AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಗಿಲು ತೆರೆಯಲಿವೆ ಕೇಂದ್ರ ಸಂರಕ್ಷಿತ ಸ್ಮಾರಕಗಳು; ಜೂ.16ರಿಂದ ತಾಜ್​ಮಹಲ್​ ಭೇಟಿಗೆ ಅವಕಾಶ

ದೇಶಾದ್ಯಂತ ಸುಮಾರು 3691 ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು, ಪುರಾತತ್ವ ಸ್ಥಳಗಳು ಇವೆ. ಕಳೆದವರ್ಷ ಮಾರ್ಚ್​ 17ರಿಂದ ಇವೆಲ್ಲವನ್ನೂ ಬಂದ್​ ಮಾಡಿ, ಜುಲೈ 6ರಿಂದ ಮತ್ತೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮತ್ತೆ ಬಾಗಿಲು ತೆರೆಯಲಿವೆ ಕೇಂದ್ರ ಸಂರಕ್ಷಿತ ಸ್ಮಾರಕಗಳು; ಜೂ.16ರಿಂದ ತಾಜ್​ಮಹಲ್​ ಭೇಟಿಗೆ ಅವಕಾಶ
ತಾಜ್​ಮಹಲ್​
TV9 Web
| Edited By: |

Updated on: Jun 15, 2021 | 9:53 AM

Share

ಕೊವಿಡ್​ 19 ಎರಡನೇ ಅಲೆ ಉಲ್ಬಣಗೊಂಡ ಬೆನ್ನಲ್ಲೇ ಬಾಗಿಲು ಮುಚ್ಚಲ್ಪಟ್ಟಿದ್ದ ಕೇಂದ್ರ ಸಂರಕ್ಷಿತ ಸ್ಮಾರಕಗಳು ಜೂ.16(ನಾಳೆ)ರಿಂದ ಮತ್ತೆ ತೆರೆಯಲಿವೆ ಎಂದು ಭಾರತೀಯ ಪುರಾತತ್ವ ಇಲಾಖೆ (ASI) ತಿಳಿಸಿದೆ. ತಾಜ್​ ಮಹಲ್​ ಸೇರಿ ಎಲ್ಲ ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು ಓಪನ್​ ಆಗಲಿದ್ದು, ಪ್ರವಾಸಿಗರು ಆನ್​​ಲೈನ್​ ಮೂಲಕ ಪ್ರವೇಶ ಟಿಕೆಟ್​ ಬುಕ್​ ಮಾಡಿಕೊಳ್ಳಬಹುದಾಗಿದೆ.

ಏಪ್ರಿಲ್​​ನಿಂದ ಕೊವಿಡ್​ 19 ಸೋಂಕು ಅತ್ಯಂತ ಹೆಚ್ಚಾಗಿ ಬಾಧಿಸಲು ಶುರವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ, ತಾಜ್​ಮಹಲ್​, ಅಜಂತಾ ಸೇರಿ ಎಲ್ಲ ಕೇಂದ್ರಸಂರಕ್ಷಿತ ತಾಣಗಳನ್ನೂ ಬಂದ್​ ಮಾಡುವುದಾಗಿ ಏಪ್ರಿಲ್​ 15ರಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಲ್ಹಾದ್ ಸಿಂಗ್​ ಏಪ್ರಿಲ್​ 15ರಂದು ಹೇಳಿದ್ದರು. ಇದೀಗ ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕ್ರಮೇಣ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಂಡು ಮತ್ತೆ ತೆರೆಯುವುದಾಗಿ ಸಚಿವಾಲಯ ತಿಳಿಸಿದೆ. ಕಳೆದವರ್ಷವೂ ಸಹ ದೇಶಾದ್ಯಂತ ಲಾಕ್​ಡೌನ್​ ಇದ್ದ ಕಾರಣ 100 ದಿನಗಳ ಕಾಲದ ತಾಜ್​ಮಹಲ್​, ಕೆಂಪುಕೋಟೆ ಸೇರಿ ಎಲ್ಲ ತಾಣಗಳಿಗೂ ಪ್ರವೇಶ ನಿರ್ಬಂಧಿಸಲಾಗಿತ್ತು.

ದೇಶಾದ್ಯಂತ ಸುಮಾರು 3691 ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು, ಪುರಾತತ್ವ ಸ್ಥಳಗಳು ಇವೆ. ಕಳೆದವರ್ಷ ಮಾರ್ಚ್​ 17ರಿಂದ ಇವೆಲ್ಲವನ್ನೂ ಬಂದ್​ ಮಾಡಿ, ಜುಲೈ 6ರಿಂದ ಮತ್ತೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ತಾಜ್​ಮಹಲ್​ ಕಂಟೇನ್​​ಮೆಂಟ್​ ವಲಯವಾಗಿ, ಸೆಪ್ಟೆಂಬರ್​ನಲ್ಲಿ ತೆರೆಯಲ್ಪಟ್ಟಿತ್ತು. ನಮ್ಮ ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ತಾಜ್​ಮಹಲ್​ಗೆ ವಾರ್ಷಿಕವಾಗಿ 70-80 ಲಕ್ಷ ಜನರು ಭೇಟಿಕೊಡುತ್ತಾರೆ. ಆದಾಯದ ಪ್ರಮುಖ ತಾಣವಾಗಿದೆ.

ಇದನ್ನೂ ಓದಿ: Karnataka Weather: ಕರಾವಳಿ ಜಿಲ್ಲೆಗಳು -ಮಲೆನಾಡು ಘಟ್ಟಗಳಲ್ಲಿ ಇನ್ನೂ 3 ದಿನ ಮುಂಗಾರು ಅಬ್ಬರ, ಆರೆಂಜ್ ಅಲರ್ಟ್​​

Taj Mahal and other centrally protected monuments will reopen on June 16

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?