AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವು

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಗರದ ಹಿಲ್‌ಫೋರ್ಟ್‌ ಮೆಟ್ರಿಕ್ಯುಲೇಷನ್‌ ಶಾಲೆಯ ವಿದ್ಯಾರ್ಥಿನಿ ಲಯಾ ಮನೆಯ ಬಳಿ ಶಾಲಾ ವ್ಯಾನ್​ನಿಂದ ಇಳಿದಿದ್ದಳು.  ಪೊಲೀಸರ ಪ್ರಕಾರ, ಚಾಲಕ ತ್ಯಾಗರಾಜನ್ ಬಾಲಕಿಯನ್ನು ಗಮನಿಸದೆ ವಾಹನವನ್ನು ಹಿಮ್ಮುಖಗೊಳಿಸಿದಾಗ ಶಾಲಾ ವ್ಯಾನ್‌ನ ಒಂದು ಚಕ್ರದ ಕೆಳಗೆ ಬಿದ್ದಿದ್ದಾಳೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.

ತಮಿಳುನಾಡು: ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವು
ನಯನಾ ರಾಜೀವ್
|

Updated on: Nov 28, 2023 | 2:35 PM

Share

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಗರದ ಹಿಲ್‌ಫೋರ್ಟ್‌ ಮೆಟ್ರಿಕ್ಯುಲೇಷನ್‌ ಶಾಲೆಯ ವಿದ್ಯಾರ್ಥಿನಿ ಲಯಾ ಮನೆಯ ಬಳಿ ಶಾಲಾ ವ್ಯಾನ್​ನಿಂದ ಇಳಿದಿದ್ದಳು.  ಪೊಲೀಸರ ಪ್ರಕಾರ, ಚಾಲಕ ತ್ಯಾಗರಾಜನ್ ಬಾಲಕಿಯನ್ನು ಗಮನಿಸದೆ ವಾಹನವನ್ನು ಹಿಮ್ಮುಖಗೊಳಿಸಿದಾಗ ಶಾಲಾ ವ್ಯಾನ್‌ನ ಒಂದು ಚಕ್ರದ ಕೆಳಗೆ ಬಿದ್ದಿದ್ದಾಳೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ, ತಮಿಳುನಾಡಿನ ಭವಾನಿಯಲ್ಲಿ ಇದೇ ರೀತಿಯ ಘಟನೆಯಲ್ಲಿ, 8 ನೇ ತರಗತಿಯ ವಿದ್ಯಾರ್ಥಿ ಬಸ್‌ನಿಂದ ಕೆಳಗೆ ಬಿದ್ದ ಬಳಿಕ ಆ ಬಾಲಕ ಪ್ರಯಾಣಿಸುತ್ತಿದ್ದ ಶಾಲಾ ಬಸ್ ಬಾಲಕನ ಮೇಲೆ ಹರಿದು ಸಾವನ್ನಪ್ಪಿದ್ದ.

ವಿಶಾಖಪಟ್ಟಣಂನಲ್ಲಿ ಶಾಲಾ ಮಕ್ಕಳಿದ್ದ ಆಟೋ ಅಪಘಾತ ಆಟೋವೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮತ್ತಷ್ಟು ಓದಿ: ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೇಗವಾಗಿ ಬರುತ್ತಿದ್ದ ಲಾರಿಗೆ ಆಟೋ ನೇರವಾಗಿ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ, ಪಲ್ಟಿಯಾಗಿ 2-3 ಮಕ್ಕಳು ವಾಹನದಿಂದ ಹೊರಗೆ ಬಿದ್ದಿದ್ದರು, ಇನ್ನೂ ಕೆಲವರು ಆಟೋದಲ್ಲೇ ಸಿಲುಕಿದ್ದರು. ಅಪಘಾತ ಸಂಭವಿಸಿದ ಸ್ಥಳದಿಂದ 100 ಮೀಟರ್ ಮುಂದೆ ಲಾರಿ ಚಾಲಕ ತನ್ನ ವಾಹನವನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ