AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್- ಭಾರತದ ನಡುವೆ ವಿಮಾನ ಸಂಚಾರ ಆರಂಭಿಸಿ; ಸರ್ಕಾರಕ್ಕೆ ಪತ್ರ ಬರೆದ ತಾಲಿಬಾನ್

ಅಫ್ಘಾನಿಸ್ತಾನದ ವಿಮಾನಯಾನ ಸಚಿವ ಅಲ್ಹಜ್ ಹಮೀದುಲ್ಲ ಅಫ್ಘಾನಿಸ್ತಾನ ಹಾಗೂ ಭಾರತದ ನಡುವಿನ ವಿಮಾಣ ಸಂಚಾರವನ್ನು ಮರು ಆರಂಭಿಸುವಂತೆ ಭಾರತದ ವಿಮಾನಯಾನ ಸಚಿವಾಲಯದ ನಿರ್ದೇಶಕ ಅರುಣ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಅಫ್ಘಾನ್- ಭಾರತದ ನಡುವೆ ವಿಮಾನ ಸಂಚಾರ ಆರಂಭಿಸಿ; ಸರ್ಕಾರಕ್ಕೆ ಪತ್ರ ಬರೆದ ತಾಲಿಬಾನ್
ಏರ್ ಇಂಡಿಯಾ ವಿಮಾನ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 29, 2021 | 4:14 PM

ನವದೆಹಲಿ: ಭಾರತದಲ್ಲಿ ಕೊವಿಡ್ ಹಿನ್ನೆಲೆಯಲ್ಲಿ ಅ. 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಆದರೆ, ಅಫ್ಘನಿಸ್ತಾನ ಹಾಗೂ ಭಾರತದ ನಡುವೆ ವಿಮಾನ ಸಂಚಾರವನ್ನು ಆರಂಭಿಸಬೇಕೆಂದು ತಾಲಿಬಾನ್ ಸರ್ಕಾರ ಭಾರತದ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದೆ. ಅಫ್ಘನಿಸ್ತಾನದಲ್ಲಿ ತಾಲಿಬಾನ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಅಫ್ಘಾನ್ ಭಾರತದ ಜೊತೆ ಸಂವಹನ ನಡೆಸಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ದಾಳಿ ವೇಳೆ ಸಿಲುಕಿದ್ದ ಭಾರತೀಯರನ್ನು ಕರೆತರಲು ಭಾರತದಿಂದ ಕಾಬೂಲ್ ವಿಮಾನ ನಿಲ್ದಾಣಕ್ಕೆ ವಿಮಾನವನ್ನು ಕಳುಹಿಸಲಾಗಿತ್ತು. ಅದಾದ ಬಳಿಕ ಮತ್ತೆ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಅಫ್ಘಾನಿಸ್ತಾನದ ವಿಮಾನಯಾನ ಸಚಿವ ಅಲ್ಹಜ್ ಹಮೀದುಲ್ಲ ಅಖಂಡಜಾದ ಅಫ್ಘಾನಿಸ್ತಾನ ಹಾಗೂ ಭಾರತದ ನಡುವಿನ ವಿಮಾಣ ಸಂಚಾರವನ್ನು ಮರು ಆರಂಭಿಸುವಂತೆ ಭಾರತದ ವಿಮಾನಯಾನ ಸಚಿವಾಲಯದ ನಿರ್ದೇಶಕ ಅರುಣ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ತಾಲಿಬಾನ್ ವಕ್ತಾರ ಅಬ್ದುಲ್ ಖಾಹರ್ ಬಲ್​ಕ್ಷಿ ಕೂಡ ಪ್ರತಿಕ್ರಿಯೆ ನೀಡಿದ್ದು, ಈಗ ಕಾಬೂಲ್ ವಿಮಾನ ನಿಲ್ದಾಣದಲ್ಲಿದ್ದ ತೊಂದರೆ ನಿವಾರಣೆಯಾಗಿದ್ದು, ವಿಮಾನಗಳು ಹಾರಾಟ ನಡೆಸುತ್ತಿವೆ. ಹೀಗಾಗಿ, ಭಾರತವೂ ಅಫ್ಘಾನ್​ಗೆ ವಿಮಾನ ಸಂಚಾರವನ್ನು ಆರಂಭಿಸಿದರೆ ಸಾಕಷ್ಟು ಜನರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ. ಈಗಾಗಲೇ ಅಫ್ಘಾನಿಸ್ತಾನದ ವಿಮಾನ ಸಂಸ್ಥಗಳಾದ ಅರಿಯಾನ ಆಫ್ಘನ್ ಏರ್​ಲೈನ್ ಮತ್ತು ಕಾಮ್ ವಿಮಾನಗಳು ಭಾರತಕ್ಕೆ ಸಂಚಾರ ನಡೆಸಲು ಸಿದ್ಧವಾಗಿವೆ.

ಇತ್ತೀಚೆಗೆ ಪಾಕಿಸ್ತಾನ ಅಫ್ಘಾನಿಸ್ತಾನಕ್ಕೆ ವಿಮಾನ ಸಂಚಾರವನ್ನು ಪುನರಾರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಪತ್ರ ಬರೆದಿರುವ ಅಫ್ಘಾನಿಸ್ತಾನದ ನಾಗರಿಕ ವಿಮಾನಯಾನ ಸಚಿವ ಅಲ್ಹಾಜ್ ಹಮೀದುಲ್ಲಾ ಅಖಂಡಜಾದ, ಭಾರತ ಮತ್ತು ಅಫ್ಘಾನಿಸ್ತಾನದ ವಿಮಾನಯಾನ ಸಂಸ್ಥೆಯ ನಡುವೆ ಸುಗಮವಾದ ವೈಮಾನಿಕ ಸಂಚಾರ ನಡೆಸಬೇಕೆಂಬುದು ಈ ಪತ್ರದ ಉದ್ದೇಶ. ಭಾರತ ಅಫ್ಘಾನಿಸ್ತಾನಕ್ಕೆ ವಾಣಿಜ್ಯ ವಿಮಾನಯಾನ ಸಂಚಾರಕ್ಕೆ ಅವಕಾಶ ನೀಡಬೇಕೆಂದು ಅಫ್ಘಾನಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರ ಮನವಿ ಮಾಡುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಆದರೆ, ಭಾರತದಲ್ಲಿ ಅಕ್ಟೋಬರ್ 31ರವರೆಗೂ ಅಂತಾರಾಷ್ಟ್ರೀಯ ಕಮರ್ಷಿಯಲ್ ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಭಾರತದಲ್ಲಿ ಕೊವಿಡ್ ಮಾತ್ರವಲ್ಲದೆ ರೂಪಾಂತರಿ ವೈರಸ್​, ನಿಫಾ ವೈರಸ್ ಹಾವಳಿಯೂ ಜಾಸ್ತಿಯಾಗಿದೆ. ಹೀಗಾಗಿ, 3ನೇ ಅಲೆಯ ಕೊರೋನಾ ಹರಡುವಿಕೆಯನ್ನು ನಿಯಂತ್ರಿಸಲು ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ವಿಧಿಸಿದ್ದ ನಿಷೇಧವನ್ನು ಅಕ್ಟೋಬರ್ 31ರವರೆಗೂ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷದಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳಿಗೆ ನಿಷೇಧ ವಿಧಿಸಲಾಗಿದೆ. 2020ರ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಭಾರತದಲ್ಲಿ ನಿಷೇಧ ಹೇರಲಾಗಿದೆ. ಕೋವಿಡ್-19 ಸಾಂಕ್ರಾಮಿಕದ ನಡುವೆ ಭಾರತದಲ್ಲಿ ಅಂತಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಹಾರಾಟವನ್ನು ಅ. 31ರವರೆಗೆ ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: PM Modi Speech: ಅಫ್ಘಾನ್ ಭೂಮಿಯನ್ನು ಭಯೋತ್ಪಾದನೆಗೆ ಬಳಸಿಕೊಳ್ಳಬೇಡಿ; ಪಾಕಿಸ್ತಾನ, ಚೀನಾಗೆ ಪ್ರಧಾನಿ ಮೋದಿ ಎಚ್ಚರಿಕೆ

ಅಫ್ಘಾನ್ ಪಾಸ್​​ಪೋರ್ಟ್, ರಾಷ್ಟ್ರೀಯ ಗುರುತಿನ ಚೀಟಿ ಬದಲಾಯಿಸಲಿದೆ ತಾಲಿಬಾನ್: ವರದಿ

(Taliban Writes To India Government to Resume Flights Between Afghanistan and India)

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ