AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಜಲ್ಲಿಕಟ್ಟು ಗೂಳಿ ಪಳಗಿಸುವ ಕ್ರೀಡೆಯಲ್ಲಿ ಇಬ್ಬರು ಸಾವು, 70 ಮಂದಿಗೆ ಗಾಯ

ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಬುಧವಾರ ನಡೆದ ಜಲ್ಲಿಕಟ್ಟು ಗೂಳಿ ಪಳಗಿಸುವ ಹಬ್ಬದಲ್ಲಿ ಇಬ್ಬರು ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಆಶಾ ಅಜಿತ್, ಕ್ಷೇತ್ರದ ಸಂಸದ ಕಾರ್ತಿ ಪಿ.ಚಿದಂಬರಂ, ಡಿಎಂಕೆ ಸಚಿವ ಪೆರಿಯಕರುಪ್ಪನ್ ಅವರ ಸಮ್ಮುಖದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 271ಗೂಳಿಗಳು ಮತ್ತು 81 ಗೂಳಿ ಪಳಗಿಸುವವರು ಭಾಗವಹಿಸಿದ್ದರು.

ತಮಿಳುನಾಡು: ಜಲ್ಲಿಕಟ್ಟು ಗೂಳಿ ಪಳಗಿಸುವ ಕ್ರೀಡೆಯಲ್ಲಿ ಇಬ್ಬರು ಸಾವು, 70 ಮಂದಿಗೆ ಗಾಯ
ಜಲ್ಲಿಕಟ್ಟು ಗೂಳಿImage Credit source: India Today
ನಯನಾ ರಾಜೀವ್
|

Updated on: Jan 17, 2024 | 2:46 PM

Share

ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಬುಧವಾರ ನಡೆದ ಜಲ್ಲಿಕಟ್ಟು ಗೂಳಿ ಪಳಗಿಸುವ ಕ್ರೀಡೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಆಶಾ ಅಜಿತ್, ಕ್ಷೇತ್ರದ ಸಂಸದ ಕಾರ್ತಿ ಪಿ.ಚಿದಂಬರಂ, ಡಿಎಂಕೆ ಸಚಿವ ಪೆರಿಯಕರುಪ್ಪನ್ ಅವರ ಸಮ್ಮುಖದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ 271ಗೂಳಿಗಳು ಮತ್ತು 81 ಗೂಳಿ ಪಳಗಿಸುವವರು ಭಾಗವಹಿಸಿದ್ದರು.

ಮಧುರೈ ಜಿಲ್ಲೆಯ ಅಲಂಗನಲ್ಲೂರು ಜಲ್ಲಿಕಟ್ಟು ಕಾರ್ಯಕ್ರಮದಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ಓರ್ವ ಪಳಗಿಸುವವನು, ಓರ್ವ ಪೊಲೀಸ್ ಸಿಬ್ಬಂದಿ ಮತ್ತು ಓರ್ವ ಗೂಳಿಯ ಮಾಲೀಕ, ಮೂವರು ಗಾಯಗೊಂಡಿದ್ದಾರೆ. ಒಟ್ಟು 1,200 ಹೋರಿಗಳು ಮತ್ತು 800 ಗೂಳಿ ಪಳಗಿಸುವವರು ಜಲ್ಲಿಕಟ್ಟು ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿದ್ದರು.

ಕಾರ್ಯಕ್ರಮದ ವಿಜೇತರು, ಗೂಳಿ ಪಳಗಿಸುವವರು ನಿಸ್ಸಾನ್ ಮ್ಯಾಗ್ನೈಟ್ ಕಾರನ್ನು ಸ್ವೀಕರಿಸಲು ಸಿದ್ಧರಾಗಿದ್ದಾರೆ, ಹಾಗೆಯೇ ಭಾಗವಹಿಸುವ ಪ್ರತಿ ಗೂಳಿಗೆ ಚಿನ್ನದ ನಾಣ್ಯವನ್ನು ನೀಡಲಾಗುತ್ತದೆ.

ಮತ್ತಷ್ಟು ಓದಿ: ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು; ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ 36 ಮಂದಿಗೆ ಗಾಯ

ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, 90 ಸಿಬ್ಬಂದಿಯನ್ನು ಒಳಗೊಂಡ ವೈದ್ಯಕೀಯ ತಂಡ, 70 ಸಿಬ್ಬಂದಿಯನ್ನು ಒಳಗೊಂಡ ಪಶುವೈದ್ಯ ತಂಡ ಮತ್ತು ರೆಡ್‌ಕ್ರಾಸ್ ಸ್ವಯಂಸೇವಕರು ಆಂಬ್ಯುಲೆನ್ಸ್‌ಗಳೊಂದಿಗೆ ಸ್ಥಳದಲ್ಲಿದ್ದರು.

ಮದ್ರಾಸ್ ಹೈಕೋರ್ಟಿನ ಆದೇಶದ ಆಧಾರದ ಮೇಲೆ 2006 ರಲ್ಲಿ ಮೊದಲ ಬಾರಿಗೆ ಗೂಳಿ ಪಳಗಿಸುವ ಕ್ರೀಡೆಯನ್ನು ನಿಷೇಧಿಸಲಾಯಿತು. ನಂತರ 2014 ರಲ್ಲಿ, ಸುಪ್ರೀಂ ಕೋರ್ಟ್ ಕೂಡ ಪ್ರಾಣಿ ಹಿಂಸೆಯ ಆಧಾರದ ಮೇಲೆ ಕ್ರೀಡೆಯನ್ನು ನಿಷೇಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ