AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ.ಡಿ. ಅಧಿಕಾರಿಗಳ ಎದುರು ಸತ್ಯ ಬಾಯ್ಬಿಟ್ಟ ಸೋದರಳಿಯ ಭೂಪಿಂದರ್ ಸಿಂಗ್​; ಪಂಜಾಬ್​ ಮುಖ್ಯಮಂತ್ರಿ ಛನ್ನಿಗೆ ಸಂಕಷ್ಟ?​

ಪಂಜಾಬ್​ನಲ್ಲಿ ಕಾಂಗ್ರೆಸ್​ಗೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ತುಸು ಕಗ್ಗಂಟಾಗಿತ್ತು. ಇಲ್ಲಿ ನವಜೋತ್​ ಸಿಂಗ್​ ಸಧು ಜಾಸ್ತಿ ಎನ್ನಿಸುವಷ್ಟು ರೆಬೆಲ್​ ಆಗಿದ್ದರೂ, ನಿನ್ನೆ ಕೊನೇ ಕ್ಷಣದಲ್ಲಿ, ರಾಹುಲ್​ ಗಾಂಧಿಯವರ ತೀರ್ಮಾನವನ್ನು ಗೌರವಿಸುತ್ತೇನೆ ಎಂದಿದ್ದರು. 

ಇ.ಡಿ. ಅಧಿಕಾರಿಗಳ ಎದುರು ಸತ್ಯ ಬಾಯ್ಬಿಟ್ಟ ಸೋದರಳಿಯ ಭೂಪಿಂದರ್ ಸಿಂಗ್​; ಪಂಜಾಬ್​ ಮುಖ್ಯಮಂತ್ರಿ ಛನ್ನಿಗೆ ಸಂಕಷ್ಟ?​
ಚರಣಜಿತ್​ ಸಿಂಗ್ ಛನ್ನಿ
TV9 Web
| Updated By: Lakshmi Hegde|

Updated on:Feb 07, 2022 | 4:49 PM

Share

ಚಂಡಿಗಢ್​: ಪಂಜಾಬ್​​​ನಲ್ಲಿ ಈಗ ಮುಖ್ಯಮಂತ್ರಿಯಾಗಿರುವ ಚರಣಜಿತ್​ ಸಿಂಗ್ ಛನ್ನಿಯವರೇ (Charanjit Singh Channi )ಮುಂದಿನ ಅವಧಿಗೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಿಸಿದೆ. ಅಂದರೆ, ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಛನ್ನಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ. ಇನ್ನೊಂದೆಡೆ ಈಗಾಗಲೇ ಇ.ಡಿಯಿಂದ ಬಂಧಿತರಾಗಿರುವ ಛನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಹನಿ, ತಾವು ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ಸುಗಮ ಮಾಡಿಕೊಡಲು ಸಂಬಂಧಪಟ್ಟವರಿಂದ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾಗಿ ಇ.ಡಿ. ಅಧಿಕಾರಿಗಳ ಎದುರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.  ಭೂಪಿಂದರ್​ ಸತ್ಯ ಒಪ್ಪಿಕೊಂಡಿದ್ದಾಗಿ ಇ.ಡಿ.ಮೂಲಗಳೇ ತಿಳಿಸಿದ್ದು, ತನಿಖೆ ಇನ್ನಷ್ಟು ಚುರುಕುಗೊಂಡಿದೆ.

ಪಂಜಾಬ್​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಸಂಬಂಧಪಟ್ಟು 2018ರ ಮಾರ್ಚ್​ 7ರಂದು ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು. ಆ ಎಫ್​ಐಆರ್ ಆಧಾರದ ಮೇಲೆ ಜನವರಿಯಲ್ಲಿ ಛನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಹನಿಯವರಿಗೆ ಸೇರಿದ 10 ಸ್ಥಳಗಳ  ಮೇಲೆ ಇ.ಡಿ.ದಾಳಿ ನಡೆದಿತ್ತು. ಈ ಕೇಸ್​​ನಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆಯೂ ಕೇಸ್​ ದಾಖಲಿಸಿಕೊಂಡಿರುವ ಇ.ಡಿ. ಈಗ ಭೂಪಿಂದರ್ ಸಿಂಗ್​ರನ್ನು ಬಂಧಿಸಿದೆ.  ದಾಳಿ ನಡೆಸಿದ ಸಂದರ್ಭದಲ್ಲಿ ಸಿಕ್ಕ ದಾಖಲೆಗಳು ದೋಷಪೂರಿತವಾಗಿವೆ. ಅಕ್ರಮವಾಗಿ ಆಸ್ತಿ ವರ್ಗಾವಣೆಯಾಗಿದ್ದು ಬೆಳಕಿಗೆ ಬಂದಿದೆ. ಈ ಆಸ್ತಿ ವಹಿವಾಟಿಗೆ ಸಂಬಂಧಪಟ್ಟಂತೆ ಮೊಬೈಲ್​ ಫೋನ್​, 21 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನ, 12 ಲಕ್ಷ ರೂ.ಮೌಲ್ಯದ ರೊಲೆಕ್ಸ್​ ವಾಚ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇ.ಡಿ. ಅಧಿಕಾರಿಗಳು ಮಾಹಿತಿ ನೀಡಿದ್ದರು. ಭೂಪಿಂದರ್ ಸಿಂಗ್​ ನಾಳೆ (ಫೆ 8)ವರೆಗೂ ಇ.ಡಿ.ಕಸ್ಟಡಿಯಲ್ಲೇ ಇರಲಿದ್ದಾರೆ.

ಪಂಜಾಬ್​ನಲ್ಲಿ ಕಾಂಗ್ರೆಸ್​ಗೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ತುಸು ಕಗ್ಗಂಟಾಗಿತ್ತು. ಇಲ್ಲಿ ನವಜೋತ್​ ಸಿಂಗ್​ ಸಧು ಜಾಸ್ತಿ ಎನ್ನಿಸುವಷ್ಟು ರೆಬೆಲ್​ ಆಗಿದ್ದರೂ, ನಿನ್ನೆ ಕೊನೇ ಕ್ಷಣದಲ್ಲಿ, ರಾಹುಲ್​ ಗಾಂಧಿಯವರ ತೀರ್ಮಾನವನ್ನು ಗೌರವಿಸುತ್ತೇನೆ ಎಂದಿದ್ದರು.  ಹಾಗೇ, ನಿನ್ನೆ ಛನ್ನಿಯವರ ಹೆಸರನ್ನೇ ರಾಹುಲ್​ ಗಾಂಧಿ ಘೋಷಿಸಿದ್ದಾರೆ. ಛನ್ನಿಯವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂಬುದು ಇಲ್ಲಿನ ಜನತೆಯ ನಿರ್ಧಾರ, ಇದು ನನ್ನ ನಿರ್ಧಾರವಲ್ಲ. ನಾನು ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಿಲ್ಲ. ನೀವೇ ಮಾಡಿ ಎಂದು ಪಕ್ಷದ ಕಾರ್ಯಕರ್ತರಿಗೇ ಜವಾಬ್ದಾರಿ ನೀಡಿದ್ದಾರೆ. ಇಲ್ಲಿನ ಉಳಿದ ಅಭ್ಯರ್ಥಿಗಳು, ಶಾಸಕರು, ಜನರು, ಯುವಕರೆಲ್ಲರೂ ಮುಂದಿನ ಅವಧಿಗೂ ಛನ್ನಿಯವೇ ಸಿಎಂ ಆಗಲಿ ಎಂದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಮುಂದಿನ ಅವಧಿಗೂ ಛನ್ನಿಯವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡುತ್ತಿದ್ದಂತೆ, ಆಮ್​ ಆದ್ಮಿ ಪಕ್ಷ ಮತ್ತು ಶಿರೋಮಣಿ ಅಕಾಲಿ ದಳ ಎರಡೂ ಪಕ್ಷಗಳೂ ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ನಡೆಸಿದ್ದವು. ಅಕ್ರಮ ಮರಳು ಗಣಿಗಾರಿಕೆ ದಂಧೆಗೆ ಸಿಕ್ಕ ಗೆಲುವು ಎಂದೇ ಹೇಳಿದ್ದವು. ಪಂಜಾಬ್​​ನಲ್ಲೂ ಕೂಡ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮೊದಲು ಧ್ವನಿ ಎತ್ತಿದ್ದು ಆಮ್​ ಆದ್ಮಿ ಪಕ್ಷವೇ ಆಗಿದೆ. ಅದರ ಬೆನ್ನಲ್ಲೆ ಇ.ಡಿ.ರೇಡ್​ ಆಗಿದೆ.

ಇದನ್ನೂ ಓದಿ: ಅಸಾದುದ್ದೀನ್ ಓವೈಸಿ ವಾಹನದ ಮೇಲೆ ಗುಂಡಿನ ದಾಳಿ ಪ್ರಕರಣ: ಝೆಡ್ ಕೆಟಗರಿ ಭದ್ರತೆಯನ್ನು ಸ್ವೀಕರಿಸಲು ಓವೈಸಿಗೆ ಅಮಿತ್ ಶಾ ಮನವಿ

Published On - 4:49 pm, Mon, 7 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ