AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ

Taking measures to ensure availability of fertilizers, says govt: ಗಲ್ಫ್ ರಾಷ್ಟ್ರಗಳಿಂದ ಯೂರಿಯಾ ಪೂರೈಕೆಯಾಗುವುದು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ರಸಗೊಬ್ಬರ ಲಭ್ಯತೆಗೆ ಧಕ್ಕೆಯಾಗಬಹುದು ಎಂದು ಕೃಷಿ ಕ್ಷೇತ್ರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ. ಆದರೆ, ಯೂರಿಯಾ ದಾಸ್ತಾನು ಸಾಕಷ್ಟಿದೆ. ಯೂರಿಯಾ ಉತ್ಪಾದನೆ ಹೆಚ್ಚಿಸಲು ಮತ್ತು ಬೇರೆ ಬೇರೆ ಪ್ರದೇಶಗಳಲ್ಲಿ ಯೂರಿಯಾ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಸರ್ಕಾರ ಹೇಳಿದೆ.

ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ
ರಸಗೊಬ್ಬರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 30, 2026 | 8:11 PM

Share

ನವದೆಹಲಿ, ಮಾರ್ಚ್ 30: ಇರಾನ್ ಯುದ್ಧ ನಿಲ್ಲದ ಹಿನ್ನೆಲೆಯಲ್ಲಿ ರಸಗೊಬ್ಬರ, ಎಲ್​ಪಿಜಿ, ಪೆಟ್ರೋಲ್, ಡೀಸಲ್, ಗ್ಯಾಸ್ ಪೂರೈಕೆ ಬಗ್ಗೆ ಜನರ ಆತಂಕ ಮುಂದುವರಿದಿದೆ. ಸರ್ಕಾರ ದಿನವೂ ಜನರಿಗೆ ಈ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ ಬಗ್ಗೆ ಮಾಹಿತಿ ಒದಗಿಸುತ್ತಿದೆ. ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಬಂದರು, ಹಡಗು, ಜಲಮಾರ್ಗ ಇತ್ಯಾದಿ ಸಚಿವಾಲಯದ ಅಧಿಕಾರಿಗಳು ಇಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯೂರಿಯಾ ಸಂಗ್ರಹ ಸಾಕಷ್ಟಿದೆ. ಬೇರೆ ಬೇರೆ ಮೂಲಗಳಿಂದ ರಸಗೊಬ್ಬರ ಪೂರೈಕೆಗೆ (Urea supply) ಪ್ರಯತ್ನಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ರಸಗೊಬ್ಬರ ಪೂರೈಕೆ ನಿಲ್ಲದಂತೆ ಸರ್ಕಾರದ ಅತೀವ ಯತ್ನ

ಭಾರತದ ಪೆಟ್ರೋಲ್, ಡೀಸಲ್ ಮತ್ತು ಗ್ಯಾಸ್ ಅವಶ್ಯಕತೆಗೆ ಆಮದು ಮೇಲೆ ಹೆಚ್ಚಿನ ಅವಲಂಬನೆ ಇದೆ. ಹಾಗೆಯೇ, ರಸಗೊಬ್ಬರಕ್ಕೂ ಭಾರತ ಆಮದು ಮೇಲೆ ಅವಲಂಬಿತವಾಗಿದೆ. ಹೆಚ್ಚಿನ ರಸಗೊಬ್ಬರ ಆಮದು ಗಲ್ಫ್​ನಿಂದ ಮಾಡಲಾಗುತ್ತಿದೆ. ಪೆಟ್ರೋಲಿಯಂ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಶೇ. 20-30ರಷ್ಟು ಯೂರಿಯ, ಶೇ. 30ರಷ್ಟು ಡಿಎಪಿಯನ್ನು ಗಲ್ಫ್​ನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಯೂರಿಯಾ ಉತ್ಪಾದನೆಗೆ ಬೇಕಾದ ಎಲ್​ಎನ್​ಜಿ ಗಲ್ಫ್​ನಿಂದ ಶೇ. 50ರಷ್ಟು ಪೂರೈಕೆಯಾಗುತ್ತಿದೆ. ರಸಗೊಬ್ಬರ ತಯಾರಿಕೆಗೆ ಅಗತ್ಯವಾಗಿರುವ ಕಚ್ಛಾ ಸಾಮಗ್ರಿಗಳಾದ ಅಮ್ಮೋನಿಯಾ, ಸಲ್ಫರ್ ಇತ್ಯಾದಿಯೂ ಕೂಡ ಆಮದು ಮೇಲೆ ಅವಲಂಬಿತವಾಗಿರುವಂಥವೇ. ಇದರಿಂದ ದೇಶದೊಳಗಿನ ಯೂರಿಯಾ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಬೇಗ ಡೀಲ್ ಆಗದಿದ್ದರೆ ಇರಾನ್​ನ ಇಂಧನ ಘಟಕಗಳು, ಖರ್ಗ್ ದ್ವೀಪವನ್ನು ಉಡಾಯಿಸುತ್ತೇವೆ: ಡೊನಾಲ್ಡ್ ಟ್ರಂಪ್ ಕಟ್ಟೆಚ್ಚರಿಕೆ

ಸದ್ಯ ರಸಗೊಬ್ಬರ ದಾಸ್ತಾನು ಸಾಕಷ್ಟಿದೆ. ಕಳೆದ ವರ್ಷ ಈ ಅವಧಿಯಲ್ಲಿ 147 ಲಕ್ಷ ಟನ್ ಯೂರಿಯಾ ಇತ್ತು. ಈಗ ಅದು 180 ಲಕ್ಷ ಟನ್​ಗಳಷ್ಟಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಾಯ ಹೆಚ್ಚು ಇರುವುದಿಲ್ಲ. ಹೀಗಾಗಿ, ಮುಂಗಾರು ಬೆಳೆ ಸೀಸನ್​ಗೆ ಯೂರಿಯಾ ದಾಸ್ತಾನು ಮಾಡಲು ಅವಕಾಶ ಇದೆ ಎಂದು ಸರ್ಕಾರ ತಿಳಿಸಿದೆ.

ಯೂರಿಯಾ ಉತ್ಪಾದನೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಯೂರಿಯಾ ಘಟಕಗಳಿಗೆ ಎಲ್​ಎನ್​ಜಿ ಪೂರೈಕೆಯನ್ನು ಹೆಚ್ಚಿಸಲಾಗಿದೆ. ಇದರಿಂದ ಯೂರಿಯಾ ಉತ್ಪಾದನೆ ದಿನಕ್ಕೆ 12,000-15,000 ಟನ್​ಗಳಷ್ಟು ಹೆಚ್ಚಿಗೆ ಆಗಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​ನ ಖರ್ಗ್ ದ್ವೀಪದ ಮೇಲೆ ಟ್ರಂಪ್​ಗೆ ಕಣ್ಣು? ಅಂಥದ್ದೇನಿದೆ ಅಲ್ಲಿ?

ಜಾಗತಿಕವಾಗಿ ಯೂರಿಯಾ ಲಭ್ಯತೆ ಶೋಧಿಸಿ, ಗುರುತಿಸಲು ಟ್ಯಾಸ್ಕ್ ಗ್ರೂಪ್ ರಚಿಸಲಾಗುತ್ತಿದೆ. 13.07 ಲಕ್ಷ ಟನ್​ಗಳಷ್ಟು ಯೂರಿಯಾ ಖರೀದಿಗಾಗಿ ಜಾಗತಿಕ ಟೆಂಡರ್ ಕರೆಯಲಾಗಿದೆ. ರಷ್ಯಾ, ಸೌದಿ ಅರೇಬಿಯಾ, ಓಮನ್, ಮೊರಾಕ್ಕೋ, ಆಸ್ಟ್ರೇಲಿಯಾ, ಇಂಡೋನೇಷ್ಯಾ, ಮಲೇಷ್ಯಾ, ಜೋರ್ಡಾನ್, ಕೆನಡಾ, ಈಜಿಪ್ಟ್, ಆಲ್ಜೀರಿಯಾ, ಫಿನ್​ಲ್ಯಾಂಡ್, ಟೋಬೋ ಮೊದಲಾದ ದೇಶಗಳಿಂದ ಯೂರಿಯಾ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಾಗತಿಕವಾಗಿ ವಿವಿಧೆಡೆ 16 ಭಾರತೀಯ ಮಿಷನ್​ಗಳ ಮೂಲಕ ಪರ್ಯಾಯ ಪೂರೈಕೆ ಮೂಲಗಳನ್ನು ಅನ್ವೇಷಿಸಲಾಗುತ್ತಿದೆ ಎಂದು ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ