AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಗಿಲು ತೆರೆಯಲಿವೆ ಕೇಂದ್ರ ಸಂರಕ್ಷಿತ ಸ್ಮಾರಕಗಳು; ಜೂ.16ರಿಂದ ತಾಜ್​ಮಹಲ್​ ಭೇಟಿಗೆ ಅವಕಾಶ

ದೇಶಾದ್ಯಂತ ಸುಮಾರು 3691 ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು, ಪುರಾತತ್ವ ಸ್ಥಳಗಳು ಇವೆ. ಕಳೆದವರ್ಷ ಮಾರ್ಚ್​ 17ರಿಂದ ಇವೆಲ್ಲವನ್ನೂ ಬಂದ್​ ಮಾಡಿ, ಜುಲೈ 6ರಿಂದ ಮತ್ತೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮತ್ತೆ ಬಾಗಿಲು ತೆರೆಯಲಿವೆ ಕೇಂದ್ರ ಸಂರಕ್ಷಿತ ಸ್ಮಾರಕಗಳು; ಜೂ.16ರಿಂದ ತಾಜ್​ಮಹಲ್​ ಭೇಟಿಗೆ ಅವಕಾಶ
ತಾಜ್​ಮಹಲ್​
TV9 Web
| Updated By: Lakshmi Hegde|

Updated on: Jun 15, 2021 | 9:53 AM

Share

ಕೊವಿಡ್​ 19 ಎರಡನೇ ಅಲೆ ಉಲ್ಬಣಗೊಂಡ ಬೆನ್ನಲ್ಲೇ ಬಾಗಿಲು ಮುಚ್ಚಲ್ಪಟ್ಟಿದ್ದ ಕೇಂದ್ರ ಸಂರಕ್ಷಿತ ಸ್ಮಾರಕಗಳು ಜೂ.16(ನಾಳೆ)ರಿಂದ ಮತ್ತೆ ತೆರೆಯಲಿವೆ ಎಂದು ಭಾರತೀಯ ಪುರಾತತ್ವ ಇಲಾಖೆ (ASI) ತಿಳಿಸಿದೆ. ತಾಜ್​ ಮಹಲ್​ ಸೇರಿ ಎಲ್ಲ ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು ಓಪನ್​ ಆಗಲಿದ್ದು, ಪ್ರವಾಸಿಗರು ಆನ್​​ಲೈನ್​ ಮೂಲಕ ಪ್ರವೇಶ ಟಿಕೆಟ್​ ಬುಕ್​ ಮಾಡಿಕೊಳ್ಳಬಹುದಾಗಿದೆ.

ಏಪ್ರಿಲ್​​ನಿಂದ ಕೊವಿಡ್​ 19 ಸೋಂಕು ಅತ್ಯಂತ ಹೆಚ್ಚಾಗಿ ಬಾಧಿಸಲು ಶುರವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ, ತಾಜ್​ಮಹಲ್​, ಅಜಂತಾ ಸೇರಿ ಎಲ್ಲ ಕೇಂದ್ರಸಂರಕ್ಷಿತ ತಾಣಗಳನ್ನೂ ಬಂದ್​ ಮಾಡುವುದಾಗಿ ಏಪ್ರಿಲ್​ 15ರಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಲ್ಹಾದ್ ಸಿಂಗ್​ ಏಪ್ರಿಲ್​ 15ರಂದು ಹೇಳಿದ್ದರು. ಇದೀಗ ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕ್ರಮೇಣ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಂಡು ಮತ್ತೆ ತೆರೆಯುವುದಾಗಿ ಸಚಿವಾಲಯ ತಿಳಿಸಿದೆ. ಕಳೆದವರ್ಷವೂ ಸಹ ದೇಶಾದ್ಯಂತ ಲಾಕ್​ಡೌನ್​ ಇದ್ದ ಕಾರಣ 100 ದಿನಗಳ ಕಾಲದ ತಾಜ್​ಮಹಲ್​, ಕೆಂಪುಕೋಟೆ ಸೇರಿ ಎಲ್ಲ ತಾಣಗಳಿಗೂ ಪ್ರವೇಶ ನಿರ್ಬಂಧಿಸಲಾಗಿತ್ತು.

ದೇಶಾದ್ಯಂತ ಸುಮಾರು 3691 ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು, ಪುರಾತತ್ವ ಸ್ಥಳಗಳು ಇವೆ. ಕಳೆದವರ್ಷ ಮಾರ್ಚ್​ 17ರಿಂದ ಇವೆಲ್ಲವನ್ನೂ ಬಂದ್​ ಮಾಡಿ, ಜುಲೈ 6ರಿಂದ ಮತ್ತೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ತಾಜ್​ಮಹಲ್​ ಕಂಟೇನ್​​ಮೆಂಟ್​ ವಲಯವಾಗಿ, ಸೆಪ್ಟೆಂಬರ್​ನಲ್ಲಿ ತೆರೆಯಲ್ಪಟ್ಟಿತ್ತು. ನಮ್ಮ ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ತಾಜ್​ಮಹಲ್​ಗೆ ವಾರ್ಷಿಕವಾಗಿ 70-80 ಲಕ್ಷ ಜನರು ಭೇಟಿಕೊಡುತ್ತಾರೆ. ಆದಾಯದ ಪ್ರಮುಖ ತಾಣವಾಗಿದೆ.

ಇದನ್ನೂ ಓದಿ: Karnataka Weather: ಕರಾವಳಿ ಜಿಲ್ಲೆಗಳು -ಮಲೆನಾಡು ಘಟ್ಟಗಳಲ್ಲಿ ಇನ್ನೂ 3 ದಿನ ಮುಂಗಾರು ಅಬ್ಬರ, ಆರೆಂಜ್ ಅಲರ್ಟ್​​

Taj Mahal and other centrally protected monuments will reopen on June 16

ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ