AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿ ಸಾವಿನ ಸುದ್ದಿ ಕೇಳಿ ವಿಮಾನ ಹಾರಾಟ ಸಾಧ್ಯವಿಲ್ಲ ಎಂದ ಪೈಲಟ್, 162 ಪ್ರಯಾಣಿಕರು 3 ಗಂಟೆಗಳ ಕಾಲ ಕಾಯುವಂತಾಯ್ತು

ಇಂಡಿಗೋದ ವಿಮಾನವು ಒಟ್ಟು 162 ಪ್ರಯಾಣಿಕರೊಂದಿಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸಿದ್ಧವಾಗಿ ನಿಂತಿತ್ತು. ಪೈಲಟ್ ಕಾಕ್‌ಪಿಟ್‌ಗೆ ಪ್ರವೇಶಿಸಲು ಸಿಬ್ಬಂದಿ ಸದಸ್ಯರು ಕಾಯುತ್ತಿದ್ದರು. ತಮ್ಮ ವಿಮಾನ ಟೇಕಾಫ್ ಆಗಲಿದೆ ಎಂದು ಪ್ರಯಾಣಿಕರು ಭಾವಿಸಿದ್ದರು. ಆದರೆ ನಂತರ ಪೈಲಟ್ ಟೇಕಾಫ್ ಮಾಡಲು ನಿರಾಕರಿಸಿದ್ದಾರೆ. ಅಜ್ಜಿ ತೀರಿಕೊಂಡಿದ್ದರು ಎಂದು ಕಾರಣ ನೀಡಿದ್ದರು.

ಅಜ್ಜಿ ಸಾವಿನ ಸುದ್ದಿ ಕೇಳಿ ವಿಮಾನ ಹಾರಾಟ ಸಾಧ್ಯವಿಲ್ಲ ಎಂದ ಪೈಲಟ್, 162 ಪ್ರಯಾಣಿಕರು 3 ಗಂಟೆಗಳ ಕಾಲ ಕಾಯುವಂತಾಯ್ತು
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: Jan 18, 2024 | 12:23 PM

Share

ಇಂಡಿಗೋದ ವಿಮಾನವು ಒಟ್ಟು 162 ಪ್ರಯಾಣಿಕರೊಂದಿಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸಿದ್ಧವಾಗಿ ನಿಂತಿತ್ತು. ಪೈಲಟ್ ಕಾಕ್‌ಪಿಟ್‌ಗೆ ಪ್ರವೇಶಿಸಲು ಸಿಬ್ಬಂದಿ ಸದಸ್ಯರು ಕಾಯುತ್ತಿದ್ದರು. ತಮ್ಮ ವಿಮಾನ ಟೇಕಾಫ್ ಆಗಲಿದೆ ಎಂದು ಪ್ರಯಾಣಿಕರು ಭಾವಿಸಿದ್ದರು. ಆದರೆ ನಂತರ ಪೈಲಟ್ ಟೇಕಾಫ್ ಮಾಡಲು ನಿರಾಕರಿಸಿದ್ದಾರೆ. ಅಜ್ಜಿ ತೀರಿಕೊಂಡಿದ್ದರು ಎಂದು ಕಾರಣ ನೀಡಿದ್ದರು.

ಈ ಇಂಡಿಗೋ ವಿಮಾನ ಸಂಖ್ಯೆ 6E 126 ಪಾಟ್ನಾ ಮತ್ತು ಪುಣೆ ನಡುವೆ ಹಾರಾಟ ನಡೆಸಬೇಕಿತ್ತು. ಈ ಘಟನೆಯ ನಂತರ ವಿಮಾನ ಸುಮಾರು ಮೂರು ಗಂಟೆಗಳ ಕಾಲ ತಡವಾಯಿತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು.

ಮಾಹಿತಿಯ ಪ್ರಕಾರ, ಬುಧವಾರ, ಪಾಟ್ನಾದಿಂದ ಪುಣೆಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಪಾರ್ಕಿಂಗ್ ಬೇಯಿಂದ ಹೊರಡಲು ಸಿದ್ಧವಾಗಿತ್ತು. ಈ ವೇಳೆ ಪೈಲಟ್ ತನ್ನ ಅಜ್ಜಿಯ ಹಠಾತ್ ಸಾವಿನ ಬಗ್ಗೆ ಮಾಹಿತಿ ಪಡೆದರು. ಮಾಹಿತಿ ಪಡೆದ ಪೈಲಟ್, ವಿಮಾನ ಹಾರಿಸಲು ಮಾನಸಿಕವಾಗಿ ಅಂತಹ ಸ್ಥಿತಿಯಲ್ಲಿಲ್ಲ ಎಂದು ವಿಮಾನಯಾನ ಅಧಿಕಾರಿಗಳಿಗೆ ತಿಳಿಸಿದರು.

ವಿಮಾನವು ಮಧ್ಯಾಹ್ನ 1.25 ರ ಸುಮಾರಿಗೆ ಹೊರಡಬೇಕಿತ್ತು ಪೈಲಟ್ ಟೇಕ್ ಆಫ್ ಮಾಡಲು ನಿರಾಕರಿಸಿದ ನಂತರ, ವಿಮಾನಯಾನ ಅಧಿಕಾರಿಗಳು ತಕ್ಷಣವೇ ವಿಮಾನವನ್ನು ಪಾರ್ಕಿಂಗ್ ಬೇಯಲ್ಲಿ ನಿಲ್ಲಿಸಿದರು, ಇದರಿಂದಾಗಿ ರನ್‌ವೇಯಲ್ಲಿನ ಇತರ ವಿಮಾನಗಳ ಮೇಲೆ ಪರಿಣಾಮ ಬೀರಲಿಲ್ಲ. ಇದಾದ ನಂತರ ವಿಮಾನವನ್ನು ಹಾರಿಸಲು ಮತ್ತೊಬ್ಬ ಪೈಲಟ್‌ನನ್ನು ಕರೆಸಲಾಯಿತು. ಪಾಟ್ನಾ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಪಾಟ್ನಾ ಮತ್ತು ಪುಣೆ ನಡುವೆ ಹಾರುವ 6E 126 ಸಂಖ್ಯೆಯ ವಿಮಾನ  ಮಧ್ಯಾಹ್ನ 1.25 ರ ಹಾರಾಟ ನಿಗದಿಯಾಗಿತ್ತು. ಆದರೆ ಪೈಲಟ್ ನಿರಾಕರಿಸಿದ್ದರಿಂದ ಸಂಜೆ 4.41ರ ಸುಮಾರಿಗೆ ಟೇಕಾಫ್ ಆಯಿತು.

ಪ್ರಯಾಣಿಕರು 3 ಗಂಟೆಗಳ ಕಾಲ ಕಾಯಬೇಕಾಯಿತು ಇದೆಲ್ಲದರ ನಡುವೆ ವಿಮಾನಯಾನ ಸಂಸ್ಥೆ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದೆ. ಹೊಸ ಪೈಲಟ್ ಆಗಮನದ ನಂತರ ಮತ್ತೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಯಿತು. ಇದೆಲ್ಲದರ ನಡುವೆ ಮೂರು ಗಂಟೆಗೂ ಹೆಚ್ಚು ಸಮಯ ಕಳೆದಿತ್ತು.

ಇದರಿಂದ ಪ್ರಯಾಣಿಕರು ಅದರಲ್ಲೂ ಮಕ್ಕಳು, ವೃದ್ಧರು ತೀವ್ರ ತೊಂದರೆ ಅನುಭವಿಸಿದರು. 162 ಪ್ರಯಾಣಿಕರು ತಮ್ಮ ವಿಮಾನ ಹೊರಡಲು ಮೂರು ಗಂಟೆಗಳ ಕಾಲ ಕಾಯುತ್ತಿದ್ದರು. ಕಳೆದ ಕೆಲವು ದಿನಗಳಿಂದ ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಬೀಳುತ್ತಿದೆ. ಇದರಿಂದಾಗಿ ವಿಮಾನಗಳ ಹಾರಾಟ ವಿಳಂಬವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ