AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವು

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಗರದ ಹಿಲ್‌ಫೋರ್ಟ್‌ ಮೆಟ್ರಿಕ್ಯುಲೇಷನ್‌ ಶಾಲೆಯ ವಿದ್ಯಾರ್ಥಿನಿ ಲಯಾ ಮನೆಯ ಬಳಿ ಶಾಲಾ ವ್ಯಾನ್​ನಿಂದ ಇಳಿದಿದ್ದಳು.  ಪೊಲೀಸರ ಪ್ರಕಾರ, ಚಾಲಕ ತ್ಯಾಗರಾಜನ್ ಬಾಲಕಿಯನ್ನು ಗಮನಿಸದೆ ವಾಹನವನ್ನು ಹಿಮ್ಮುಖಗೊಳಿಸಿದಾಗ ಶಾಲಾ ವ್ಯಾನ್‌ನ ಒಂದು ಚಕ್ರದ ಕೆಳಗೆ ಬಿದ್ದಿದ್ದಾಳೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.

ತಮಿಳುನಾಡು: ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವು
ನಯನಾ ರಾಜೀವ್
|

Updated on: Nov 28, 2023 | 2:35 PM

Share

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಗರದ ಹಿಲ್‌ಫೋರ್ಟ್‌ ಮೆಟ್ರಿಕ್ಯುಲೇಷನ್‌ ಶಾಲೆಯ ವಿದ್ಯಾರ್ಥಿನಿ ಲಯಾ ಮನೆಯ ಬಳಿ ಶಾಲಾ ವ್ಯಾನ್​ನಿಂದ ಇಳಿದಿದ್ದಳು.  ಪೊಲೀಸರ ಪ್ರಕಾರ, ಚಾಲಕ ತ್ಯಾಗರಾಜನ್ ಬಾಲಕಿಯನ್ನು ಗಮನಿಸದೆ ವಾಹನವನ್ನು ಹಿಮ್ಮುಖಗೊಳಿಸಿದಾಗ ಶಾಲಾ ವ್ಯಾನ್‌ನ ಒಂದು ಚಕ್ರದ ಕೆಳಗೆ ಬಿದ್ದಿದ್ದಾಳೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ, ತಮಿಳುನಾಡಿನ ಭವಾನಿಯಲ್ಲಿ ಇದೇ ರೀತಿಯ ಘಟನೆಯಲ್ಲಿ, 8 ನೇ ತರಗತಿಯ ವಿದ್ಯಾರ್ಥಿ ಬಸ್‌ನಿಂದ ಕೆಳಗೆ ಬಿದ್ದ ಬಳಿಕ ಆ ಬಾಲಕ ಪ್ರಯಾಣಿಸುತ್ತಿದ್ದ ಶಾಲಾ ಬಸ್ ಬಾಲಕನ ಮೇಲೆ ಹರಿದು ಸಾವನ್ನಪ್ಪಿದ್ದ.

ವಿಶಾಖಪಟ್ಟಣಂನಲ್ಲಿ ಶಾಲಾ ಮಕ್ಕಳಿದ್ದ ಆಟೋ ಅಪಘಾತ ಆಟೋವೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮತ್ತಷ್ಟು ಓದಿ: ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೇಗವಾಗಿ ಬರುತ್ತಿದ್ದ ಲಾರಿಗೆ ಆಟೋ ನೇರವಾಗಿ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ, ಪಲ್ಟಿಯಾಗಿ 2-3 ಮಕ್ಕಳು ವಾಹನದಿಂದ ಹೊರಗೆ ಬಿದ್ದಿದ್ದರು, ಇನ್ನೂ ಕೆಲವರು ಆಟೋದಲ್ಲೇ ಸಿಲುಕಿದ್ದರು. ಅಪಘಾತ ಸಂಭವಿಸಿದ ಸ್ಥಳದಿಂದ 100 ಮೀಟರ್ ಮುಂದೆ ಲಾರಿ ಚಾಲಕ ತನ್ನ ವಾಹನವನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ