AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstrual Cramp: ಮುಟ್ಟಿನ ನೋವು ತಾಳಲಾರದೆ ಅತಿಯಾಗಿ ಮಾತ್ರೆ ತೆಗೆದುಕೊಂಡ ಯುವತಿ ಸಾವು

ತಮಿಳುನಾಡಿನ ತಿರುಚ್ಚಿಯಲ್ಲಿ ಮುಟ್ಟಿನ ಸೆಳೆತ ತಾಳಲಾರದೆ 18 ವರ್ಷದ ಯುವತಿಯೊಬ್ಬಳು ಅತಿಯಾಗಿ ಔಷಧಿ ತೆಗೆದುಕೊಂಡಿದ್ದಾಳೆ. ಇದರಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ. ಆಕೆ ತೆಗೆದುಕೊಂಡ ಮಾತ್ರೆಗಳ ಓವರ್ ಡೋಸ್​ನಿಂದಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Menstrual Cramp: ಮುಟ್ಟಿನ ನೋವು ತಾಳಲಾರದೆ ಅತಿಯಾಗಿ ಮಾತ್ರೆ ತೆಗೆದುಕೊಂಡ ಯುವತಿ ಸಾವು
ಮುಟ್ಟಿನ ಸೆಳೆತ
ಸುಷ್ಮಾ ಚಕ್ರೆ
|

Updated on: Aug 29, 2024 | 7:56 PM

Share

ತಿರುಚ್ಚಿ: ತಮಿಳುನಾಡಿನಲ್ಲಿ 18 ವರ್ಷದ ಯುವತಿಯೊಬ್ಬಳು ಮುಟ್ಟಿನ ಸೆಳೆತವನ್ನು ನಿವಾರಿಸಲು ಮಿತಿಮೀರಿದ ಔಷಧ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆ. 21ರಂದು ವಿಒರೀತ ಹೊಟ್ಟೆ ನೋವಿನಿಂದ ಒದ್ದಾಡುತ್ತಿದ್ದ ತಿರುಚ್ಚಿಯ ಮುಸಿರಿ ತಾಲೂಕಿನ ಸಮೀಪದ ಗ್ರಾಮದ 18 ವರ್ಷದ ಬಾಲಕಿ ಮಾತ್ರೆ ಸೇವಿಸಿದ ಬಳಿಕ ಸಾವನ್ನಪ್ಪಿದ್ದಾಳೆ.

ತಿರುಚ್ಚಿಯ ಪುಲಿವಲಂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಟೈಮ್ಸ್​ ಆಫ್ ಇಂಡಿಯಾ ವರದಿ ಪ್ರಕಾರ, ಆ ಯುವತಿಗೆ ಪ್ರತಿ ತಿಂಗಳೂ ತೀವ್ರವಾದ ಮುಟ್ಟಿನ ಸೆಳೆತ ಉಂಟಾಗುತ್ತಿತ್ತು. ತೀವ್ರವಾದ ಹೊಟ್ಟೆ ನೋವನ್ನು ನಿವಾರಿಸಲು ಆಕೆ ಅನೇಕ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಳು. ಈ ಬಾರಿಯೂ ಅದೇ ರೀತಿ ಔಷಧಿಯನ್ನು ಸೇವಿಸಿದ ನಂತರ, ಅವಳು ವಾಂತಿ ಮಾಡಲು ಪ್ರಾರಂಭಿಸಿದಳು.

ಇದನ್ನೂ ಓದಿ: ಪಂಜಾಬ್​ನಲ್ಲಿದ್ದ ತಂದೆಯನ್ನು ಪತ್ತೆಹಚ್ಚಲು 20 ವರ್ಷಗಳ ಬಳಿಕ ಜಪಾನ್​ನಿಂದ ಬಂದಿಳಿದ ಮಗ

ತಕ್ಷಣ ಆಕೆಯ ಪೋಷಕರು ಅವಳನ್ನು ಓಮಂಧೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ಕರೆದೊಯ್ದರು. ಚಿಕಿತ್ಸೆಯ ನಂತರ, ಅವಳು ಡಿಸ್ಚಾರ್ಜ್ ಆಗಿದ್ದಳು. ಆದರೆ ಮನೆಗೆ ಹಿಂದಿರುಗಿದ ನಂತರ ಪ್ರಜ್ಞೆ ಕಳೆದುಕೊಂಡಳು. ನಂತರ ಆಕೆಯ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ (MGMGH) ದಾಖಲಿಸಿದ್ದರು. ಆದರೆ, ಮಿತಿಮೀರಿದ ಔಷಧ ಸೇವನೆಗೆ ಸಂಬಂಧಿಸಿದ ತೊಡಕುಗಳಿಂದ ಅವಳು ಸಾವನ್ನಪ್ಪಿದಳು.

ಆ ಯುವತಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಔಷಧಿಗಳ ಅತಿಯಾದ ಡೋಸೇಜ್ ಮಾರಣಾಂತಿಕ ಆರೋಗ್ಯ ತೊಡಕುಗಳಿಗೆ ಕಾರಣವೆಂದು ಉಲ್ಲೇಖಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​