AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಸರ್ಕಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತು..

SCO Summit: ಶಾಂಘೈ ಸಹಕಾರ ಸಂಘಟನೆ ಸ್ಥಾಪಿತವಾಗಿ 20 ವರ್ಷ ಕಳೆದ ಹಿನ್ನೆಲೆಯಲ್ಲಿ ಪ್ರಸಕ್ತ ಬಾರಿಯ ಶೃಂಗಸಭೆ ತುಂಬ ಮಹತ್ವ ಪಡೆದುಕೊಂಡಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಸರ್ಕಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತು..
ನರೇಂದ್ರ ಮೋದಿ
TV9 Web
| Edited By: |

Updated on:Sep 17, 2021 | 7:39 PM

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತಕ್ಕೆ ಬಂದು ತಿಂಗಳು ಕಳೆದರೂ, ಉಳಿದ ದೇಶಗಳ ನಾಯಕರು ಕೆಲವು ಹೇಳಿಕೆಗಳನ್ನು ನೀಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಹೆಚ್ಚೇನೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಇಂದು ಎಸ್​ಸಿಒ ಶೃಂಗಸಭೆ (SCO Summit) (ಶಾಂಘೈ ಸಹಕಾರ ಸಂಘಟನೆ)ಯಲ್ಲಿ ಅಫ್ಘಾನಿಸ್ತಾನವನ್ನೇ ಪ್ರಮುಖ ವಿಷಯವನ್ನಾಗಿಟ್ಟುಕೊಂಡು ಮಾತನಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ಈಗಿರುವ ತಾಲಿಬಾನ್​ ಸರ್ಕಾರ ಎಲ್ಲವನ್ನೂ ಒಳಗೊಂಡಿರುವ ಸರ್ಕಾರ ಅಲ್ಲ. ಅಲ್ಲಿ ಯಾವುದೇ ಮಾತುಕತೆ ಇಲ್ಲದೆಯೇ ಬದಲಾವಣೆ ಆಗಿದೆ ಎಂದು ಹೇಳಿದ್ದಾರೆ.  

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಎಲ್ಲರನ್ನೂ ಒಳಗೊಂಡ ಸರ್ಕಾರ ರಚನೆ ಮಾಡಿಲ್ಲ. ಯಾವುದೇ ಮಾತುಕತೆ, ಕ್ರಮದ ಮೂಲಕ ಜಾರಿಗೆ ಬಂದ ಸರ್ಕಾರವೂ ಇದಲ್ಲ.  ನಿರಂತರವಾಗಿ ಪೂರೈಕೆಯಾದ ಮಾದಕವ್ಯಸನಗಳು, ಅಕ್ರಮ ಶಸ್ತ್ರಾಸ್ತ್ರಗಳು, ಮಾನವ ಕಳ್ಳಸಾಗಣೆಗಳು ಅಫ್ಘಾನಿಸ್ತಾನದ ಈ ಎಲ್ಲ ಬೆಳವಣಿಗೆಗಳಿಗೆ ಕಾರಣ ಎಂದು ಮೋದಿ ಇಂದಿನ ಶೃಂಗಸಭೆಯಲ್ಲಿ ವ್ಯಾಖ್ಯಾನಿಸಿದರು.  ತೀವ್ರವಾದ, ಉಗ್ರವಾದಗಳು ಹೆಚ್ಚುತ್ತಿರುವುದು ಏಷ್ಯನ್​ ದೇಶಗಳಿಗೆ ಸವಾಲಾಗಿದೆ. ಈ ನಿಟ್ಟಿನಲ್ಲಿ ಜಾಗತಿಕ ಸಮುದಾಯ ಸೂಕ್ತ ನಿರ್ಧಾರ ಕೈಗೊಳ್ಳುವುದು ತುಂಬ ಮುಖ್ಯ. ವಿಶ್ವಸಂಸ್ಥೆಯ ಕ್ರಮಗಳನ್ನು ಭಾರತ ಸದಾ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.  ಇದೀಗ ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವು ನೀಡಬೇಕು. ಹಾಗೇ, ಆ ನೆರವು ಅಫ್ಘಾನರನ್ನು ನೇರವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದೂ ಹೇಳಿದರು.

ಶಾಂಘೈ ಸಹಕಾರ ಸಂಘಟನೆ ಸ್ಥಾಪಿತವಾಗಿ 20 ವರ್ಷ ಕಳೆದ ಹಿನ್ನೆಲೆಯಲ್ಲಿ ಪ್ರಸಕ್ತ ಬಾರಿಯ ಶೃಂಗಸಭೆ ತುಂಬ ಮಹತ್ವ ಪಡೆದುಕೊಂಡಿದೆ. ಈ ಶೃಂಗಸಭೆ ತಜಕೀಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆಯುತ್ತಿದ್ದು, ಭಾರತದ ವಿದೇಶಾಂಗ ಸಚಿವ ಎಸ್​.ಜೈಶಂಕರ್​ ಭೌತಿಕವಾಗಿ ಉಪಸ್ಥಿತರಿದ್ದಾರೆ.  ಅವರಿಂದ ಚೀನಾ ವಿದೇಶಾಂಗ ಸ

ಇದನ್ನೂ ಓದಿ: ನ್ಯೂಜಿಲೆಂಡ್ ಮಾಡಿದ್ದು ಸರಿಯಲ್ಲ, ಪ್ರಧಾನಿ ಮಾತಿಗೂ ಕಿಮ್ಮತ್ತಿಲ್ಲ! ಇದನ್ನು ಐಸಿಸಿ ಮುಂದಿಡಲಿದ್ದೇವೆ; ಪಾಕ್​ ಕ್ರಿಕೆಟ್ ಮಂಡಳಿ

ಸಾವಿನ ಮನೆಗೆ ಸಾಮಾನ್ಯರು ಓಡಾಡುವ ಕಾರಿನಲ್ಲಿ ಬಂದ ಖ್ಯಾತ ನಟ; ಅದೇ ತಪ್ಪಾಯ್ತು

Published On - 7:39 pm, Fri, 17 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ