AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವು

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಗರದ ಹಿಲ್‌ಫೋರ್ಟ್‌ ಮೆಟ್ರಿಕ್ಯುಲೇಷನ್‌ ಶಾಲೆಯ ವಿದ್ಯಾರ್ಥಿನಿ ಲಯಾ ಮನೆಯ ಬಳಿ ಶಾಲಾ ವ್ಯಾನ್​ನಿಂದ ಇಳಿದಿದ್ದಳು.  ಪೊಲೀಸರ ಪ್ರಕಾರ, ಚಾಲಕ ತ್ಯಾಗರಾಜನ್ ಬಾಲಕಿಯನ್ನು ಗಮನಿಸದೆ ವಾಹನವನ್ನು ಹಿಮ್ಮುಖಗೊಳಿಸಿದಾಗ ಶಾಲಾ ವ್ಯಾನ್‌ನ ಒಂದು ಚಕ್ರದ ಕೆಳಗೆ ಬಿದ್ದಿದ್ದಾಳೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.

ತಮಿಳುನಾಡು: ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವು
ನಯನಾ ರಾಜೀವ್
|

Updated on: Nov 28, 2023 | 2:35 PM

Share

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಶಾಲಾ ವಾಹನ ಹರಿದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಗರದ ಹಿಲ್‌ಫೋರ್ಟ್‌ ಮೆಟ್ರಿಕ್ಯುಲೇಷನ್‌ ಶಾಲೆಯ ವಿದ್ಯಾರ್ಥಿನಿ ಲಯಾ ಮನೆಯ ಬಳಿ ಶಾಲಾ ವ್ಯಾನ್​ನಿಂದ ಇಳಿದಿದ್ದಳು.  ಪೊಲೀಸರ ಪ್ರಕಾರ, ಚಾಲಕ ತ್ಯಾಗರಾಜನ್ ಬಾಲಕಿಯನ್ನು ಗಮನಿಸದೆ ವಾಹನವನ್ನು ಹಿಮ್ಮುಖಗೊಳಿಸಿದಾಗ ಶಾಲಾ ವ್ಯಾನ್‌ನ ಒಂದು ಚಕ್ರದ ಕೆಳಗೆ ಬಿದ್ದಿದ್ದಾಳೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯನ್ನು ತಪ್ಪಿಸಬಹುದಿತ್ತು ಎಂದು ನೋಡುಗರು ಪೊಲೀಸರಿಗೆ ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ, ತಮಿಳುನಾಡಿನ ಭವಾನಿಯಲ್ಲಿ ಇದೇ ರೀತಿಯ ಘಟನೆಯಲ್ಲಿ, 8 ನೇ ತರಗತಿಯ ವಿದ್ಯಾರ್ಥಿ ಬಸ್‌ನಿಂದ ಕೆಳಗೆ ಬಿದ್ದ ಬಳಿಕ ಆ ಬಾಲಕ ಪ್ರಯಾಣಿಸುತ್ತಿದ್ದ ಶಾಲಾ ಬಸ್ ಬಾಲಕನ ಮೇಲೆ ಹರಿದು ಸಾವನ್ನಪ್ಪಿದ್ದ.

ವಿಶಾಖಪಟ್ಟಣಂನಲ್ಲಿ ಶಾಲಾ ಮಕ್ಕಳಿದ್ದ ಆಟೋ ಅಪಘಾತ ಆಟೋವೊಂದು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಥನಿ ಶಾಲೆಯ ಎಂಟು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮತ್ತಷ್ಟು ಓದಿ: ವಿಶಾಖಪಟ್ಟಣಂ: ಲಾರಿಗೆ ಡಿಕ್ಕಿ ಹೊಡೆದ ಆಟೋ, 8 ಮಕ್ಕಳಿಗೆ ಗಂಭೀರ ಗಾಯ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವೇಗವಾಗಿ ಬರುತ್ತಿದ್ದ ಲಾರಿಗೆ ಆಟೋ ನೇರವಾಗಿ ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣ, ಪಲ್ಟಿಯಾಗಿ 2-3 ಮಕ್ಕಳು ವಾಹನದಿಂದ ಹೊರಗೆ ಬಿದ್ದಿದ್ದರು, ಇನ್ನೂ ಕೆಲವರು ಆಟೋದಲ್ಲೇ ಸಿಲುಕಿದ್ದರು. ಅಪಘಾತ ಸಂಭವಿಸಿದ ಸ್ಥಳದಿಂದ 100 ಮೀಟರ್ ಮುಂದೆ ಲಾರಿ ಚಾಲಕ ತನ್ನ ವಾಹನವನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ