ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು
ಅಪಘಾತ-ಸಾಂದರ್ಭಿಕ ಚಿತ್ರ
Image Credit source: NDTV

Updated on: Nov 17, 2023 | 9:18 AM

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್ ಸಾಗಿಸುತ್ತಿದ್ದಾಗ ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ್ ಪಾಳ್ಯಂನಿಂದ ದಿಂಡಿಗಲ್ ಜಿಲ್ಲೆಯ ಪಳನಿಗೆ ಮದುವೆ ಸಮಾರಂಭಕ್ಕೆ ಕಾರು ತೆರಳುತ್ತಿತ್ತು.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಕಾರಿಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ ಅಪಘಾತ, ಐವರು ಸಾವು

ಧಾರಾಪುರಂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಘೋಷಿಸಿದ್ದಾರೆ . ಮೃತರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us