AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Accident: ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ಲಾರಿಗೆ ಬಸ್ ಡಿಕ್ಕಿ; 6 ಜನ ಸಾವು, 10 ಮಂದಿಗೆ ಗಾಯ

ಐರನ್​ ವೈರ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಓವರ್​ಟೇಕ್ ಮಾಡಲು ಹೋದ ಸರ್ಕಾರಿ ಬಸ್​ ಅನ್ನು ತಪ್ಪಿಸಲು ಹೋಗಿ ಲಾರಿ ಎಡಕ್ಕೆ ಪಲ್ಟಿ ಹೊಡೆದಿದೆ. ಈ ಅಪಘಾತದಲ್ಲಿ 6 ಜನ ಮೃತಪಟ್ಟಿದ್ದಾರೆ.

Tamil Nadu Accident: ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ಲಾರಿಗೆ ಬಸ್ ಡಿಕ್ಕಿ; 6 ಜನ ಸಾವು, 10 ಮಂದಿಗೆ ಗಾಯ
ತಮಿಳುನಾಡಿನಲ್ಲಿ ಅಪಘಾತ
TV9 Web
| Edited By: |

Updated on: Jul 08, 2022 | 11:35 AM

Share

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ (Chengalpattu) ಇಂದು ಬೆಳಗ್ಗೆ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಕೂಡ ಸೇರಿದ್ದಾರೆ. ಸರ್ಕಾರಿ ಬಸ್​​ನಲ್ಲಿ 50 ಜನರು ಚೆನ್ನೈನಿಂದ ಚಿದಂಬರಂಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚೆಂಗಲ್ಪಟ್ಟು ಜಿಲ್ಲೆಯ ತೊಲಪ್ಪೆಡು ಬಳಿ ಚೆನ್ನೈ- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಅಪಘಾತ ಸಂಭವಿಸಿದೆ.

ಐರನ್​ ವೈರ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯನ್ನು ಓವರ್​ಟೇಕ್ ಮಾಡಲು ಹೋದ ಸರ್ಕಾರಿ ಬಸ್​ ಅನ್ನು ತಪ್ಪಿಸಲು ಹೋಗಿ ಲಾರಿ ಎಡಕ್ಕೆ ಪಲ್ಟಿ ಹೊಡೆದಿದೆ. ಈ ವೇಳೆ ಇಬ್ಬರು ಮಹಿಳೆಯರು ಸೇರಿದಂತೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10 ಪ್ರಯಾಣಿಕರಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಗೊಂಡವರನ್ನು ಚೆಂಗಲ್ಪಟ್ಟು ಮತ್ತು ಮಧುರಾಂತಕಂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Kullu Bus Accident: ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ಶಾಲಾ ಮಕ್ಕಳು ಸೇರಿ 16 ಜನ ಸಾವು

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೀಗಾಗಿ ಈ ಅಪಘಾತದ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಗುರುತನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ಅಪಘಾತದಿಂದಾಗಿ ಚೆನ್ನೈ- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ