯೂರಿರುವ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ. ಚೀನಾ ವಿರುದ್ಧ ಮಾತನಾಡಲು ನರೇಂದ್ರ ಮೋದಿಗೆ ಬಹಳ ಹೆದರಿಕೆ. ಹೀಗಾಗಿಯೇ ಲಡಾಖ್ ವಿಷಯದ ಬಗ್ಗೆ ಅವರು ಮಾತನಾಡುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.

ತೆಲಂಗಾಣದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ‘ಜಮ್ಮು ಮತ್ತು ಕಾಶ್ಮೀರದಲ್ಲಿ 9 ಭಾರತೀಯ ಸೈನಿಕರು ಮೃತಪಟ್ಟಿದ್ದಾರೆ. ಆದರೆ ಅಕ್ಟೋಬರ್ 24ರಂದು ಭಾರತ ಪಾಕಿಸ್ತಾನದ ವಿರುದ್ಧ ಟ್ವೆಂಟಿ-20 ಆಡುತ್ತಿದೆ’ ಎಂದು ಓವೈಸಿ ವ್ಯಂಗ್ಯವಾಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ಅ. 24ರಂದು ಟ್ವೆಂಟಿ-20 ವಿಶ್ವಕಪ್‌ನ ಪಂದ್ಯ ನಡೆಯಲಿದೆ. ಯುಎಇಯಲ್ಲಿ ನಡೆಯುತ್ತಿರುವ ಈ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ಇರಲಿದೆ.

ಐಸಿಸಿ ಟಿ-20 ವಿಶ್ವಕಪ್ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕೂಡ ಅಭಿಪ್ರಾಯ ಪಟ್ಟಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಉತ್ತಮವಾಗಿಲ್ಲದ ಕಾರಣ ಪಂದ್ಯವನ್ನು ಮರುಪರಿಶೀಲಿಸಬೇಕು ಎಂದು ನಾನು ಭಾವಿಸುತ್ತೇನೆ” ಎಂದಿದ್ದರು.

ಇನ್ನು, ಈ ಪಂದ್ಯದ ಬಗ್ಗೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ವಿರುದ್ಧದ ನಮ್ಮ ಪಂದ್ಯವನ್ನು ನಾವು ಕೇವಲ ಒಂದು ಆಟದಂತೆ ನೋಡುತ್ತೇವೆ. ಈ ಪಂದ್ಯದ ಬಗ್ಗೆ ಹೆಚ್ಚು ಪ್ರಚಾರ, ಕುತೂಹಲವಿದೆ ಎಂದು ನನಗೆ ತಿಳಿದಿದೆ ಎಂದಿದ್ದರು. 2019ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಒಡಿಐ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎದುರಾಳಿಯಾಗಿ ಆಡಿದ ನಂತರ ಈ ಎರಡು ತಂಡಗಳ ನಡುವೆ ಬೇರೆ ಯಾವುದೇ ಪಂದ್ಯಗಳು ನಡೆದಿರಲಿಲ್ಲ.

ಇದನ್ನೂ ಓದಿ: T20 World Cup 2021: ಕೇವಲ ಒಂದು ಗಂಟೆಯೊಳಗೆ ಭಾರತ-ಪಾಕಿಸ್ತಾನ ಟಿ-20 ವಿಶ್ವಕಪ್ ಪಂದ್ಯದ ಟಿಕೆಟ್ ಸೋಲ್ಡ್ ಔಟ್

India T20 World cup: ಭಾರತ ಟಿ-20 ವಿಶ್ವಕಪ್ ತಂಡದಲ್ಲಿ ದೊಡ್ಡ ಬದಲಾವಣೆ: ಹೊಸದಾಗಿ ಸೇರಲಿದ್ದಾರೆ ಈ ಆಟಗಾರರು?

Published On - 2:48 pm, Tue, 19 October 21

ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ