AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

ತಮಿಳುನಾಡಿನ ಜನರು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಸ್ವಾಗತಿಸಿದ್ದಾರೆ. ಎತ್ತು ಮತ್ತು ಯುವಜನರಿಬ್ಬರೂ ಸುರಕ್ಷತೆಯಿಂದ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ತಮಿಳುನಾಡಿನ ಸಂಸ್ಕೃತಿ ರಕ್ಷಣೆಗೆ ಸದಾ ಬದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ  ಅತ್ಯವಶ್ಯಕ: ರಾಹುಲ್ ಗಾಂಧಿ
ತಮಿಳುನಾಡಿಗೆ ಆಗಮಿಸಿದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ
guruganesh bhat
| Updated By: Lakshmi Hegde|

Updated on:Jan 14, 2021 | 2:25 PM

Share

ಚೆನ್ನೈ: ತನ್ನದೇ ಪ್ರತ್ಯೇಕ ಭಾಷೆ, ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿರುವ ತಮಿಳುನಾಡನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ ಎಂದು ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಮಕರ ಸಂಕ್ರಾಂತಿಯಂದು ಮಧುರೈನಲ್ಲಿ ನಡೆದ ಜಲ್ಲಿಕಟ್ಟು ಉತ್ಸವದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡ ಅವರು, ಯಾರಿಂದಲೂ ತಮಿಳು ಸಂಸ್ಕೃತಿಗೆ ಘಾಸಿ ತರಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶ ರವಾನಿಸಲು ತಮಿಳುನಾಡಿಗೆ ಭೇಟಿಯಿತ್ತಿದ್ದೇನೆ ಎಂದು ಘೋಷಿಸಿದರು.

ತಮಿಳುನಾಡಿನ ಜನರ ಪ್ರೀತಿಗೆ ಋಣಿ ತಮಿಳುನಾಡಿನ ಜನರು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಸ್ವಾಗತಿಸಿದ್ದಾರೆ. ಅವರ ಪ್ರೀತಿಗೆ ಋಣಿಯಾಗಿದ್ದೇನೆ. ಎತ್ತು ಮತ್ತು ಯುವಜನರಿಬ್ಬರೂ ಸುರಕ್ಷತೆಯಿಂದ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ತಮಿಳುನಾಡಿನ ಸಂಸ್ಕೃತಿ ರಕ್ಷಣೆಗೆ ಸದಾ ಬದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಈ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಲಾಭವಾಗಬಹುದಾದ ಎಲ್ಲ ಅವಕಾಶಗಳನ್ನೂ ರಾಜಕೀಯ ಪಕ್ಷಗಳು ಉಪಯೋಗಿಸಿಕೊಳ್ಳುತ್ತಿವೆ. ಆರ್​ಎಸ್​ಎಸ್​ ಸರ ಸಂಘಚಾಲಕ ಮೋಹನ್ ಭಾಗವತ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಮಿಳುನಾಡಿನಲ್ಲಿ ಮಕರ ಸಂಕ್ರಾಂತಿ ಆಚರಿಸುತ್ತಿದ್ದಾರೆ.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

Published On - 2:25 pm, Thu, 14 January 21

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು