Tamil Nadu Road Accident: ತಮಿಳುನಾಡಿನ ತಿರುತ್ತಣಿಯಲ್ಲಿ ಭಾರೀ ರಸ್ತೆ ಅಪಘಾತ, ಐವರು ವಿದ್ಯಾರ್ಥಿಗಳು ಸಾವು

ತಮಿಳುನಾಡಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಅಸುನೀಗಿದ್ದಾರೆ. ಪೊಲೀಸರ ಪ್ರಕಾರ, ಒಟ್ಟು ಏಳು ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್​ ಒಂದು ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಸುದ್ದಿ ಹೊರಬಿದ್ದ ನಂತರ ರಕ್ಷಣಾ ತಂಡಗಳು ಮತ್ತು ಕನಗಮ್ಮಛತ್ರಂ ಪೊಲೀಸರು ಘಟನಾ ಸ್ಥಳಕ್ಕೆ ಬಂದಿದ್ದಾರೆ.

Tamil Nadu Road Accident: ತಮಿಳುನಾಡಿನ ತಿರುತ್ತಣಿಯಲ್ಲಿ ಭಾರೀ ರಸ್ತೆ ಅಪಘಾತ, ಐವರು ವಿದ್ಯಾರ್ಥಿಗಳು ಸಾವು
ಅಪಘಾತ
Follow us
| Updated By: Digi Tech Desk

Updated on:Aug 12, 2024 | 11:41 AM

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರ ಪ್ರಕಾರ, ಒಟ್ಟು ಏಳು ವಿದ್ಯಾರ್ಥಿಗಳು ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್​ ಒಂದು ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ರಸ್ತೆ ಅಪಘಾತದ ಸುದ್ದಿ ಹೊರಬಿದ್ದ ನಂತರ ರಕ್ಷಣಾ ತಂಡಗಳು ಮತ್ತು ಕನಗಮ್ಮಛತ್ರಂ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದರು. ಅಪಘಾತದಲ್ಲಿ ವಾಹನವು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರಿಂದ ದೇಹಗಳನ್ನು ಹೊರತೆಗೆಯುವುದು ಸವಾಲಿನ ಕೆಲಸವಾಗಿತ್ತು.

ಗಾಯಗೊಂಡ ಇಬ್ಬರನ್ನು ತಕ್ಷಣ ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಕನಗಮ್ಮಛತ್ರಂ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತಕ್ಕೀಡಾದ ಐವರು ವಿದ್ಯಾರ್ಥಿಗಳು ಓಂಗೋಲ್ ಮೂಲದವರಾಗಿದ್ದು, ಚೆನ್ನೈನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಾರೆ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು

ಚೆನ್ನೈನ ಖಾಸಗಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳು ಮತ್ತು ಚಾಲಕ ಸೇರಿದಂತೆ ಎಂಟು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿರುವಣ್ಣಾಮಲೈ ಮತ್ತು ಆಂಧ್ರಪ್ರದೇಶದ ದೇವಸ್ಥಾನಗಳಿಗೆ ಭೇಟಿ ನೀಡಿ ಚೆನ್ನೈಗೆ ಹಿಂತಿರುಗುತ್ತಿದ್ದಾಗ ವಾಹನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಐವರು ವಿದ್ಯಾರ್ಥಿಗಳು ತಕ್ಷಣ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಕುರ್ದನ್ (21), ಯುಕೇಶ್, ನಿತೀಶ್, ನಿತೀಶ್ ವರ್ಮಾ ಮತ್ತು ರಾಮ್‌ಕೋಮನ್ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳಾದ ಚೈತನ್ಯ (21) ಮತ್ತು ವಿಷ್ಣು (21) ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಚೆನ್ನೈನ ಎಸ್‌ಆರ್‌ಎಂ ಕಾಲೇಜಿನಲ್ಲಿ ಸಿಎಸ್‌ಸಿ ಡೇಟಾ ಸೈನ್ಸ್ ಮೂರನೇ ವರ್ಷದಲ್ಲಿ ಓದುತ್ತಿದ್ದರು.

ಅಪಘಾತದ ತನಿಖೆ ಮುಂದುವರಿದಿದೆ ಎಂದು ಕೆಕೆ ಛತ್ರಂ ಪೊಲೀಸರು ಖಚಿತಪಡಿಸಿದ್ದಾರೆ. ಅಪಘಾತದ ಕಾರಣ ಇನ್ನೂ ಪರಿಶೀಲನೆಯಲ್ಲಿದೆ, ಪ್ರಾಥಮಿಕ ಸಂಶೋಧನೆಗಳು ಲಾರಿಗೆ ಡಿಕ್ಕಿ ಹೊಡೆಯುವ ಮೊದಲು ವಾಹನದ ನಿಯಂತ್ರಣ ಕಳೆದುಕೊಂಡ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:23 am, Mon, 12 August 24