AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taj Mahal: ವಿಶ್ವವಿಖ್ಯಾತ ತಾಜ್ ಮಹಲ್ ಪ್ರವಾಸಿಗರಿಗೆ ಓಪನ್; ಒಮ್ಮೆಗೆ 650 ಜನರ ಭೇಟಿಗೆ ಮಾತ್ರ ಅವಕಾಶ

ಈ ವರ್ಷದ ಮಾರ್ಚ್ ತಿಂಗಳಲ್ಲಿ ತಾಜ್ ಮಹಲ್ ಪ್ರವೇಶಕ್ಕೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿತ್ತು. ಈಗ ತಾಜ್ ಮಹಲ್​ಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

Taj Mahal: ವಿಶ್ವವಿಖ್ಯಾತ ತಾಜ್ ಮಹಲ್ ಪ್ರವಾಸಿಗರಿಗೆ ಓಪನ್; ಒಮ್ಮೆಗೆ 650 ಜನರ ಭೇಟಿಗೆ ಮಾತ್ರ ಅವಕಾಶ
ತಾಜ್​ಮಹಲ್​
TV9 Web
| Updated By: ganapathi bhat|

Updated on: Jun 16, 2021 | 3:06 PM

Share

ದೆಹಲಿ: ವಿಶ್ವವಿಖ್ಯಾತ ಪ್ರವಾಸಿ ತಾಣ ತಾಜ್‌ ಮಹಲ್ ಇಂದಿನಿಂದ ಪ್ರವಾಸಿಗರಿಗೆ ತೆರೆದುಕೊಳ್ಳಲಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್‌ ಮಹಲ್ ಇಂದಿನಿಂದ (ಜೂನ್ 16) ರಿ ಓಪನ್ ಆಗಲಿದೆ. ಹಾಗೆಂದು, ಪ್ರವಾಸಿಗರು ನೇರವಾಗಿ ತಾಜ್ ಮಹಲ್​ಗೆ ಭೇಟಿ ನೀಡುವಂತಿಲ್ಲ. ಆನ್​ಲೈನ್ ವಿಧಾನದ ಮೂಲಕ ತಾಜ್ ಮಹಲ್ ಪ್ರವೇಶಕ್ಕೆ ಟಿಕೆಟ್ ಕಾಯ್ದಿರಿಸಿಕೊಂಡು ಬಳಿಕ, ಸ್ಥಳಕ್ಕೆ ಭೇಟಿ ನೀಡಬಹುದಾಗಿದೆ.

ವಿಶ್ವದ ಎಂಟು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಭೇಟಿಗೆ ಆನ್‌ಲೈನ್‌ನಲ್ಲಿ ಪ್ರವೇಶ ಟಿಕೆಟ್ ಕಾಯ್ದಿರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಮಾಸ್ಕ್ ಧರಿಸದವರಿಗೆ ತಾಜ್‌ ಮಹಲ್‌ಗೆ ಪ್ರವೇಶವಿಲ್ಲ ಎಂದು ಸೂಚಿಸಲಾಗಿದೆ. ಒಮ್ಮೆಗೆ 650 ಜನರಿಗೆ ಮಾತ್ರ ತಾಜ್‌ ಮಹಲ್ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

ಈ ವರ್ಷದ ಮಾರ್ಚ್ ತಿಂಗಳಲ್ಲಿ ತಾಜ್ ಮಹಲ್ ಪ್ರವೇಶಕ್ಕೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿತ್ತು. ಈಗ ತಾಜ್ ಮಹಲ್​ಗೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಶೇಕಡಾ 84 ರಷ್ಟು ಪ್ರವಾಸಿಗರ ಸಂಖ್ಯೆ ಕುಸಿತ ಕಂಡಿದೆ.

2019 ರಲ್ಲಿ ಉತ್ತರಪ್ರದೇಶ ರಾಜ್ಯಕ್ಕೆ 54 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದರು. ಆದರೆ, 2020 ರಲ್ಲಿ 8.7 ಕೋಟಿ ಪ್ರವಾಸಿಗರು ಮಾತ್ರ ರಾಜ್ಯಕ್ಕೆ ಭೇಟಿ ‌ನೀಡಿದ್ದಾರೆ. ಆಗ್ರಾಗೆ 2019 ರಲ್ಲಿ 1.09 ಕೋಟಿ ಪ್ರವಾಸಿಗರು ಭೇಟಿ ನೀಡಿದ್ದರೆ, ಆಗ್ರಾಗೆ 2020 ರಲ್ಲಿ 27 ಲಕ್ಷ ಪ್ರವಾಸಿಗರು ಮಾತ್ರ ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬೌದ್ಧ ಧರ್ಮದ ಪ್ರೇಕ್ಷಣೀಯ ಸ್ಥಳಗಳು ಇವೆ. ಸಾರನಾಥ, ಕೌಶಂಭಿ, ಖುಷಿ ನಗರ ಕೂಡ ಪ್ರವಾಸಿ ಸ್ಥಳಗಳಾಗಿವೆ. ವಾರಾಣಸಿ ಹಿಂದೂ ಧಾರ್ಮಿಕ ಯಾತ್ರಾಸ್ಥಳವಾಗಿದೆ. 2019 ಪ್ರಯಾಗರಾಜ್, ಕುಂಭಮೇಳಕ್ಕೆ 24 ಕೋಟಿ ಪ್ರವಾಸಿಗರು ಆಗಮಿಸಿದ್ದರು. 2018 ರಲ್ಲಿ ಉತ್ತರಪ್ರದೇಶಕ್ಕೆ 29 ಕೋಟಿ ಪ್ರವಾಸಿಗರ ಭೇಟಿಯಾಗಿತ್ತು.

ಕೊರೊನಾ ಸೋಂಕು ಕಾರಣದಿಂದ ಪ್ರವಾಸೋದ್ಯಮ ಕೂಡ ಸಂಕಷ್ಟದ ಸ್ಥಿತಿ ಎದುರಿಸುತ್ತಿತ್ತು. 2020ರ ಬಳಿಕ ಪ್ರವಾಸೋದ್ಯಮ ಕುಸಿತ ಕಂಡಿತ್ತು. ಕೊರೊನಾ ಮೊದಲ ಅಲೆ ಚೇತರಿಕೆ ಬಳಿಕ ಮತ್ತೆ ಎರಡನೇ ಅಲೆ ಭಾರೀ ಹೊಡೆತ ನೀಡಿತ್ತು. ಇದೀಗ ಕೊವಿಡ್-19 ಎರಡನೇ ಅಲೆ ಇಳಿಕೆಯಾಗುತ್ತಿದ್ದಂತೆ, ವಿಶ್ವವಿಖ್ಯಾತ ತಾಜ್‌ ಮಹಲ್ ರಿ ಓಪನ್ ಆಗಿದೆ.

ಇದನ್ನೂ ಓದಿ: ಮತ್ತೆ ಬಾಗಿಲು ತೆರೆಯಲಿವೆ ಕೇಂದ್ರ ಸಂರಕ್ಷಿತ ಸ್ಮಾರಕಗಳು; ಜೂ.16ರಿಂದ ತಾಜ್​ಮಹಲ್​ ಭೇಟಿಗೆ ಅವಕಾಶ

ಗಟ್ಟಿಮೇಳ: ತಾಜ್ ಮಹಲ್ ಮುಂದೆ ಅಮೂಲ್ಯಾಗೆ ಪ್ರೇಮ ನಿವೇದನೆ ಮಾಡಲಿದ್ದಾರಾ ವೇದಾಂತ್?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು