AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್ ರಹಸ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತೀರ್ಮಾನ

ವಿವಾದ ಶಾಶ್ವತವಾಗಿ ಕೊನೆಯಾಗಬೇಕು. ಹೀಗಾಗಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದಾಗಿ ಡಾ.ರಜನೀಶ್ ಸಿಂಗ್​ ಹೇಳಿದ್ದಾರೆ.

ತಾಜ್​ಮಹಲ್ ರಹಸ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತೀರ್ಮಾನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 13, 2022 | 9:10 AM

Share

ಲಖನೌ: ತಾಜ್​ಮಹಲ್​ನ 22 ಕೋಣೆಗಳ ಬೀಗ ತೆರೆದು ಪರಿಶೀಲನೆಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎನ್ನುವ ಅಲಹಾಬಾದ್​ ಹೈಕೋರ್ಟ್​ನ ಲಖನೌ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರ ಡಾ.ರಜನೀಶ್ ಸಿಂಗ್ ತೀರ್ಮಾನಿಸಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ಮೂಲದವರಾಗಿರುವ ರಜನೀಶ್ ಸಿಂಗ್​ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ಉಸ್ತುವಾರಿಯಾಗಿದ್ದಾರೆ. ಅಲಹಾಬಾದ್ ತೀರ್ಪು ಪ್ರಶ್ನಿಸಿ, ಸುಪ್ರೀಂಕೋರ್ಟ್​ ಮೊರೆ ಹೋಗುವುದಾಗಿ ಅವರು ಘೋಷಿಸಿದ್ದಾರೆ. ತಾಜ್​ ಮಹಲ್​ನ 22 ಕೊಠಡಿಗಳಿಗೆ ಹಾಕಿರುವ ಬೀಗ ತೆರೆಯಬೇಕು. ಜನರಿಗೆ ಸತ್ಯ ಗೊತ್ತಾಗಬೇಕು, ವಿವಾದ ಶಾಶ್ವತವಾಗಿ ಕೊನೆಯಾಗಬೇಕು. ಹೀಗಾಗಿ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದಾಗಿ ಡಾ.ರಜನೀಶ್ ಸಿಂಗ್​ ಹೇಳಿದ್ದಾರೆ.

ತಾಜ್​ಮಹಲ್ ಕುರಿತು ಮತ್ತಷ್ಟು ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

ಸತ್ಯ ಏನಿದ್ರೂ ಪರವಾಗಿಲ್ಲ, ಕೊಠಡಿಗಳ ಬೀಗ ತೆರೆಸಿ

ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ ತಿಳಿಯಬೇಕಿದೆ. ಹೀಗಾಗಿಯೇ ತಾಜ್​ ಮಹಲ್​ನ 22 ಕೊಠಡಿಗಳ ಬೀಗ ತೆರೆಯಬೇಕು ಎಂದು ಅರ್ಜಿ ಸಲ್ಲಿಸಿದ್ದೇನೆ’ ಎಂದು ರಜನೀಶ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪುರಾತತ್ವ ಮತ್ತು ಐತಿಹಾಸಿಕ ಸ್ಮಾರಕಗಳ ಕಾಯ್ದೆ (1951) ಹಾಗೂ ಪುರಾತತ್ವ ಮತ್ತು ಪ್ರಾಚೀನ ಸ್ಮಾರಕಗಳ ಕಾಯ್ದೆಯ (1958) ಕೆಲ ಅಂಶಗಳನ್ನು ತಾಜ್ ಮಹಲ್ ವಿಚಾರದಲ್ಲಿ ಕೈಬಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಕಾಯ್ದೆಗಳ ಅನ್ವಯವೇ ತಾಜ್​ಮಹಲ್, ಫತೇಪುರ್ ಸಿಕ್ರಿ, ಆಗ್ರಾ ಕೋಟೆ, ಇತಿಮದ್-ಉದ್-ದೌಲಾ ಸಮಾಧಿ ಇರುವ ಸ್ಥಳಗಳನ್ನು ಐತಿಹಾಸಿಕ ಸ್ಮಾರಕಗಳು ಎಂದು ಘೋಷಿಸಲಾಗಿದೆ.

ತಾಜ್​ ಮಹಲ್ ಸ್ಮಾರಕವಿರುವ ಸ್ಥಳದಲ್ಲಿ ಪ್ರಾಚೀನ ಶಿವ ದೇವಾಲಯವಿತ್ತು ಎಂದು ಹಲವು ಬಲಪಂಥೀಯ ಸಂಘಟನೆಗಳು ಪ್ರತಿಪಾದಿಸುತ್ತಿವೆ. ಇದೇ ಅಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯೂ ಪ್ರಸ್ತಾಪಿಸಿದೆ. ವಕೀಲರಾದ ರಾಮ್ ಪ್ರಕಾಶ್ ಶುಕ್ಲ ಮತ್ತು ರುದ್ರ ವಿಕ್ರಮ್ ಸಿಂಗ್ ಅರ್ಜಿದಾರರ ಪರವಾಗಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Fri, 13 May 22

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ