AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾ: ವಿಶ್ವ ಪ್ರಸಿದ್ಧ ತಾಜ್​ಮಹಲ್​ಗೆ ಬಾಂಬ್ ಬೆದರಿಕೆ; ಪ್ರವಾಸಿಗರು ಹೊರಕ್ಕೆ – ಹುಸಿ ಕರೆ ಮಾಡಿದ ವ್ಯಕ್ತಿ ಅಂದರ್

ತಕ್ಷಣ ಕಾರ್ಯಪ್ರವೃತ್ತವಾದ ಕೇಂದ್ರ ಕೈಗಾರಿಕಾ ಪಡೆಯ ಭದ್ರತಾ ಸಿಬ್ಬಂದಿ ಬಾಂಬ್ ಇರುವ ಕುರಿತು ಹುಡುಕಾಟ ನಡೆಸಿದ್ದಾರೆ. ಆದರೆ ಕಾರ್ಯಾಚರಣೆಯಲ್ಲಿ ಯಾವುದೇ ಬಾಂಬ್ ಅಥವಾ ಸ್ಫೋಟಕ ಪತ್ತೆಯಾಗಿಲ್ಲ.

ಆಗ್ರಾ: ವಿಶ್ವ ಪ್ರಸಿದ್ಧ ತಾಜ್​ಮಹಲ್​ಗೆ ಬಾಂಬ್ ಬೆದರಿಕೆ; ಪ್ರವಾಸಿಗರು ಹೊರಕ್ಕೆ - ಹುಸಿ ಕರೆ ಮಾಡಿದ ವ್ಯಕ್ತಿ ಅಂದರ್
ತಾಜ್​ಮಹಲ್
Follow us
guruganesh bhat
|

Updated on:Mar 04, 2021 | 1:38 PM

ಆಗ್ರಾ: ವಿಶ್ವ ಪ್ರಸಿದ್ಧ ತಾಜ್​ಮಹಲ್​ನಲ್ಲಿ ಬಾಂಬ್ ಇದೆ ಎಂಬ ಕರೆ ಬಂದ ಬೆನ್ನಲ್ಲೇ ಸ್ಮಾರಕದೊಳಗಿದ್ದ ಸುಮಾರು 1,000 ಪ್ರವಾಸಿಗರನ್ನು ಖಾಲಿ ಮಾಡಿ ತಪಾಸಣೆ ನಡೆಸಿದ ಘಟನೆ ಇಂದು ನಡೆದಿದೆ. ಬೆಳಗ್ಗೆ 9 ಗಂಟೆಯ ಹೊತ್ತಿಗೆ ಉತ್ತರ ಪ್ರದೇಶ ಪೊಲೀಸರ ಸಹಾಯವಾಣಿ 112ಕ್ಕೆ ಅನಾಮಿಕ ಕರೆಯೊಂದು ಬಂದಿದೆ. ಕರೆ ಮಾಡಿದ ಅನಾಮಿಕ ವ್ಯಕ್ತಿ ತಾಜ್ ಮಹಲ್​ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನದ ಹೊತ್ತಿಗೆ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥನಂತೆ ಕಂಡುಬಂದಿದ್ದಾನೆ ಎಂದು  ಆಗ್ರಾ ಆರಕ್ಷಕ ವಿಭಾಗದ ಎಡಿಜಿಪಿ ಸತೀಶ್ ಗಣೇಶ್ ತಿಳಿಸಿದ್ದಾರೆ.  ಆತನಿಂದ ವಿವರಗಳನ್ನು ತಿಳಿಯಲು ಪೊಲೀಸ್ ತಂಡ ಕಾರ್ಯನಿರತವಾಗಿದ್ದು,  ಹುಸಿಕರೆ ಹಿಂದಿನ ಉದ್ದೇಶಗಳನ್ನು ತಿಳಿಸಲು ಸಂಪೂರ್ಣ ತನಿಖೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಕ್ಷಣ ಎಚ್ಚೆತ್ತ ಪೊಲೀಸರು ನೆರೆದಿದ್ದ ಪ್ರವಾಸಿಗರನ್ನು ಹೊರ ಕಳುಹಿಸಿ ತಪಾಸಣೆ ನಡೆಸಿದ್ದಾರೆ. ಆದರೆ ತಾಜ್​ಮಹಲ್​ನಲ್ಲಿ ಯಾವುದೇ ಬಾಂಬ್ ಅಥವಾ ಸ್ಫೋಟಕವೂ ಪತ್ತೆಯಾಗದ ಕಾರಣ ಅನಾಮಿಕ ವ್ಯಕ್ತಿಯ ಕರೆಯನ್ನು ಹುಸಿ ಕರೆ ಎಂದು ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ತಾಜ್​ಮಹಲ್ ಭಾರತೀಯ ಪುರಾತತ್ವ ಇಲಾಖೆಯ ನಿರ್ವಹಣೆಯಲ್ಲಿದೆ.

ಪೊಲೀಸರು ತಾಜ್​ಮಹಲ್​ನಲ್ಲಿ ಬಾಂಬ್ ಇರುವ ಕುರಿತು ಕರೆ ಬಂದ ತಕ್ಷಣ ತಾಜ್​ಮಹಲ್​ನ ಸುರಕ್ಷತೆಯ ಜವಾಬ್ಧಾರಿ ಹೊಂದಿರುವ ಕೇಂದ್ರ ಕೈಗಾರಿಕಾ ಪಡೆಯ ಭದ್ರತಾ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತವಾದ ಕೇಂದ್ರ ಕೈಗಾರಿಕಾ ಪಡೆಯ ಭದ್ರತಾ ಸಿಬ್ಬಂದಿ ಬಾಂಬ್ ಇರುವ ಕುರಿತು ಹುಡುಕಾಟ ನಡೆಸಿದ್ದಾರೆ. ಆದರೆ ಕಾರ್ಯಾಚರಣೆಯಲ್ಲಿ ಯಾವುದೇ ಬಾಂಬ್ ಅಥವಾ ಸ್ಫೋಟಕ ಪತ್ತೆಯಾಗಿಲ್ಲ.

ಭಾರತೀಯ ಪುರಾತತ್ವ ಇಲಾಖೆಯ ನಿರ್ವಹಣೆಯಲ್ಲಿರುವ ತಾಜ್​ಮಹಲ್​ಗೆ ಬಾಂಬ್ ಬೆದರಿಕೆ ಬಂದ ನಂತರ ಪೊಲೀಸರು ಸಂಪೂರ್ಣ ತಪಾಸಣೆ ನಡೆಸಿದ್ದಾರೆ. ಯಾವುದೇ ಸಂಶಯಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗದ ಕಾರಣ ಪ್ರವಾಸಿಗರಿಗೆ ಐತಿಹಾಸಿಕ ಸ್ಮಾರಕವನ್ನು ಕಣ್ತುಂಬಿಕೊಳ್ಳುವ ಅವಕಾಶ ಮತ್ತೆ ದೊರೆತಿದೆ.

ಇದನ್ನೂ ಓದಿ: Valentine’s Day 2021 | ಪ್ರೇಮಿಗಳ ದಿನ 2021; ಲಾಕ್​ಡೌನ್ ನನ್ನ ಪ್ರೀತಿಯನ್ನು ಫ್ಲಾಪ್ ಮಾಡಿತು..

ರೈತರ ಜಮೀನಿನಲ್ಲಿ ಅರಳಿದೆ ಲಕ್ಕೂರು ಗುಲಾಬಿ: ಕೆಂಪು ರೋಜಾಗೆ ಫೆಬ್ರವರಿಯಲ್ಲಿ ಹೆಚ್ಚಿದ ಬೇಡಿಕೆ

Published On - 1:32 pm, Thu, 4 March 21

ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?