AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srivastava Chandrasekhar: ತಮಿಳು ನಟ ಧನುಶ್​ ಜತೆ ತೆರೆ ಹಂಚಿಕೊಂಡಿದ್ದ ನಟ ಶ್ರೀವಾತ್ಸವ್​ ಚಂದ್ರಶೇಖರ್ ಆತ್ಮಹತ್ಯೆ

ಬುಧವಾರ ಮನೆಯಿಂದ ಹೊರಗೆ ಹೊರಟಿದ್ದ ಶ್ರೀವಾತ್ಸವ್​ ಶೂಟಿಂಗ್​ ಇದೆ ಎಂದು ಹೇಳಿ ಹೊರಟಿದ್ದರು. ಆದರೆ, ಅಂದು ಯಾವುದೇ ಶೂಟಿಂಗ್​ ಇರಲಿಲ್ಲ.

Srivastava Chandrasekhar: ತಮಿಳು ನಟ ಧನುಶ್​ ಜತೆ ತೆರೆ ಹಂಚಿಕೊಂಡಿದ್ದ ನಟ ಶ್ರೀವಾತ್ಸವ್​ ಚಂದ್ರಶೇಖರ್ ಆತ್ಮಹತ್ಯೆ
ಶ್ರೀವಾಸ್ತವ್​ ಚಂದ್ರಶೇಖರ್
ರಾಜೇಶ್ ದುಗ್ಗುಮನೆ
| Edited By: |

Updated on: Feb 06, 2021 | 6:57 PM

Share

ಪೆರಂಬೂರು: ವಲ್ಲಮೈ ತಾರಾಯೋ ಖ್ಯಾತಿಯ ತಮಿಳು ನಟ ಶ್ರೀವಾತ್ಸವ್​ ಚಂದ್ರಶೇಖರ್​ ಅವರು ಫೆಬ್ರವರಿ 4ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಇವರ ಅಂತ್ಯಸಂಸ್ಕಾರವನ್ನು ಕುಟುಂಬದವರು ಪೂರ್ಣಗೊಳಿಸಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ತಂದೆಯ ಹೆಸರಿನಲ್ಲಿದ್ದ ಮನೆಯಲ್ಲೇ ಶ್ರೀವಾತ್ಸವ್​ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವ ನಟ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ. ಆದರೆ, ಅವರ ಸಾವಿಗೆ ನಿಜವಾದ ಕಾರಣ ತಿಳಿದು ಬಂದಿಲ್ಲ.

ಬುಧವಾರ ಮನೆಯಿಂದ ಹೊರಗೆ ಹೊರಟಿದ್ದ ಶ್ರೀವಾತ್ಸವ್​ ಶೂಟಿಂಗ್​ ಇದೆ ಎಂದು ಹೇಳಿ ಹೊರಟಿದ್ದರು. ಆದರೆ, ಅಂದು ಯಾವುದೇ ಶೂಟಿಂಗ್​ ಇರಲಿಲ್ಲ. ಮನೆಯಿಂದ ಹೊರಟ ಶ್ರೀವಾತ್ಸವ್​ ಪೆರಂಬೂರಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀವಾತ್ಸವ್​ ಸಾವಿಗೆ ಸಾಕಷ್ಟು ನಟ-ನಟಿಯರು, ನಿರ್ದೇಶಕರು-ನಿರ್ಮಾಪಕರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ವಲ್ಲಮೈ ತಾರಾಯೋ ವೆಬ್​ ಸೀರಿಸ್​ ಮೂಲಕ ಶ್ರೀವಾತ್ಸವ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. 2019ರಲ್ಲಿ ತೆರೆಕಂಡಿದ್ದ ಧನುಶ್​ ನಟನೆಯ ಎನೈ ನೋಕಿ ಪಯೂಮ್ ತೊಟ್ಟಾ ಸಿನಿಮಾದಲ್ಲಿ ಸಹನಟನಾಗಿ ಶ್ರೀವಾತ್ಸವ್ ನಟಿಸಿದ್ದರು.

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ನಂತರ ಸಾಕಷ್ಟು ನಟ-ನಟಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಸ್ಪರ್ಧಿ ಜಯಶ್ರೀ ಕೂಡ ನೇಣಿಗೆ ಶರಣಾಗಿದ್ದರು.

ಆತ್ಮಹತ್ಯೆಗೂ ಮುನ್ನ ಜಯಶ್ರೀ ಪಶ್ಚಾತಾಪದ ನುಡಿ.. ಡೆತ್ ​ನೋಟ್​ನಲ್ಲಿ ಬರೆದಿಟ್ಟಿದ್ದಾರೆ ಅಸಲಿ ಸತ್ಯ

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ