AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಒಕೆಯನ್ನು ವಾಪಾಸ್ ಕೊಟ್ಟ ನಂತರವೇ ಮುಂದಿನ ಮಾತುಕತೆ; ಪಾಕಿಸ್ತಾನದ ಪ್ರಧಾನಿಗೆ ಭಾರತ ಪ್ರತಿಕ್ರಿಯೆ

ಪಿಒಕೆ ಹಿಂದಿರುಗಿದ ನಂತರವೇ ಮಾತುಕತೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಭಾರತದೊಂದಿಗೆ ಮಾತುಕತೆ ಪ್ರಸ್ತಾವನೆಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದೆ. ನೆರೆಯ ರಾಷ್ಟ್ರ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಿ ಜಮ್ಮು ಮತ್ತು ಕಾಶ್ಮೀರದ ಆಕ್ರಮಿತ ಪ್ರದೇಶಗಳನ್ನು ಖಾಲಿ ಮಾಡಿದ ನಂತರವೇ ಪಾಕಿಸ್ತಾನದೊಂದಿಗಿನ ಮಾತುಕತೆ ಪುನರಾರಂಭವಾಗುತ್ತದೆ ಎಂಬ ತನ್ನ ನಿಲುವನ್ನು ಭಾರತ ಇಂದು ಪುನರುಚ್ಚರಿಸಿದೆ. ಸಿಂಧೂ ಜಲ ಒಪ್ಪಂದದ ಕುರಿತು ಮಾತನಾಡುತ್ತಾ ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ತ್ಯಜಿಸುವವರೆಗೆ ಒಪ್ಪಂದವು ಸ್ಥಗಿತಗೊಳ್ಳುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಪಿಒಕೆಯನ್ನು ವಾಪಾಸ್ ಕೊಟ್ಟ ನಂತರವೇ ಮುಂದಿನ ಮಾತುಕತೆ; ಪಾಕಿಸ್ತಾನದ ಪ್ರಧಾನಿಗೆ ಭಾರತ ಪ್ರತಿಕ್ರಿಯೆ
Randheer Jaiswal
ಸುಷ್ಮಾ ಚಕ್ರೆ
|

Updated on: May 29, 2025 | 7:00 PM

Share

ನವದೆಹಲಿ, ಮೇ 29: ನೆರೆಯ ರಾಷ್ಟ್ರ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಿ ಜಮ್ಮು ಮತ್ತು ಕಾಶ್ಮೀರದ ಆಕ್ರಮಿತ (ಪಿಒಕೆ) ಪ್ರದೇಶಗಳನ್ನು ಖಾಲಿ ಮಾಡಿದ ನಂತರವೇ ಪಾಕಿಸ್ತಾನದೊಂದಿಗಿನ ಮಾತುಕತೆ ಪುನರಾರಂಭವಾಗುತ್ತದೆ ಎಂಬ ತನ್ನ ನಿಲುವನ್ನು ಭಾರತ ಇಂದು ಪುನರುಚ್ಚರಿಸಿದೆ. ಪಾಕಿಸ್ತಾನದ (Pakistan) ಪ್ರಧಾನಿ ಭಾರತದೊಂದಿಗೆ ಮಾತುಕತೆಗೆ ಇಚ್ಛೆ ವ್ಯಕ್ತಪಡಿಸಿದ ಕೆಲವು ದಿನಗಳ ನಂತರ ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಈ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನದೊಂದಿಗಿನ ಯಾವುದೇ ಮಾತುಕತೆ ದ್ವಿಪಕ್ಷೀಯವಾಗಿರುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಪುನರುಚ್ಚರಿಸಿದ್ದಾರೆ.

“ಪಾಕಿಸ್ತಾನದೊಂದಿಗಿನ ನಮ್ಮ ಸಂಬಂಧದ ವಿಷಯದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಯಾವುದೇ ಒಪ್ಪಂದವು ದ್ವಿಪಕ್ಷೀಯವಾಗಿರಬೇಕು. ಭಯೋತ್ಪಾದನೆ ಮತ್ತು ಮಾತುಕತೆಗಳು ಒಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂದು ನಾವು ಪುನರುಚ್ಚರಿಸಲು ಬಯಸುತ್ತೇವೆ. ಅವರು ಪಿಒಕೆಯನ್ನು ಭಾರತಕ್ಕೆ ಹಸ್ತಾಂತರಿಸಬೇಕಾಗಿದೆ” ಎಂದು ಜೈಸ್ವಾಲ್ ಹೇಳಿದರು.

ಇದನ್ನೂ ಓದಿ
Image
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
Image
ಸೈಬರ್ ಅಪರಾಧಿಗಳ ವಿರುದ್ಧ 19 ಕಡೆ ಸಿಬಿಐ ಕಾರ್ಯಾಚರಣೆ
Image
ಬುರ್ಖಾ ಧರಿಸಿ ಸೊಸೆ ಮನೆಗೆ ನುಗ್ಗಿದ ಮಾವ, ಮುಂದೇನಾಯ್ತು?
Image
ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ನಿರ್ಬಂಧದ ನಡುವೆ ಇಲ್ಲಿದೆ ಗುಡ್ ನ್ಯೂಸ್

ಇದನ್ನೂ ಓದಿ: Video: ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು: ಪ್ರಧಾನಿ ಮೋದಿ

ಇರಾನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಕ್ ಪಿಎಂ ಶೆಹಬಾಜ್ ಷರೀಫ್ ಇತ್ತೀಚೆಗೆ ಪಾಕಿಸ್ತಾನವು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಭಾರತದೊಂದಿಗೆ ಮಾತುಕತೆಗೆ ಸಿದ್ಧವಾಗಿದೆ ಎಂದು ಹೇಳಿದ್ದರು. ಆದರೆ, ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸಿ ಪಿಒಕೆಯನ್ನು ಹಿಂದಿರುಗಿಸಿದ ನಂತರವೇ ಮಾತುಕತೆ ಸಾಧ್ಯ ಎಂದು ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್