AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ..ಗಾಳಿಯಲ್ಲೂ ಹರಡುತ್ತದೆ ಕೊರೊನಾ; ನೀವು ಸೋಂಕಿನಿಂದ ಪಾರಾಗಲು ತಪ್ಪದೆ ಈ ಮುನ್ನೆಚ್ಚರಿಕಾ ಕ್ರಮ ವಹಿಸಿ

ಕಳೆದ ಬಾರಿ ಕೊರೊನಾ ಶುರುವಾದಾಗಲೇ ಆರೋಗ್ಯ ಇಲಾಖೆ, ವಿಶ್ವ ಆರೋಗ್ಯ ಸಂಸ್ಥೆ ಹಾಗೇ ಹಲವು ಆರೋಗ್ಯ ತಜ್ಞರು ಹಲವು ಸಲಹೆಗಳನ್ನು ನೀಡಿದ್ದಾರೆ.

ಎಚ್ಚರ..ಗಾಳಿಯಲ್ಲೂ ಹರಡುತ್ತದೆ ಕೊರೊನಾ; ನೀವು ಸೋಂಕಿನಿಂದ ಪಾರಾಗಲು ತಪ್ಪದೆ ಈ ಮುನ್ನೆಚ್ಚರಿಕಾ ಕ್ರಮ ವಹಿಸಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 28, 2021 | 3:12 PM

Share

ಕೊವಿಡ್ 19 ಭೂಮಿಗೆ ಬಂದು ಒಂದು ವರ್ಷದ ಮೇಲಾಗಿದೆ. ಕಳೆದ ಬಾರಿ ಕೊರೊನಾ ಶುರುವಾದ ದಿನಗಳಲ್ಲಿ ಈ ಸೋಂಕು ಗಾಳಿಯಲ್ಲಿ ಹರಡುವುದಿಲ್ಲ. ಬದಲಿಗೆ ಒಬ್ಬ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ಹೊರಬರುವ ಡ್ರಾಪ್​​ಲೆಟ್​ಗಳು, ಆತನ ಎಂಜಲಿನಿಂದ ಇನ್ನೊಬ್ಬರಿಗೆ ಹರಡುತ್ತದೆ ಎಂದು ಹೇಳಲಾಗಿತ್ತು. ಆದರೆ ಇತ್ತೀಚಿಗಿನ ಅಧ್ಯಯನದ ಪ್ರಕಾರ ಕೊರೊನಾ ಸೋಂಕು ಗಾಳಿಯಲ್ಲೂ ಹರಡುತ್ತದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಸಿ ಇರುವ ಕ್ಯಾಬ್​, ಬಸ್​, ಶಾಪಿಂಗ್ ಮಾಲ್​, ಥಿಯೇಟ್​ಗಳಿಗೆ ಹೋಗುವುದು ಅಪಾಯಕಾರಿ ಎನ್ನಲಾಗುತ್ತಿದೆ. ಸೋಂಕಿತನೊಂದಿಗೆ ನೇರ ಸಂಪರ್ಕ ಹೊಂದದೆ ಇದ್ದರೂ ಕೊರೊನಾ ಮಹಾಮಾರಿ ತಗಲುವ ಸಾಧ್ಯತೆ ಹೆಚ್ಚಾಗಿಯೇ ಇರುತ್ತದೆ.

ಕೊರೊನಾ ಸೋಂಕಿನಿಂದ ಅಪಾಯ ಎಷ್ಟಿದೆ ಎಂಬುದು ಈಗಾಗಲೇ ಗೊತ್ತಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಸೋಂಕಿನಿಂದ ಪಾರಾಗುವುದೇ ಪ್ರಥಮ ಆದ್ಯತೆ ಆಗಬೇಕು ಎನ್ನುತ್ತಾರೆ ತಜ್ಞರು. ಹಾಗಿದ್ದಮೇಲೆ ಕೊರೊನಾ ವೈರಸ್​ನಿಂದ ಪಾರಾಗುವುದು ಹೇಗೆ? ಇಲ್ಲಿದೆ ನೋಡಿ ಒಂದಷ್ಟು ಮಾಹಿತಿ

1. ಎಷ್ಟಾಗತ್ತೋ ಅಷ್ಟು ಮನೆಯಲ್ಲೇ ಇರಿ. ಅದರಲ್ಲೂ ನೀವು 60-65 ವರ್ಷ ಆಸುಪಾಸಿನವರಾಗಿದ್ದರೆ ಯಾವ ಕಾರಣಕ್ಕೂ ಮನೆಯ ಹೊರಗೆ ಹೋಗಬೇಡಿ. ಹಾಗೇ, ನಿಮಗೆ ಡಯಾಬಿಟಿಸ್​, ಬಿಪಿ, ಹೈಪರ್​ಟೆನ್ಷನ್​ ಸೇರಿ ಮತ್ತಿತರ ಕಾಯಿಲೆಗಳಿದ್ದರೂ ಈ ಕೊವಿಡ್​ ಸಮಯದಲ್ಲಿ ಹೊರಗೆ ಹೋಗಬೇಡಿ.

2. ಇನ್ನು ನೀವು ಯಾವುದೇ ವಯಸ್ಸಿನವರಾದರೂ ಸರಿ, ದಿನದಲ್ಲಿ ಆಗಾಗ ಸೋಪು ನೀರು ಹಾಕಿ ಸ್ವಚ್ಛವಾಗಿ ಕೈ, ಮುಖಗಳನ್ನು ತೊಳೆಯಿರಿ. ಹೊರಗೆ ಹೋಗಿ ಬಂದರೆ ಕಾಲನ್ನೂ ತೊಳೆದುಕೊಳ್ಳಿ.

3. ಮನೆಯಿಂದ ಹೊರ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರಿಂದಲೂ 6 ಅಡಿ ಅಂತರ ಕಾಯ್ದುಕೊಳ್ಳಿ.

4. ಹವಾನಿಯಂತ್ರಿತ (ಎಸಿ) ಇರುವ ಕಚೇರಿಗಳು, ಮಾಲ್​, ಥಿಯೇಟ್​ಗಳಿಗೆ ಹೋಗಲೇಬೇಡಿ.

5. ಸಮತೋಲಿತ ಡಯಟ್​ ಮಾಡುವ ಮೂಲಕ ಪೋಷಕಾಂಶಗಳನ್ನು ಸರಿಯಾಗಿ ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ಜಾಸ್ತಿ ನೀರು ಕುಡಿಯಿರಿ. ತಾಜಾ ಹಣ್ಣಿನ ರಸ, ಅರಿಶಿಣ ಮಿಶ್ರಿತ ಹಾಲನ್ನು ಸೇವನೆ ಮಾಡಿದರೆ ಇಮ್ಯೂನಿಟಿ ಜಾಸ್ತಿಯಾಗುತ್ತದೆ.

6. ಹಾಗೇ ನಿಯಮಿತವಾಗಿ ಯೋಗ, ವ್ಯಾಯಾಮ, ಧ್ಯಾನ ಮಾಡಿ. ಕೊರೊನಾ ಲಕ್ಷಣ ಇರುವ ಜನರ ಹತ್ತಿರ ಹೋಗಲೇಬೇಡಿ.

ಕಳೆದ ಬಾರಿ ಕೊರೊನಾ ಶುರುವಾದಾಗಲೇ ಆರೋಗ್ಯ ಇಲಾಖೆ, ವಿಶ್ವ ಆರೋಗ್ಯ ಸಂಸ್ಥೆ ಹಾಗೇ ಹಲವು ಆರೋಗ್ಯ ತಜ್ಞರು ಹಲವು ಸಲಹೆಗಳನ್ನು ನೀಡಿದ್ದಾರೆ. ಕೊರೊನಾ ಪ್ರಸರಣದ ಸರಪಳಿಯನ್ನು ಹೇಗೆಲ್ಲ ಬ್ರೇಕ್​ ಮಾಡಬಹುದು ಎಂದು ತಿಳಿಸಿದ್ದಾರೆ. ಕೊರೊನಾ ಸೋಂಕಿನಿಂದ ಮುಕ್ತರಾಗಲು ಮಾಸ್ಕ್, ಸಾಮಾಜಿಕ ಅಂತರಗಳೇ ಪ್ರಮುಖ ವಿಧಾನಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಬೆಳ್ಳಂಬೆಳಗ್ಗೆ ರೋಡಿನಲ್ಲೇ ಕೂತು ಎಣ್ಣೆ ಹೊಡೆದ ಎಣ್ಣೆ ಪ್ರಿಯರು!

IPL 2021: ಭಾರತದಲ್ಲಿ ಸ್ವಚ್ಛತಾ ವ್ಯವಸ್ಥೆ ಸರಿಯಿಲ್ಲ, ಬಯೋ ಬಬಲ್​ ನಿಯಮ ಸ್ವಲ್ಪವೂ ಸುರಕ್ಷಿತವಲ್ಲ! ಅದಕ್ಕಾಗಿ ಐಪಿಎಲ್ ತೊರೆದೆ; ಆಡಮ್ ಜಂಪಾ

Follow Us
Lakshmi Hegde
Lakshmi Hegde
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!