AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali: ಈ ರಾಜ್ಯದ 7 ಹಳ್ಳಿಗಳಲ್ಲಿ ಪಟಾಕಿಯ ಅಬ್ಬರವಿಲ್ಲದೆ ಶಾಂತಿಯಿಂದ ಆಚರಿಸಲಾಗುತ್ತೆ ದೀಪಾವಳಿ

ಬೆಳಕಿನ ಹಬ್ಬ ದೀಪಾವಳಿ ಆದರೆ ದೀಪದ ಬೆಳಕಿಗಿಂತ ಪಟಾಕಿಯ ಅಬ್ಬರವೇ ಹೆಚ್ಚು. ಆದರೆ ಈ ರಾಜ್ಯದ 7 ಗ್ರಾಮಗಳಲ್ಲಿ ಪಟಾಕಿಯಲ್ಲಿ ಹಚ್ಚದೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ತಮಿಳುನಾಡಿನ ಈ 7 ಹಳ್ಳಿಗಳಲ್ಲಿ ದೀಪಾವಳಿಯಂದು ಯಾವುದೇ ಶಬ್ದವಿರುವುದಿಲ್ಲ, ದೀಪವನ್ನು ಬೆಳಗಿಸುವ ಮೂಲಕ ಹಬ್ಬವನ್ನು ಆಚರಣೆ ಮಾಡುತ್ತಾರೆ.

Deepavali: ಈ ರಾಜ್ಯದ 7 ಹಳ್ಳಿಗಳಲ್ಲಿ ಪಟಾಕಿಯ ಅಬ್ಬರವಿಲ್ಲದೆ ಶಾಂತಿಯಿಂದ ಆಚರಿಸಲಾಗುತ್ತೆ ದೀಪಾವಳಿ
ದೀಪಾವಳಿImage Credit source: NDTV
ನಯನಾ ರಾಜೀವ್
|

Updated on:Nov 13, 2023 | 11:05 AM

Share

ಬೆಳಕಿನ ಹಬ್ಬ ದೀಪಾವಳಿ ಆದರೆ ದೀಪದ ಬೆಳಕಿಗಿಂತ ಪಟಾಕಿಯ ಅಬ್ಬರವೇ ಹೆಚ್ಚು. ಆದರೆ ಈ ರಾಜ್ಯದ 7 ಗ್ರಾಮಗಳಲ್ಲಿ ಪಟಾಕಿಯಲ್ಲಿ ಹಚ್ಚದೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ತಮಿಳುನಾಡಿನ ಈ 7 ಹಳ್ಳಿಗಳಲ್ಲಿ ದೀಪಾವಳಿಯಂದು ಯಾವುದೇ ಶಬ್ದವಿರುವುದಿಲ್ಲ, ದೀಪವನ್ನು ಬೆಳಗಿಸುವ ಮೂಲಕ ಹಬ್ಬವನ್ನು ಸಂಭ್ರಮಿಸುತ್ತಾರೆ.

ತಮಿಳುನಾಡಿನ ಈರೋಡ್ ಜಿಲ್ಲೆಯ ಏಳು ಹಳ್ಳಿಗಳಲ್ಲಿ, ದೀಪಾವಳಿಯನ್ನು ಕೇವಲ ದೀಪಗಳೊಂದಿಗೆ ಆಚರಿಸಲಾಗುತ್ತದೆ ಮತ್ತು ಹತ್ತಿರದ ಪಕ್ಷಿಧಾಮದಲ್ಲಿ ಪಕ್ಷಿಗಳ ಸಂರಕ್ಷಣೆಯ ದೃಷ್ಟಿಯಿಂದ ಪಟಾಕಿಗಳನ್ನು ಸಿಡಿಸುವುದಿಲ್ಲ. ಈ ಗ್ರಾಮಗಳು ಈರೋಡ್‌ನಿಂದ 10 ಕಿ.ಮೀ ದೂರದಲ್ಲಿರುವ ವಡಮುಗಂ ವೆಲೋಡೆ ಸುತ್ತಮುತ್ತಲಿದ್ದು, ಇಲ್ಲಿ ಪಕ್ಷಿಧಾಮವಿದೆ.

ಈ ವರ್ಷವೂ ಸೆಲಪ್ಪಂಪಳಯಂ, ವಡಮುಗಂ ವೆಲ್ಲೋಡೆ, ಸೆಮ್ಮಂಡಂಪಳಯಂ, ಕರುಕ್ಕಂಕಟ್ಟು ವಲಸು, ಪುಂಗಂಪಾಡಿ ಮತ್ತು ಇತರ ಎರಡು ಗ್ರಾಮಗಳು ಶಾಂತ ದೀಪಾವಳಿಯ ಸಂಪ್ರದಾಯವನ್ನು ಉಳಿಸಿಕೊಂಡಿವೆ.

22 ವರ್ಷಗಳಿಂದ ನಡೆಯುತ್ತಿರುವ ಮೌನ ದೀಪಾವಳಿ ಸಂಪ್ರದಾಯ

ಕಳೆದ 22 ವರ್ಷಗಳಿಂದ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸದೆ ಈ ಸಂರಕ್ಷಣಾ ವಿಧಾನವನ್ನು ಅನುಸರಿಸುತ್ತಿದ್ದಾರೆ. ಸಾವಿರಾರು ಸ್ಥಳೀಯ ಜಾತಿಯ ಪಕ್ಷಿಗಳು ಮತ್ತು ಇತರ ಪ್ರದೇಶಗಳಿಂದ ವಲಸೆ ಬರುವ ಪಕ್ಷಿಗಳು ಅಕ್ಟೋಬರ್ ಮತ್ತು ಜನವರಿ ನಡುವೆ ಮೊಟ್ಟೆಗಳನ್ನು ಇಡಲು ಮತ್ತು ಮರಿ ಮಾಡಲು ಅಭಯಾರಣ್ಯಕ್ಕೆ ಬರುತ್ತವೆ.

ದೀಪಾವಳಿ ಸಾಮಾನ್ಯವಾಗಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಬರುವುದರಿಂದ ಪಕ್ಷಿಧಾಮದ ಸುತ್ತಮುತ್ತ ವಾಸಿಸುವ 900 ಕ್ಕೂ ಹೆಚ್ಚು ಕುಟುಂಬಗಳು ಪಕ್ಷಿಗಳ ರಕ್ಷಣೆಯ ದೃಷ್ಟಿಯಿಂದ ಪಟಾಕಿ ಸಿಡಿಸದಿರಲು ನಿರ್ಧರಿಸಿವೆ. ಏಕೆಂದರೆ ಪಕ್ಷಿಗಳು ದೊಡ್ಡ ಶಬ್ದ ಮತ್ತು ಮಾಲಿನ್ಯದಿಂದ ತೊಂದರೆಗಳನ್ನು ಎದುರಿಸುತ್ತಿವೆ.

ಗ್ರಾಮಸ್ಥರು ಏನು ಹೇಳುತ್ತಾರೆ? ಈ ಗ್ರಾಮಗಳಲ್ಲಿ ವಾಸಿಸುವ ಜನರು ದೀಪಾವಳಿಯ ಸಮಯದಲ್ಲಿ ತಮ್ಮ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸಿ, ದೀಪಗಳನ್ನು ಬೆಳಗಿಸುತ್ತಾರೆ ಮತ್ತು ಪಕ್ಷಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:58 am, Mon, 13 November 23

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ