AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್​​ನಲ್ಲಿ ಪಾಲ್ಗೊಳ್ಳುವ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಆರೋಪ ಹೊತ್ತಿದ್ದ 36 ವಿದೇಶಿಯರನ್ನು ದೆಹಲಿ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ.

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ತಬ್ಲಿಘಿ ಜಮಾತ್​ನಲ್ಲಿ ಪಾಲ್ಗೊಂಡಿದ್ದ 36 ವಿದೇಶಿಯರು ಆರೋಪ ಮುಕ್ತ
ಸಾಂಕೇತಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on:Dec 15, 2020 | 8:06 PM

Share

ನವದೆಹಲಿ: ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್​​ನಲ್ಲಿ ಪಾಲ್ಗೊಳ್ಳುವ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಆರೋಪ ಹೊತ್ತಿದ್ದ 36 ವಿದೇಶಿಯರನ್ನು ದೆಹಲಿ ನ್ಯಾಯಾಲಯ ಆರೋಪಮುಕ್ತಗೊಳಿಸಿದೆ.

ನಿಜಾಮುದ್ದೀನ್ ಪ್ರದೇಶ ಕೋವಿಡ್ ಹಾಟ್​ಸ್ಪಾಟ್ ಆಗುವ ಮೂಲಕ ಜಮಾತ್ ಮಾರ್ಚ್ ತಿಂಗಳಲ್ಲಿ ಸುದ್ದಿಯಾಗಿತ್ತು. ಜಮಾತ್​ನಲ್ಲಿ ಹಲವಾರು ಮಂದಿ ವಿದೇಶಿಯರು ಭಾಗಿಯಾಗಿದ್ದರು. ಜಮಾತ್​​ನಲ್ಲಿ ಭಾಗಿಯಾಗುವ ಮೂಲಕ ಇವರು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ. ವೀಸಾ ನಿಯಮ ಉಲ್ಲಂಘನೆ ಮಾಡಿ ಮಿಷನರಿ ಕಾರ್ಯಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲೀಸರು 955 ಮಂದಿ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು.

ಈ ಪೈಕಿ ಬಹುತೇಕ ತಬ್ಲಿಘಿ ಜಮಾತ್ ಸದಸ್ಯರು ಅನುಮತಿ ಪಡೆದು ಅವರವರ ದೇಶಗಳಿಗೆ ತೆರಳಿದ್ದರು. 44 ಮಂದಿ ದೆಹಲಿಯಲ್ಲಿ ವಿಚಾರಣೆ ಎದುರಿಸಲು ನಿರ್ಧರಿಸಿದ್ದರು. ಇವರಲ್ಲಿ ಎಂಟು ಮಂದಿಯನ್ನು ಬಿಡುಗಡೆ ಮಾಡಿದ್ದ ನ್ಯಾಯಾಲಯವು ಇವರ ವಿರುದ್ಧ ಯಾವುದೇ ಪ್ರಮುಖ ಸಾಕ್ಷ್ಯಗಳಿಲ್ಲ ಎಂದು ಹೇಳಿತ್ತು.

ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ವಿದೇಶಿಯರ ಕಾಯ್ದೆಯ ಸೆಕ್ಷನ್ 14 ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್ 270 ಮತ್ತು 271ರ ಅಡಿಯಲ್ಲಿ ಇವರನ್ನು ಬಿಡುಗಡೆ ಮಾಡಿತ್ತು. ಆದಾಗ್ಯೂ ಇವರ ಮೇಲೆ ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ ಅಡಿಯಲ್ಲಿ ದೋಷಾರೋಪ ಇತ್ತು.

36 ವಿದೇಶಿಯರನ್ನು ಆರೋಪ ಮುಕ್ತಗೊಳಿಸಿ ಆದೇಶ ನೀಡಿದ ಚೀಫ್ ಮೆಟ್ರೊಪಾಲಿನ್ ಮೆಜಿಸ್ಟ್ರೇಟ್ ಗುರ್ ಮೋಹಿನಾ ಕೌರ್, ಸಂಪೂರ್ಣ ಚಾರ್ಜ್‌ಶೀಟ್ ಮತ್ತು ಅದಕ್ಕೆ ಲಗತ್ತಿಸಲಾದ ದಾಖಲೆಗಳು ಸಂಬಂಧಿತ ಅವಧಿಯಲ್ಲಿ ಇವರು ಮರ್ಕಜ್​ನಲ್ಲಿ ಭಾಗವಹಿಸಿರುವುದಾಗಿ ತೋರಿಸುವುದಿಲ್ಲ. ಆರೋಪದಲ್ಲಿ ಹೇಳಿದಂತೆ ಇವರು ತಬ್ಲೀಗಿ ಕೆಲಸದಲ್ಲಿ ಭಾಗಿಯಾಗಿದ್ದಾರೆ ಎಂದು ತೋರಿಸಲು ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದ್ದಾರೆ.

ರಿಜಿಸ್ಟರ್​ಗಳ ಪ್ರತಿಯನ್ನು ವಶಪಡಿಸಿಕೊಳ್ಳುವುದಾಗಲೀ, ರೆಕಾರ್ಡ್​ನಲ್ಲಿರಿಸುವುದಾಗಲೀ ಮಾಡಿಲ್ಲ. ಮರ್ಕಜ್​ನಿಂದ ಆಸ್ಪತ್ರೆಗೆ ಅಥವಾ ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಿದ ಪಟ್ಟಿಯಲ್ಲಿ ಈ ಮಾಹಿತಿ ಇಲ್ಲ ಅಥವಾ ಮರ್ಕಜ್​ನಲ್ಲಿ ಭಾಗಿಯಾದವರ ಪಟ್ಟಿಯೂ ಇಲ್ಲ. ಆರೋಪಗಳ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ, ಐವರು ವಿದೇಶಿ ತಬ್ಲಿಘಿಗಳಿಗೆ ಶಿಕ್ಷೆ

Published On - 8:06 pm, Tue, 15 December 20

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ