Sign In

By signing in or creating an account, you agree with Associated Broadcasting Company's Terms & Conditions and Privacy Policy.

Taj Mahal: ತಾಜ್ ಮಹಲ್‌ಗೆ ಬಾಂಬ್ ಬೆದರಿಕೆ; ಆಗ್ರಾ ಪೊಲೀಸರಿಂದ ಬಿಗಿ ಭದ್ರತೆ

ವಿಶ್ವವಿಖ್ಯಾತ ತಾಜ್ ಮಹಲ್​ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆಗ್ರಾ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ತಾಜ್ ಮಹಲ್ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಮೇಲ್ ಮೂಲಕ ಬೆದರಿಕೆ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಮೇಲ್ ಸ್ವೀಕರಿಸಿದ ಕೂಡಲೇ ಭದ್ರತಾ ಅಧಿಕಾರಿಗಳು ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್ ಮಹಲ್ ಸ್ಮಾರಕದ ಮೂಲೆ ಮೂಲೆಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.

Taj Mahal: ತಾಜ್ ಮಹಲ್‌ಗೆ ಬಾಂಬ್ ಬೆದರಿಕೆ; ಆಗ್ರಾ ಪೊಲೀಸರಿಂದ ಬಿಗಿ ಭದ್ರತೆ
ತಾಜ್ ಮಹಲ್
Follow us
ಸುಷ್ಮಾ ಚಕ್ರೆ
|

Updated on: Dec 03, 2024 | 5:29 PM

ಆಗ್ರಾ: ಆಗ್ರಾದ ತಾಜ್‌ಮಹಲ್‌ನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ನಂತರ ಅದು ಸುಳ್ಳು ಕರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗ್ರಾದ ತಾಜ್ ಮಹಲ್‌ಗೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. “ಪ್ರವಾಸೋದ್ಯಮ ಇಲಾಖೆಗೆ ಇಮೇಲ್ ಬಂದಿದೆ. ಅದರ ಆಧಾರದ ಮೇಲೆ ತಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಂಡ ಮತ್ತು ಸ್ಥಳೀಯ ಪೊಲೀಸರು ಮೊಘಲ್ ಸ್ಮಾರಕವಾದ ತಾಜ್ ಮಹಲ್​ಗೆ ಧಾವಿಸಿ ದೇಶದ ಪ್ರಮುಖ ಪ್ರವಾಸಿ ಸ್ಥಳದ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಗ್ರಾದಲ್ಲಿರುವ ಉತ್ತರ ಪ್ರದೇಶ ಪ್ರವಾಸೋದ್ಯಮದ ಪ್ರಾದೇಶಿಕ ಕಚೇರಿಗೆ ಮಂಗಳವಾರ ತಾಜ್‌ಮಹಲ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದಿದ್ದು, ನಂತರ ಅದು ಸುಳ್ಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ತಾಜ್​ಮಹಲ್​ನ ಶಿವ ದೇವಾಲಯವೆಂದು ಕರೆದು ಗಂಗಾಜಲ ಸಿಂಪಡಿಸಲು ಹೋಗಿದ್ದ ಮಹಿಳೆ

ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳನ್ನು ಸೇವೆಗೆ ಕರೆದೊಯ್ದರೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ತಾಜ್‌ ಮಹಲ್​ನ ಭದ್ರತೆಯನ್ನು ವಹಿಸಿರುವ ಎಸಿಪಿ ತಿಳಿಸಿದ್ದಾರೆ.

“ತಾಜ್ ಮಹಲ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಉತ್ತರ ಪ್ರದೇಶ ಪ್ರವಾಸೋದ್ಯಮ ಕಚೇರಿಗೆ ಬಂದಿದೆ. ಇಮೇಲ್ ಪ್ರಕಾರ ನಮಗೆ ಏನೂ ಸಿಕ್ಕಿಲ್ಲ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಇತರ ತಂಡಗಳು ಸುರಕ್ಷತಾ ಪರಿಶೀಲನೆಗಾಗಿ ತಾಜ್ ಮಹಲ್ ತಲುಪಿವೆ” ಎಂದು ಅವರು ಹೇಳಿದ್ದಾರೆ.

ತಾಜ್ ಮಹಲ್ ಅನ್ನು ವಿಶ್ವದ 7 ಅದ್ಭುತಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹಜಹಾನ್ 1648ರಲ್ಲಿ ತನ್ನ ಪತ್ನಿ ಮುಮ್ತಾಜ್ ಮಹಲ್ ನೆನಪಿಗಾಗಿ ನಿರ್ಮಿಸಿದನು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?