AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ಮತಗಟ್ಟೆ ಮನೆ ಪಕ್ಕದಲ್ಲಿರುವ ಕಾರಣ ನಟ ವಿಜಯ್ ಸೈಕಲ್​ನಲ್ಲಿ ಬಂದಿದ್ದು, ಬೇರೆ ಅರ್ಥ ಕಲ್ಪಿಸಬೇಡಿ; ಸಾರ್ವಜನಿಕ ಸಂಪರ್ಕಾಧಿಕಾರಿಯಿಂದ ಸ್ಪಷ್ಟನೆ

Tamil Nadu Assembly Elections 2021: ವಿಜಯ್ ಮನೆಯ ಪಕ್ಕವೇ ಮತಗಟ್ಟೆ ಇತ್ತು. ಕಿರಿದಾದ ರಸ್ತೆಯಲ್ಲಿ ಕಾರು ತೆಗೆದುಕೊಂಡು ಹೋಗಿ ವಾಹನ ದಟ್ಟಣೆಯುಂಟು ಮಾಡುವುದನ್ನು ತಪ್ಪಿಸಲು ಅವರು ಕಾರಿನ ಬದಲು ಸೈಕಲ್​ನಲ್ಲಿ ಹೋಗಿದ್ದಾರೆ ಎಂದ ಟೀಂ ವಿಜಯ್.

Thalapathy Vijay: ಮತಗಟ್ಟೆ ಮನೆ ಪಕ್ಕದಲ್ಲಿರುವ ಕಾರಣ ನಟ ವಿಜಯ್ ಸೈಕಲ್​ನಲ್ಲಿ ಬಂದಿದ್ದು, ಬೇರೆ ಅರ್ಥ ಕಲ್ಪಿಸಬೇಡಿ; ಸಾರ್ವಜನಿಕ ಸಂಪರ್ಕಾಧಿಕಾರಿಯಿಂದ ಸ್ಪಷ್ಟನೆ
ಮತಗಟ್ಟೆಗೆ ಸೈಕಲ್​ನಲ್ಲಿ ಬಂದ ನಟ ವಿಜಯ್
Follow us
ರಶ್ಮಿ ಕಲ್ಲಕಟ್ಟ
|

Updated on: Apr 07, 2021 | 12:40 PM

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗ ಮತದಾನ ಮಾಡಲು ತಮಿಳು ನಟ ವಿಜಯ್ ಸೈಕಲ್​ನಲ್ಲಿ ಮತಗಟ್ಟೆಗೆ ಆಗಮಿಸಿದ್ದರು. ಚೆನ್ನೈನ ರಸ್ತೆಯಲ್ಲಿ ಸೈಕಲ್ ತುಳಿಯುತ್ತಾ ವಿಜಯ್ ಬರುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಸೈಕಲ್​ನಲ್ಲಿ ಬರುತ್ತಿರುವ ವ್ಯಕ್ತಿ ದಳಪತಿ ವಿಜಯ್ ಎಂದು ಜನರಿಗೆ ಗೊತ್ತಾದ ಕೂಡಲೇ ಕೆಲವರು ಹಿಂಬಾಲಿಸಿ ಫೊಟೊ ತೆಗೆಯಲು ಆರಂಭಿಸಿದಾಗ ವಿಜಯ್ ವೇಗವಾಗಿ ಸೈಕಲ್ ತುಳಿದು ಮತಗಟ್ಟೆಗೆ ಬಂದಿದ್ದರು. ಮತಗಟ್ಟೆಗೆ ಬಂದಾಗಲೂ ಅಭಿಮಾನಿಗಳು ಸುತ್ತುವರಿದಿದ್ದು, ಅವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಗಿ ಬಂದಿತ್ತು.

ಸೈಕಲ್ ತುಳಿದು ವಿಜಯ್ ಮತಗಟ್ಟೆಗೆ ಬಂದಿರುವುದು ಸುದ್ದಿಯಾಗುತ್ತಿದ್ದಂತೆ, ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿ ವಿಜಯ್ ಸೈಕಲ್ ನಲ್ಲಿ ಬಂದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿತ್ತು. ಬಿಜೆಪಿ ನೇತೃತ್ವದ  ಕೇಂದ್ರ ಸರ್ಕಾರದ ವಿರುದ್ಧ ವಿಜಯ್ ಮೌನವಾಗಿ ಪ್ರತಿಭಟನೆ ತೋರಿದ್ದಾರೆ ಎಂಬ ಪೋಸ್ಟ್ ಗಳು ಫೇಸ್​ಬುಕ್, ಟ್ವಿಟರ್​ನಲ್ಲಿ  ಹರಿದಾಡಿತ್ತು. ಆದರೆ ವಿಜಯ್ ಸೈಕಲ್ ಸವಾರಿ ಹಿಂದೆ ಯಾವುದೇ ಉದ್ದೇಶ ಇರಲಿಲ್ಲ ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಟ್ವೀಟ್ ಮಾಡಿದ್ದಾರೆ.

ವಿಜಯ್ ಮನೆಯ ಪಕ್ಕವೇ ಮತಗಟ್ಟೆ ಇತ್ತು. ಕಿರಿದಾದ ರಸ್ತೆಯಲ್ಲಿ ಕಾರು ತೆಗೆದುಕೊಂಡು ಹೋಗಿ ವಾಹನ ದಟ್ಟಣೆಯುಂಟು ಮಾಡುವುದನ್ನು ತಪ್ಪಿಸಲು ಅವರು ಕಾರಿನ ಬದಲು ಸೈಕಲ್​ನಲ್ಲಿ ಹೋಗಿದ್ದಾರೆ. ಇದರ ಹಿಂದೆ ಬೇರೆ ಯಾವ ಉದ್ದೇಶವೂ ಇಲ್ಲ ಎಂದು ವಿಜಯ್ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ರಿಯಾಜ್. ಕೆ. ಅಹಮದ್ ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನ ಆಡಳಿತರೂಢ ಪಕ್ಷ ಎಐಎಡಿಎಂಕೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಇಂಧನ ಬೆಲೆ ಏರಿಕೆ ವಿರುದ್ಧ ವಿಜಯ್ ಸೈಕಲ್ ತುಳಿದು ಪ್ರತಿಭಟನೆಯ ಸಂದೇಶವನ್ನು ದಾಟಿಸಿದ್ದಾರೆ ಎಂದು ಡಿಎಂಕೆಯ ಹಲವಾರು ನಾಯಕರು ಹೇಳಿಕೆ ನೀಡಿದ ಬೆನ್ನಲ್ಲೇ ವಿಜಯ್ ಅವರ ತಂಡ ಈ ಸ್ಪಷ್ಟನೆ ನೀಡಿದೆ.

ವಿಜಯ್ ಅವರು ಸೈಕಲ್ ನಲ್ಲಿ ಮತಗಟ್ಟೆಗೆ ಬಂದಿರುವುದು ಇಂಧನ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಆಗಿರಲಿಲ್ಲ. ಇನ್ನೊಬ್ಬರ ಬೈಕ್ ಮೇಲೆ ಸವಾರಿ ಮಾಡುವುದನ್ನು ಡಿಎಂಕೆ ನಿಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಹೇಳಿದ್ದಾರೆ.

ಇದನ್ನೂ ಓದಿThalapathy Vijay: ಸೈಕಲ್​ನಲ್ಲಿ ಬಂದು ಮತದಾನ ಮಾಡಿದ ದಳಪತಿ ವಿಜಯ್​! ಪೆಟ್ರೋಲ್​ ಬೆಲೆ ಏರಿಕೆಗೆ ನಟನ ತಿರುಗೇಟು?

Tamil Nadu Elections 2021: ತಮಿಳುನಾಡಿನಲ್ಲಿ ಚುನಾವಣೆಗೆ ಮುನ್ನ ಹಣ ಹಂಚಲಾಗಿತ್ತು: ಕಮಲ್ ಹಾಸನ್ ಆರೋಪ

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?