AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ದೇಶಾದ್ಯಂತ ದೇವಸ್ಥಾನಗಳಲ್ಲಿ ತಮಿಳು ಸ್ತೋತ್ರಗಳನ್ನೂ ಪಠಿಸುವಂತಾಗಬೇಕು‘-ಮದ್ರಾಸ್ ಹೈಕೋರ್ಟ್​

ನಮ್ಮ ದೇಶದಲ್ಲಿ ಸಂಸ್ಕೃತ ಒಂದೇ ದೇವಭಾಷೆ ಎಂದು ನಂಬಲಾಗಿದೆ. ಆದರೆ ತಮಿಳು ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದು ಎಂದು ಮದ್ರಾಸ್​ ಹೈಕೋರ್ಟ್​ ಹೇಳಿದೆ.

’ದೇಶಾದ್ಯಂತ ದೇವಸ್ಥಾನಗಳಲ್ಲಿ ತಮಿಳು ಸ್ತೋತ್ರಗಳನ್ನೂ ಪಠಿಸುವಂತಾಗಬೇಕು‘-ಮದ್ರಾಸ್ ಹೈಕೋರ್ಟ್​
ಮದ್ರಾಸ್​ ಹೈಕೋರ್ಟ್​
TV9 Web
| Edited By: |

Updated on:Sep 13, 2021 | 5:12 PM

Share

ದೇವಸ್ಥಾನಗಳಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೇವಲ ಸಂಸ್ಕೃತ ಸ್ತೋತ್ರ, ಮಂತ್ರಗಳನ್ನು ಮಾತ್ರ ಏಕೆ ಪಠಿಸಬೇಕು ಎಂದು ಮದ್ರಾಸ್​ ಹೈಕೋರ್ಟ್​ ಪ್ರಶ್ನಿಸಿದೆ. ಅಷ್ಟೇ ಅಲ್ಲ, ದೇಶಾದ್ಯಂತ ಎಲ್ಲ ದೇಗುಲಗಳಲ್ಲಿ ಸಂಸ್ಕೃತ ಸ್ತೋತ್ರಗಳೊಂದಿಗೆ ತಮಿಳು ಸ್ತೋತ್ರಗಳನ್ನೂ ಪಠಿಸುವಂತಾಗಬೇಕು ಎಂದು ಹೇಳಿದೆ. ನ್ಯಾಯಮೂರ್ತಿ ಎನ್​. ಕಿರುಬಾಕರನ್​ ಮತ್ತು ನ್ಯಾ.ಬಿ.ಪುಗಲೇಂಧಿ ಅವರ ಪೀಠ ಹೀಗೊಂದು ಅಭಿಪ್ರಾಯ ಮುಂದಿಟ್ಟಿದೆ. ತಮಿಳನ್ನು ದೇವರ ಭಾಷೆ ಎಂದು ಉಲ್ಲೇಖಿಸಿದೆ.  

ನಮ್ಮ ದೇಶದಲ್ಲಿ ಸಂಸ್ಕೃತ ಒಂದೇ ದೇವಭಾಷೆ ಎಂದು ನಂಬಲಾಗಿದೆ. ಆದರೆ ತಮಿಳು ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದು. ಅಷ್ಟೇ ಅಲ್ಲ, ಶಿವನು ನೃತ್ಯ ಮಾಡುತ್ತಿದ್ದಾಗ ಅವನ ಢಮರುಗದಿಂದ ಹುಟ್ಟಿದ ಭಾಷೆ ಇದು ಎಂಬ ನಂಬಿಕೆಯೂ ಇದೆ. ಹಾಗೇ, ತಮಿಳು ಭಾಷೆಯನ್ನು ಸೃಷ್ಟಿ ಮಾಡಿದ್ದು ಭಗವಾನ್ ಮುರುಗ ಎಂಬ ಮಾತೂ ಕೂಡ ಇದೆ. ಇಷ್ಟೆಲ್ಲ ಇರುವಾಗ ತಮಿಳು ಭಾಷೆಯನ್ನು ದೇವರ ಭಾಷೆಯೆಂದು ಪರಿಗಣಿಸುವುದು ಯೋಗ್ಯ ಇದೆ ಎಂದು ಮದ್ರಾಸ್​ ಹೈಕೋರ್ಟ್ ಹೇಳಿದೆ. ತಮಿಳುನಾಡಿನಲ್ಲಿ ಇರುವ ದೇಗುಲಗಳಲ್ಲೇ ತಮಿಳು ಸ್ತೋತ್ರಗಳ ಪಠಣ ಆಗದಿದ್ದರೆ, ದೇಶದಲ್ಲಿ ಇನ್ಯಾವ ದೇವಸ್ಥಾನಗಳೂ ಇದನ್ನು ಅಳವಡಿಸಿಕೊಳ್ಳುವುದಿಲ್ಲ ಎಂದು ಕಿವಿಮಾತನ್ನೂ ಹೇಳಿದೆ.

ಕರೂರ ಜಿಲ್ಲೆಯಲ್ಲಿರುವ  ಅರುಲ್ಮಿಗು ಕಲ್ಯಾಣ ಪಶುಪತೇಶ್ವರ ದೇವಸ್ಥಾನ ಪವಿತ್ರೀಕರಣ ಧಾರ್ಮಿಕ ಕಾರ್ಯಕ್ರಮದ ವೇಳೆ, ತಿರುಮುರೈಕಲ್ತ ಮಿಳು ಶೈವ ಮಂತ್ರಂ ( ಶಿವನ ಸ್ತೋತ್ರಗಳು) ಮತ್ತು ಸಂತ ಅಮರಾವತಿ ಆತರಂಗರೈ ಕರೂರರ ಹಾಡುಗಳನ್ನು ಸ್ತುತಿಸಲು ಅವಕಾಶ ಮಾಡಿಕೊಡುವಂತೆ ಸ್ಥಳೀಯ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರು ಹೀಗೆ ಹೇಳಿದ್ದಾರೆ.  ಸಂಸ್ಕೃತ  ಅಗಾಧವಾದ ಪ್ರಾಚೀನ ಸಾಹಿತ್ಯ ಹೊಂದಿದ ಪವಿತ್ರ ಭಾಷೆ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಅದಕ್ಕೆ ಸಮನಾಗಿ ಬೇರೆ ಭಾಷೆಗಳಿಲ್ಲ ಎಂದು ಕೊಳ್ಳಬಾರದು. ಅದೊಂದೇ ದೇವಭಾಷೆ ಅಲ್ಲ ಎಂದು ಇಬ್ಬರು ನ್ಯಾಯಮೂರ್ತಿಗಳ ಪೀಠ ಹೇಳಿದೆ.

ಇದನ್ನೂ ಓದಿ: ವಿವಾದಾತ್ಮಕ ಫೋಟೋಶೂಟ್​ ಮಾಡಿಸಿ ಬಂಧನಕ್ಕೆ ಒಳಗಾದ ಕಿರುತೆರೆ ನಟಿ

ಟಿ20 ವಿಶ್ವಕಪ್​ಗಾಗಿ ಪಾಕ್ ಕ್ರಿಕೆಟ್​ಗೆ ಆಸ್ಟ್ರೇಲಿಯಾದ ಡೇಂಜರಸ್ ಬ್ಯಾಟ್ಸ್​ಮನ್ ನೂತನ ಕೋಚ್!

(Tamil hymns should also be chanted along with Sanskrit in temples says Madras HC)

Published On - 5:10 pm, Mon, 13 September 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ