AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಬಸ್-ಕಾರು ನಡುವೆ ಅಪಘಾತ ಐವರು ಸಾವು, ಕಾರು ಕತ್ತರಿಸಿ ಶವ ಹೊರ ತೆಗೆದ ರಕ್ಷಣಾ ಸಿಬ್ಬಂದಿ

ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಐವರೂ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.

ತಮಿಳುನಾಡು: ಬಸ್-ಕಾರು ನಡುವೆ ಅಪಘಾತ ಐವರು ಸಾವು, ಕಾರು ಕತ್ತರಿಸಿ ಶವ ಹೊರ ತೆಗೆದ ರಕ್ಷಣಾ ಸಿಬ್ಬಂದಿ
ಅಪಘಾತImage Credit source: Latestly
ನಯನಾ ರಾಜೀವ್
|

Updated on: Feb 26, 2025 | 11:11 AM

Share

ತಮಿಳುನಾಡು, ಫೆಬ್ರವರಿ 26: ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಐವರೂ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.

ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಮೃತದೇಹಗಳನ್ನು ಹೊರತರಲು ಹಾನಿಗೊಳಗಾದ ಕಾರನ್ನು ಕತ್ತರಿಸಿ ಹೊರತೆಗೆಯಬೇಕಾಯಿತು. ಪೊಲೀಸರ ಪ್ರಕಾರ, ಕುಳಿತ್ತಲೈ ಬಳಿಯ ಕರೂರ್-ತಿರುಚಿರಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಕರೂರ್‌ಗೆ ಹೋಗುತ್ತಿದ್ದ ಕಾರು ಮತ್ತು ಅರಂಥಂಗಿಯಿಂದ ತಿರುಪ್ಪೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತ ವ್ಯಕ್ತಿ ಕೊಯಮತ್ತೂರಿನ ಕುನಿಯಮುತ್ತೂರ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಚೆನ್ನೈಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಹೈದರಾಬಾದ್‌ನಿಂದ ಬರುತ್ತಿದ್ದ ಖಾಸಗಿ ವಿಮಾನವು ಪ್ರಯಾಣಿಕರೊಬ್ಬರಿಗೆ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಿದ ನಂತರ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ಪುರುಷ ಪ್ರಯಾಣಿಕನೊಬ್ಬ ಅಸ್ವಸ್ಥಗೊಂಡಿದ್ದರಿಂದ ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರು ಎಂದು ನಗರ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದ ತುರ್ತು ಲ್ಯಾಂಡಿಂಗ್‌ಗೆ ಅನುವು ಮಾಡಿಕೊಡುವ ಸಲುವಾಗಿ, ಸ್ವಲ್ಪ ಸಮಯದವರೆಗೆ ಬೇರೆ ಯಾವುದೇ ವಿಮಾನಗಳನ್ನು ಕಾರ್ಯನಿರ್ವಹಿಸಲು ಅನುಮತಿಸಲಾಗಿಲ್ಲ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸೋಮವಾರ ಧರ್ಮಪುರಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದರು. ಜಿಲ್ಲೆಯ ಕಂಬೈನಲ್ಲೂರು ಗ್ರಾಮದ ಖಾಸಗಿ ಘಟಕದಲ್ಲಿ ಈ ಘಟನೆ ನಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ