Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali: ಈ ರಾಜ್ಯದ 7 ಹಳ್ಳಿಗಳಲ್ಲಿ ಪಟಾಕಿಯ ಅಬ್ಬರವಿಲ್ಲದೆ ಶಾಂತಿಯಿಂದ ಆಚರಿಸಲಾಗುತ್ತೆ ದೀಪಾವಳಿ

ಬೆಳಕಿನ ಹಬ್ಬ ದೀಪಾವಳಿ ಆದರೆ ದೀಪದ ಬೆಳಕಿಗಿಂತ ಪಟಾಕಿಯ ಅಬ್ಬರವೇ ಹೆಚ್ಚು. ಆದರೆ ಈ ರಾಜ್ಯದ 7 ಗ್ರಾಮಗಳಲ್ಲಿ ಪಟಾಕಿಯಲ್ಲಿ ಹಚ್ಚದೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ತಮಿಳುನಾಡಿನ ಈ 7 ಹಳ್ಳಿಗಳಲ್ಲಿ ದೀಪಾವಳಿಯಂದು ಯಾವುದೇ ಶಬ್ದವಿರುವುದಿಲ್ಲ, ದೀಪವನ್ನು ಬೆಳಗಿಸುವ ಮೂಲಕ ಹಬ್ಬವನ್ನು ಆಚರಣೆ ಮಾಡುತ್ತಾರೆ.

Deepavali: ಈ ರಾಜ್ಯದ 7 ಹಳ್ಳಿಗಳಲ್ಲಿ ಪಟಾಕಿಯ ಅಬ್ಬರವಿಲ್ಲದೆ ಶಾಂತಿಯಿಂದ ಆಚರಿಸಲಾಗುತ್ತೆ ದೀಪಾವಳಿ
ದೀಪಾವಳಿImage Credit source: NDTV
Follow us
ನಯನಾ ರಾಜೀವ್
|

Updated on:Nov 13, 2023 | 11:05 AM

ಬೆಳಕಿನ ಹಬ್ಬ ದೀಪಾವಳಿ ಆದರೆ ದೀಪದ ಬೆಳಕಿಗಿಂತ ಪಟಾಕಿಯ ಅಬ್ಬರವೇ ಹೆಚ್ಚು. ಆದರೆ ಈ ರಾಜ್ಯದ 7 ಗ್ರಾಮಗಳಲ್ಲಿ ಪಟಾಕಿಯಲ್ಲಿ ಹಚ್ಚದೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ತಮಿಳುನಾಡಿನ ಈ 7 ಹಳ್ಳಿಗಳಲ್ಲಿ ದೀಪಾವಳಿಯಂದು ಯಾವುದೇ ಶಬ್ದವಿರುವುದಿಲ್ಲ, ದೀಪವನ್ನು ಬೆಳಗಿಸುವ ಮೂಲಕ ಹಬ್ಬವನ್ನು ಸಂಭ್ರಮಿಸುತ್ತಾರೆ.

ತಮಿಳುನಾಡಿನ ಈರೋಡ್ ಜಿಲ್ಲೆಯ ಏಳು ಹಳ್ಳಿಗಳಲ್ಲಿ, ದೀಪಾವಳಿಯನ್ನು ಕೇವಲ ದೀಪಗಳೊಂದಿಗೆ ಆಚರಿಸಲಾಗುತ್ತದೆ ಮತ್ತು ಹತ್ತಿರದ ಪಕ್ಷಿಧಾಮದಲ್ಲಿ ಪಕ್ಷಿಗಳ ಸಂರಕ್ಷಣೆಯ ದೃಷ್ಟಿಯಿಂದ ಪಟಾಕಿಗಳನ್ನು ಸಿಡಿಸುವುದಿಲ್ಲ. ಈ ಗ್ರಾಮಗಳು ಈರೋಡ್‌ನಿಂದ 10 ಕಿ.ಮೀ ದೂರದಲ್ಲಿರುವ ವಡಮುಗಂ ವೆಲೋಡೆ ಸುತ್ತಮುತ್ತಲಿದ್ದು, ಇಲ್ಲಿ ಪಕ್ಷಿಧಾಮವಿದೆ.

ಈ ವರ್ಷವೂ ಸೆಲಪ್ಪಂಪಳಯಂ, ವಡಮುಗಂ ವೆಲ್ಲೋಡೆ, ಸೆಮ್ಮಂಡಂಪಳಯಂ, ಕರುಕ್ಕಂಕಟ್ಟು ವಲಸು, ಪುಂಗಂಪಾಡಿ ಮತ್ತು ಇತರ ಎರಡು ಗ್ರಾಮಗಳು ಶಾಂತ ದೀಪಾವಳಿಯ ಸಂಪ್ರದಾಯವನ್ನು ಉಳಿಸಿಕೊಂಡಿವೆ.

22 ವರ್ಷಗಳಿಂದ ನಡೆಯುತ್ತಿರುವ ಮೌನ ದೀಪಾವಳಿ ಸಂಪ್ರದಾಯ

ಕಳೆದ 22 ವರ್ಷಗಳಿಂದ ದೀಪಾವಳಿಯಂದು ಪಟಾಕಿಗಳನ್ನು ಸಿಡಿಸದೆ ಈ ಸಂರಕ್ಷಣಾ ವಿಧಾನವನ್ನು ಅನುಸರಿಸುತ್ತಿದ್ದಾರೆ. ಸಾವಿರಾರು ಸ್ಥಳೀಯ ಜಾತಿಯ ಪಕ್ಷಿಗಳು ಮತ್ತು ಇತರ ಪ್ರದೇಶಗಳಿಂದ ವಲಸೆ ಬರುವ ಪಕ್ಷಿಗಳು ಅಕ್ಟೋಬರ್ ಮತ್ತು ಜನವರಿ ನಡುವೆ ಮೊಟ್ಟೆಗಳನ್ನು ಇಡಲು ಮತ್ತು ಮರಿ ಮಾಡಲು ಅಭಯಾರಣ್ಯಕ್ಕೆ ಬರುತ್ತವೆ.

ದೀಪಾವಳಿ ಸಾಮಾನ್ಯವಾಗಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಬರುವುದರಿಂದ ಪಕ್ಷಿಧಾಮದ ಸುತ್ತಮುತ್ತ ವಾಸಿಸುವ 900 ಕ್ಕೂ ಹೆಚ್ಚು ಕುಟುಂಬಗಳು ಪಕ್ಷಿಗಳ ರಕ್ಷಣೆಯ ದೃಷ್ಟಿಯಿಂದ ಪಟಾಕಿ ಸಿಡಿಸದಿರಲು ನಿರ್ಧರಿಸಿವೆ. ಏಕೆಂದರೆ ಪಕ್ಷಿಗಳು ದೊಡ್ಡ ಶಬ್ದ ಮತ್ತು ಮಾಲಿನ್ಯದಿಂದ ತೊಂದರೆಗಳನ್ನು ಎದುರಿಸುತ್ತಿವೆ.

ಗ್ರಾಮಸ್ಥರು ಏನು ಹೇಳುತ್ತಾರೆ? ಈ ಗ್ರಾಮಗಳಲ್ಲಿ ವಾಸಿಸುವ ಜನರು ದೀಪಾವಳಿಯ ಸಮಯದಲ್ಲಿ ತಮ್ಮ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸಿ, ದೀಪಗಳನ್ನು ಬೆಳಗಿಸುತ್ತಾರೆ ಮತ್ತು ಪಕ್ಷಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:58 am, Mon, 13 November 23

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ