AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿ ಸಾವಿನ ಸುದ್ದಿ ಕೇಳಿ ವಿಮಾನ ಹಾರಾಟ ಸಾಧ್ಯವಿಲ್ಲ ಎಂದ ಪೈಲಟ್, 162 ಪ್ರಯಾಣಿಕರು 3 ಗಂಟೆಗಳ ಕಾಲ ಕಾಯುವಂತಾಯ್ತು

ಇಂಡಿಗೋದ ವಿಮಾನವು ಒಟ್ಟು 162 ಪ್ರಯಾಣಿಕರೊಂದಿಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸಿದ್ಧವಾಗಿ ನಿಂತಿತ್ತು. ಪೈಲಟ್ ಕಾಕ್‌ಪಿಟ್‌ಗೆ ಪ್ರವೇಶಿಸಲು ಸಿಬ್ಬಂದಿ ಸದಸ್ಯರು ಕಾಯುತ್ತಿದ್ದರು. ತಮ್ಮ ವಿಮಾನ ಟೇಕಾಫ್ ಆಗಲಿದೆ ಎಂದು ಪ್ರಯಾಣಿಕರು ಭಾವಿಸಿದ್ದರು. ಆದರೆ ನಂತರ ಪೈಲಟ್ ಟೇಕಾಫ್ ಮಾಡಲು ನಿರಾಕರಿಸಿದ್ದಾರೆ. ಅಜ್ಜಿ ತೀರಿಕೊಂಡಿದ್ದರು ಎಂದು ಕಾರಣ ನೀಡಿದ್ದರು.

ಅಜ್ಜಿ ಸಾವಿನ ಸುದ್ದಿ ಕೇಳಿ ವಿಮಾನ ಹಾರಾಟ ಸಾಧ್ಯವಿಲ್ಲ ಎಂದ ಪೈಲಟ್, 162 ಪ್ರಯಾಣಿಕರು 3 ಗಂಟೆಗಳ ಕಾಲ ಕಾಯುವಂತಾಯ್ತು
ಇಂಡಿಗೋ ವಿಮಾನ
ನಯನಾ ರಾಜೀವ್
|

Updated on: Jan 18, 2024 | 12:23 PM

Share

ಇಂಡಿಗೋದ ವಿಮಾನವು ಒಟ್ಟು 162 ಪ್ರಯಾಣಿಕರೊಂದಿಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸಿದ್ಧವಾಗಿ ನಿಂತಿತ್ತು. ಪೈಲಟ್ ಕಾಕ್‌ಪಿಟ್‌ಗೆ ಪ್ರವೇಶಿಸಲು ಸಿಬ್ಬಂದಿ ಸದಸ್ಯರು ಕಾಯುತ್ತಿದ್ದರು. ತಮ್ಮ ವಿಮಾನ ಟೇಕಾಫ್ ಆಗಲಿದೆ ಎಂದು ಪ್ರಯಾಣಿಕರು ಭಾವಿಸಿದ್ದರು. ಆದರೆ ನಂತರ ಪೈಲಟ್ ಟೇಕಾಫ್ ಮಾಡಲು ನಿರಾಕರಿಸಿದ್ದಾರೆ. ಅಜ್ಜಿ ತೀರಿಕೊಂಡಿದ್ದರು ಎಂದು ಕಾರಣ ನೀಡಿದ್ದರು.

ಈ ಇಂಡಿಗೋ ವಿಮಾನ ಸಂಖ್ಯೆ 6E 126 ಪಾಟ್ನಾ ಮತ್ತು ಪುಣೆ ನಡುವೆ ಹಾರಾಟ ನಡೆಸಬೇಕಿತ್ತು. ಈ ಘಟನೆಯ ನಂತರ ವಿಮಾನ ಸುಮಾರು ಮೂರು ಗಂಟೆಗಳ ಕಾಲ ತಡವಾಯಿತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು.

ಮಾಹಿತಿಯ ಪ್ರಕಾರ, ಬುಧವಾರ, ಪಾಟ್ನಾದಿಂದ ಪುಣೆಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಪಾರ್ಕಿಂಗ್ ಬೇಯಿಂದ ಹೊರಡಲು ಸಿದ್ಧವಾಗಿತ್ತು. ಈ ವೇಳೆ ಪೈಲಟ್ ತನ್ನ ಅಜ್ಜಿಯ ಹಠಾತ್ ಸಾವಿನ ಬಗ್ಗೆ ಮಾಹಿತಿ ಪಡೆದರು. ಮಾಹಿತಿ ಪಡೆದ ಪೈಲಟ್, ವಿಮಾನ ಹಾರಿಸಲು ಮಾನಸಿಕವಾಗಿ ಅಂತಹ ಸ್ಥಿತಿಯಲ್ಲಿಲ್ಲ ಎಂದು ವಿಮಾನಯಾನ ಅಧಿಕಾರಿಗಳಿಗೆ ತಿಳಿಸಿದರು.

ವಿಮಾನವು ಮಧ್ಯಾಹ್ನ 1.25 ರ ಸುಮಾರಿಗೆ ಹೊರಡಬೇಕಿತ್ತು ಪೈಲಟ್ ಟೇಕ್ ಆಫ್ ಮಾಡಲು ನಿರಾಕರಿಸಿದ ನಂತರ, ವಿಮಾನಯಾನ ಅಧಿಕಾರಿಗಳು ತಕ್ಷಣವೇ ವಿಮಾನವನ್ನು ಪಾರ್ಕಿಂಗ್ ಬೇಯಲ್ಲಿ ನಿಲ್ಲಿಸಿದರು, ಇದರಿಂದಾಗಿ ರನ್‌ವೇಯಲ್ಲಿನ ಇತರ ವಿಮಾನಗಳ ಮೇಲೆ ಪರಿಣಾಮ ಬೀರಲಿಲ್ಲ. ಇದಾದ ನಂತರ ವಿಮಾನವನ್ನು ಹಾರಿಸಲು ಮತ್ತೊಬ್ಬ ಪೈಲಟ್‌ನನ್ನು ಕರೆಸಲಾಯಿತು. ಪಾಟ್ನಾ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಪಾಟ್ನಾ ಮತ್ತು ಪುಣೆ ನಡುವೆ ಹಾರುವ 6E 126 ಸಂಖ್ಯೆಯ ವಿಮಾನ  ಮಧ್ಯಾಹ್ನ 1.25 ರ ಹಾರಾಟ ನಿಗದಿಯಾಗಿತ್ತು. ಆದರೆ ಪೈಲಟ್ ನಿರಾಕರಿಸಿದ್ದರಿಂದ ಸಂಜೆ 4.41ರ ಸುಮಾರಿಗೆ ಟೇಕಾಫ್ ಆಯಿತು.

ಪ್ರಯಾಣಿಕರು 3 ಗಂಟೆಗಳ ಕಾಲ ಕಾಯಬೇಕಾಯಿತು ಇದೆಲ್ಲದರ ನಡುವೆ ವಿಮಾನಯಾನ ಸಂಸ್ಥೆ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದೆ. ಹೊಸ ಪೈಲಟ್ ಆಗಮನದ ನಂತರ ಮತ್ತೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಯಿತು. ಇದೆಲ್ಲದರ ನಡುವೆ ಮೂರು ಗಂಟೆಗೂ ಹೆಚ್ಚು ಸಮಯ ಕಳೆದಿತ್ತು.

ಇದರಿಂದ ಪ್ರಯಾಣಿಕರು ಅದರಲ್ಲೂ ಮಕ್ಕಳು, ವೃದ್ಧರು ತೀವ್ರ ತೊಂದರೆ ಅನುಭವಿಸಿದರು. 162 ಪ್ರಯಾಣಿಕರು ತಮ್ಮ ವಿಮಾನ ಹೊರಡಲು ಮೂರು ಗಂಟೆಗಳ ಕಾಲ ಕಾಯುತ್ತಿದ್ದರು. ಕಳೆದ ಕೆಲವು ದಿನಗಳಿಂದ ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಬೀಳುತ್ತಿದೆ. ಇದರಿಂದಾಗಿ ವಿಮಾನಗಳ ಹಾರಾಟ ವಿಳಂಬವಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!