AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್ ರಹಸ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತೀರ್ಮಾನ

ವಿವಾದ ಶಾಶ್ವತವಾಗಿ ಕೊನೆಯಾಗಬೇಕು. ಹೀಗಾಗಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದಾಗಿ ಡಾ.ರಜನೀಶ್ ಸಿಂಗ್​ ಹೇಳಿದ್ದಾರೆ.

ತಾಜ್​ಮಹಲ್ ರಹಸ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತೀರ್ಮಾನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 13, 2022 | 9:10 AM

Share

ಲಖನೌ: ತಾಜ್​ಮಹಲ್​ನ 22 ಕೋಣೆಗಳ ಬೀಗ ತೆರೆದು ಪರಿಶೀಲನೆಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎನ್ನುವ ಅಲಹಾಬಾದ್​ ಹೈಕೋರ್ಟ್​ನ ಲಖನೌ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರ ಡಾ.ರಜನೀಶ್ ಸಿಂಗ್ ತೀರ್ಮಾನಿಸಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ಮೂಲದವರಾಗಿರುವ ರಜನೀಶ್ ಸಿಂಗ್​ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ಉಸ್ತುವಾರಿಯಾಗಿದ್ದಾರೆ. ಅಲಹಾಬಾದ್ ತೀರ್ಪು ಪ್ರಶ್ನಿಸಿ, ಸುಪ್ರೀಂಕೋರ್ಟ್​ ಮೊರೆ ಹೋಗುವುದಾಗಿ ಅವರು ಘೋಷಿಸಿದ್ದಾರೆ. ತಾಜ್​ ಮಹಲ್​ನ 22 ಕೊಠಡಿಗಳಿಗೆ ಹಾಕಿರುವ ಬೀಗ ತೆರೆಯಬೇಕು. ಜನರಿಗೆ ಸತ್ಯ ಗೊತ್ತಾಗಬೇಕು, ವಿವಾದ ಶಾಶ್ವತವಾಗಿ ಕೊನೆಯಾಗಬೇಕು. ಹೀಗಾಗಿ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವುದಾಗಿ ಡಾ.ರಜನೀಶ್ ಸಿಂಗ್​ ಹೇಳಿದ್ದಾರೆ.

ತಾಜ್​ಮಹಲ್ ಕುರಿತು ಮತ್ತಷ್ಟು ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

ಸತ್ಯ ಏನಿದ್ರೂ ಪರವಾಗಿಲ್ಲ, ಕೊಠಡಿಗಳ ಬೀಗ ತೆರೆಸಿ

ತಾಜ್​ಮಹಲ್​ ಕುರಿತ ಸತ್ಯ ಎಲ್ಲರಿಗೂ ಅರ್ಥವಾಗಬೇಕು. ತಾಜ್​ಮಹಲ್​ನ ಯಥಾರ್ಥ ಇತಿಹಾಸವನ್ನು ಜನರ ಎದುರು ತೆರೆದಿಡಲು ಸತ್ಯಶೋಧನ ಸಮಿತಿ ರಚಿಸಬೇಕು. ಸದಾ ಬೀಗ ಹಾಕಿರುವ 22 ಕೊಠಡಿಗಳ ಬೀಗಗಳನ್ನು ತೆರೆಯಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಬಿಜೆಪಿ ಅಯೋಧ್ಯೆ ಘಟಕದ ಮಾಧ್ಯಮ ಪ್ರಮುಖ್ ರಜನೀಶ್ ಸಿಂಗ್ ಈ ಸಂಬಂಧ ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಾಥಮಿಕ ಪರಿಶೀಲನೆಯ ನಂತರ ಈ ಅರ್ಜಿಯು ವಿಚಾರಣೆಗೆ ಬರಲಿದೆ. ‘ಸತ್ಯ ಏನಿದ್ದರೂ ಸರಿ, ಅದು ಜನರಿಗೆ ತಿಳಿಯಬೇಕಿದೆ. ಹೀಗಾಗಿಯೇ ತಾಜ್​ ಮಹಲ್​ನ 22 ಕೊಠಡಿಗಳ ಬೀಗ ತೆರೆಯಬೇಕು ಎಂದು ಅರ್ಜಿ ಸಲ್ಲಿಸಿದ್ದೇನೆ’ ಎಂದು ರಜನೀಶ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪುರಾತತ್ವ ಮತ್ತು ಐತಿಹಾಸಿಕ ಸ್ಮಾರಕಗಳ ಕಾಯ್ದೆ (1951) ಹಾಗೂ ಪುರಾತತ್ವ ಮತ್ತು ಪ್ರಾಚೀನ ಸ್ಮಾರಕಗಳ ಕಾಯ್ದೆಯ (1958) ಕೆಲ ಅಂಶಗಳನ್ನು ತಾಜ್ ಮಹಲ್ ವಿಚಾರದಲ್ಲಿ ಕೈಬಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈ ಕಾಯ್ದೆಗಳ ಅನ್ವಯವೇ ತಾಜ್​ಮಹಲ್, ಫತೇಪುರ್ ಸಿಕ್ರಿ, ಆಗ್ರಾ ಕೋಟೆ, ಇತಿಮದ್-ಉದ್-ದೌಲಾ ಸಮಾಧಿ ಇರುವ ಸ್ಥಳಗಳನ್ನು ಐತಿಹಾಸಿಕ ಸ್ಮಾರಕಗಳು ಎಂದು ಘೋಷಿಸಲಾಗಿದೆ.

ತಾಜ್​ ಮಹಲ್ ಸ್ಮಾರಕವಿರುವ ಸ್ಥಳದಲ್ಲಿ ಪ್ರಾಚೀನ ಶಿವ ದೇವಾಲಯವಿತ್ತು ಎಂದು ಹಲವು ಬಲಪಂಥೀಯ ಸಂಘಟನೆಗಳು ಪ್ರತಿಪಾದಿಸುತ್ತಿವೆ. ಇದೇ ಅಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯೂ ಪ್ರಸ್ತಾಪಿಸಿದೆ. ವಕೀಲರಾದ ರಾಮ್ ಪ್ರಕಾಶ್ ಶುಕ್ಲ ಮತ್ತು ರುದ್ರ ವಿಕ್ರಮ್ ಸಿಂಗ್ ಅರ್ಜಿದಾರರ ಪರವಾಗಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Fri, 13 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!