Tamil Nadu: ಮದುವೆ ಸಂಭ್ರಮದಲ್ಲಿ ನಡೆಯಿತು ಭಾರೀ ಅನಾಹುತ, ಅಚಾನಕ್ ಆಗಿ ಕುದಿಯುವ ಸಾಂಬಾರ್ ಕಡಾಯಿಗೆ ಬಿದ್ದು ವ್ಯಕ್ತಿ ಸಾವು

ಕುದಿಯುತ್ತಿದ್ದ ಬಿಸಿ ಬಿಸಿ ಸಾಂಬಾರ್ ಕಡಾಯಿಗೆ 21 ವರ್ಷದ ಯುವಕ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡು ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ.

Tamil Nadu: ಮದುವೆ ಸಂಭ್ರಮದಲ್ಲಿ ನಡೆಯಿತು ಭಾರೀ ಅನಾಹುತ, ಅಚಾನಕ್ ಆಗಿ ಕುದಿಯುವ ಸಾಂಬಾರ್ ಕಡಾಯಿಗೆ ಬಿದ್ದು ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ

Updated on: May 01, 2023 | 12:31 PM

ಚೆನ್ನೈ: ಕುದಿಯುತ್ತಿದ್ದ ಬಿಸಿ ಬಿಸಿ ಸಾಂಬಾರ್ ಕಡಾಯಿಗೆ 21 ವರ್ಷದ ಯುವಕ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡು (Tamil Nadu) ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಯುವಕನ ದೇಹದ ಮೇಲೆ ಸುಟ್ಟ ಗಾಯಗಳ ಉರಿಯಿಂದ ಆಸ್ಪತ್ರೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸಾವನ್ನಪ್ಪಿರುವ ಯುವಕ ಕಾಲೇಜು ವಿದ್ಯಾರ್ಥಿಯಾಗಿದ್ದು, ಹೋಟೆಲ್​​​ನಲ್ಲಿ ಪಾರ್ಟ್ ಟೈಮ್​ ಆಗಿ ಕೆಲಸ ಮಾಡುತ್ತಿದ್ದ. ಕಳೆದ ವಾರ ಮದುವೆ ಸಮಾರಂಭವೊಂದರಲ್ಲಿ ಅತಿಥಿಗಳಿಗೆ ಊಟ ಬಡಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಾರಂಭದಲ್ಲಿ ಅತಿಥಿಗಳಿಗೆ ಸಾಂಬರು ಬಡಿಸಲೆಂದು ಸಾಂಬರು ಕಡಾಯಿ ಬಳಿ ಹೋದಾಗ ಅಚಾನಕ್ ಆಗಿ ​​ಕುದಿಯುತ್ತಿರುವ ಸಾಂಬರು ಕಡಾಯಿಗೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ.

ಇದನ್ನೂ ಓದಿ:Tamil Nadu Weather: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಇಂದು ಗುಡುಗು ಸಹಿತ ಮಳೆ

ತೀವ್ರ ಸುಟ್ಟಗಾಯಗಳಾಗಿರುವ ಯುವಕನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 12:19 pm, Mon, 1 May 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us