AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srivastava Chandrasekhar: ತಮಿಳು ನಟ ಧನುಶ್​ ಜತೆ ತೆರೆ ಹಂಚಿಕೊಂಡಿದ್ದ ನಟ ಶ್ರೀವಾತ್ಸವ್​ ಚಂದ್ರಶೇಖರ್ ಆತ್ಮಹತ್ಯೆ

ಬುಧವಾರ ಮನೆಯಿಂದ ಹೊರಗೆ ಹೊರಟಿದ್ದ ಶ್ರೀವಾತ್ಸವ್​ ಶೂಟಿಂಗ್​ ಇದೆ ಎಂದು ಹೇಳಿ ಹೊರಟಿದ್ದರು. ಆದರೆ, ಅಂದು ಯಾವುದೇ ಶೂಟಿಂಗ್​ ಇರಲಿಲ್ಲ.

Srivastava Chandrasekhar: ತಮಿಳು ನಟ ಧನುಶ್​ ಜತೆ ತೆರೆ ಹಂಚಿಕೊಂಡಿದ್ದ ನಟ ಶ್ರೀವಾತ್ಸವ್​ ಚಂದ್ರಶೇಖರ್ ಆತ್ಮಹತ್ಯೆ
ಶ್ರೀವಾಸ್ತವ್​ ಚಂದ್ರಶೇಖರ್
ರಾಜೇಶ್ ದುಗ್ಗುಮನೆ
| Edited By: |

Updated on: Feb 06, 2021 | 6:57 PM

Share

ಪೆರಂಬೂರು: ವಲ್ಲಮೈ ತಾರಾಯೋ ಖ್ಯಾತಿಯ ತಮಿಳು ನಟ ಶ್ರೀವಾತ್ಸವ್​ ಚಂದ್ರಶೇಖರ್​ ಅವರು ಫೆಬ್ರವರಿ 4ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಇವರ ಅಂತ್ಯಸಂಸ್ಕಾರವನ್ನು ಕುಟುಂಬದವರು ಪೂರ್ಣಗೊಳಿಸಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ತಂದೆಯ ಹೆಸರಿನಲ್ಲಿದ್ದ ಮನೆಯಲ್ಲೇ ಶ್ರೀವಾತ್ಸವ್​ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವ ನಟ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ. ಆದರೆ, ಅವರ ಸಾವಿಗೆ ನಿಜವಾದ ಕಾರಣ ತಿಳಿದು ಬಂದಿಲ್ಲ.

ಬುಧವಾರ ಮನೆಯಿಂದ ಹೊರಗೆ ಹೊರಟಿದ್ದ ಶ್ರೀವಾತ್ಸವ್​ ಶೂಟಿಂಗ್​ ಇದೆ ಎಂದು ಹೇಳಿ ಹೊರಟಿದ್ದರು. ಆದರೆ, ಅಂದು ಯಾವುದೇ ಶೂಟಿಂಗ್​ ಇರಲಿಲ್ಲ. ಮನೆಯಿಂದ ಹೊರಟ ಶ್ರೀವಾತ್ಸವ್​ ಪೆರಂಬೂರಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀವಾತ್ಸವ್​ ಸಾವಿಗೆ ಸಾಕಷ್ಟು ನಟ-ನಟಿಯರು, ನಿರ್ದೇಶಕರು-ನಿರ್ಮಾಪಕರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ವಲ್ಲಮೈ ತಾರಾಯೋ ವೆಬ್​ ಸೀರಿಸ್​ ಮೂಲಕ ಶ್ರೀವಾತ್ಸವ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. 2019ರಲ್ಲಿ ತೆರೆಕಂಡಿದ್ದ ಧನುಶ್​ ನಟನೆಯ ಎನೈ ನೋಕಿ ಪಯೂಮ್ ತೊಟ್ಟಾ ಸಿನಿಮಾದಲ್ಲಿ ಸಹನಟನಾಗಿ ಶ್ರೀವಾತ್ಸವ್ ನಟಿಸಿದ್ದರು.

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ನಂತರ ಸಾಕಷ್ಟು ನಟ-ನಟಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಸ್ಪರ್ಧಿ ಜಯಶ್ರೀ ಕೂಡ ನೇಣಿಗೆ ಶರಣಾಗಿದ್ದರು.

ಆತ್ಮಹತ್ಯೆಗೂ ಮುನ್ನ ಜಯಶ್ರೀ ಪಶ್ಚಾತಾಪದ ನುಡಿ.. ಡೆತ್ ​ನೋಟ್​ನಲ್ಲಿ ಬರೆದಿಟ್ಟಿದ್ದಾರೆ ಅಸಲಿ ಸತ್ಯ

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ