AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಯಾರೋ ರೂಪಿಸಿಕೊಂಡ ಕಾನೂನಿಗೆಲ್ಲ ಷರಿಯತ್​ ಎನ್ನಲಾಗದು..’-ಕೇರಳ ರಾಜ್ಯಪಾಲ ಆರಿಫ್​ ಮೊಹಮ್ಮದ್​ ಖಾನ್​

ದೇಶದಲ್ಲಿ ಮುಸ್ಲಿಂ ನಾಯಕತ್ವವನ್ನು ಮುಂಚೂಣಿಗೆ ತರಲು ಪ್ರಯತ್ನ ಮಾಡುತ್ತಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ವಿರುದ್ಧ ಅರೀಫ್​ ಮೊಹಮ್ಮದ್​ ಖಾನ್ ವಾಗ್ದಾಳಿ ನಡೆಸಿದ್ದಾರೆ.

’ಯಾರೋ ರೂಪಿಸಿಕೊಂಡ ಕಾನೂನಿಗೆಲ್ಲ ಷರಿಯತ್​ ಎನ್ನಲಾಗದು..’-ಕೇರಳ ರಾಜ್ಯಪಾಲ ಆರಿಫ್​ ಮೊಹಮ್ಮದ್​ ಖಾನ್​
ಅರೀಫ್​ ಮೊಹಮ್ಮದ್ ಖಾನ್​
TV9 Web
| Edited By: |

Updated on: Sep 12, 2021 | 10:39 AM

Share

ದೆಹಲಿ: ತಾಲಿಬಾನಿ (Taliban)ಗಳು ವಿದ್ಯಾಭ್ಯಾಸ ಮಾಡಿದ್ದು ಪಾಕಿಸ್ತಾನದ ದೇವಬಂಧಿ ಮದರಸಾಗಳಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಕೇರಳ ರಾಜ್ಯಪಾಲ ಆರಿಫ್​ ಮೊಹಮ್ಮದ್​ ಖಾನ್​ ಹೇಳಿದ್ದಾರೆ. ಅಷ್ಟೇ ಅಲ್ಲ, ತಾಲಿಬಾನಿಗಳೇ ರೂಪಿಸಿಕೊಂಡಿರುವ ಕಾನೂನಿಗೆ ಷರಿಯತ್​ ಕಾನೂನು (ಇಸ್ಲಾಮಿಕ್​ ಲಾ) (Shariat) ಎಂದು ಕರೆಯಲು ಸಾಧ್ಯವೇ ಇಲ್ಲ ಎಂದೂ ಅವರು ಹೇಳಿದ್ದಾರೆ. ಹಾಗೇ, ಇದೀಗ ಅಫ್ಘಾನಿಸ್ತಾನದಲ್ಲಿರುವ ಬಂಡುಕೋರರ ಜತೆ ಮಾತುಕತೆ ನಡೆಸುವ ಮೂಲಕ ಭಾರತ ಸರ್ಕಾರ ಒಳ್ಳೆಯ ಕೆಲಸವನ್ನೇ ಮಾಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಟೈಮ್ಸ್​ ನೌ ಮಾಧ್ಯಮದೊಂದಿಗೆ ಮಾತನಾಡಿದ ಆರಿಫ್​ ಮೊಹಮ್ಮದ್​ ಖಾನ್, ಇಡೀ ಜಗತ್ತಿನಲ್ಲಿ ಶಾಂತಿ ಸ್ಥಾಪನೆ ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಏನು ಬೇಕೋ ಅದನ್ನು ಮಾಡಲಿದೆ ಎಂದು ಹೇಳಿದ್ದಾರೆ.  ಇನ್ನು ಈಗ ತಾಲಿಬಾನಿಗಳು ಹೇಳುತ್ತಿರುವುದು ಖಂಡಿತ ಷರಿಯತ್​ ಕಾನೂನು ಅಲ್ಲ. ಕುರಾನ್​ಗೆ ಷರಿಯತ್ ಕಾನೂನು ಎಂದು ಕರೆಯಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇವರು ತಮಗೆ ಬೇಕಾದಂತೆ ರೂಪಿಸಿಕೊಂಡ ಕಾನೂನಿಗೆ ಷರಿಯತ್​ ಎನ್ನಲಾಗುತ್ತಿದೆ ಎಂದು ಹೇಳಿದರು.

‘ಮನುಕುಲದ ಪ್ರಗತಿ ಧರ್ಮದ ಆಶಯ. ಧರ್ಮವು ಆಂತರಿಕ ಪ್ರಜ್ಞೆಗೆ ಸಂಬಂಧಪಟ್ಟ ವಿಚಾರ. ಆದರೆ ಮತಾಂಧತೆ ಎಂಬುದು ಧರ್ಮದ ಹೆಸರಲ್ಲಿ ಇತರರ ಮೇಲೆ ಪ್ರಾಬಲ್ಯ ಸಾಧಿಸುವುದಾಗಿದೆ ಎಂದು ಹೇಳಿದ ಆರಿಫ್​ ಮೊಹಮ್ಮದ್​ ಖಾನ್,  ತಾಲಿಬಾನಿಗಳ ಆಡಳಿತಕ್ಕೆ ಪಾಕಿಸ್ತಾನ ಎಷ್ಟು ಸಹಕಾರ ನೀಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತು ಎಂದೂ ಹೇಳಿದ್ದಾರೆ.  ಇನ್ನು ಕೇರಳದಲ್ಲಿ ಹಲವರು ಐಸಿಸ್​ ಉಗ್ರಸಂಘಟನೆ ಸೇರ್ಪಡೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸೇರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದರು.

ದೇಶದಲ್ಲಿ ಮುಸ್ಲಿಂ ನಾಯಕತ್ವವನ್ನು ಮುಂಚೂಣಿಗೆ ತರಲು ಪ್ರಯತ್ನ ಮಾಡುತ್ತಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ ಆರೀಫ್​ ಮೊಹಮ್ಮದ್​ ಖಾನ್​, ಈ ಜನರು ತಮಗೆ ಪ್ರತ್ಯೇಕ ಗುರುತು ಬೇಕು ಎಂಬ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು. ನಾನೊಬ್ಬ ಭಾರತೀಯ ಎಂಬುದೇ ಪ್ರತಿಯೊಬ್ಬನ ಗುರುತಾಗಿರಬೇಕು ಎಂದು ಹೇಳಿದರು.

ಇದನ್ನೂ ಓದಿ: ‘ಕುಡಿಯೋ ಎಂದು ಅಂಬರೀಷ್​ ಯಾವತ್ತೂ ಒತ್ತಾಯ ಮಾಡಲಿಲ್ಲ, ಅದು ದೊಡ್ಡಗುಣ’; ರವಿಚಂದ್ರನ್​

6 ತಿಂಗಳ ಹಿಂದೆ ಮೃತಪಟ್ಟ ಮಹಿಳೆ ಹೆಸರಲ್ಲಿ ಕೊವಿಡ್ ಎರಡನೇ ಲಸಿಕೆ ಸಕ್ಸಸ್! ಮೆಸೆಜ್ ನೋಡಿದ ಮನೆಯವರಿಗೆ ಶಾಕ್

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು