AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕಾರ ಮಾಡಿದ ತಮಿಳುನಾಡು ವಿಧಾನಸಭೆ; ಹೊರನಡೆದ ಬಿಜೆಪಿ, ಎಐಎಡಿಎಂಕೆ ಶಾಸಕರು

Farm Laws: ತಮಿಳುನಾಡು ವಿಧಾನಸಭೆಯಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕಾರ ಆಗುವಾಗ ಬಿಜೆಪಿ ಮತ್ತು ಎಐಎಡಿಎಂಕೆ ಶಾಸಕರು ಹೊರನಡೆದಿದ್ದಾರೆ. ಹಾಗೇ, ತರಾತುರಿಯ ನಿರ್ಧಾರ ಎಂದು ಆರೋಪಿಸಿದ್ದಾರೆ.

3 ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕಾರ ಮಾಡಿದ ತಮಿಳುನಾಡು ವಿಧಾನಸಭೆ; ಹೊರನಡೆದ ಬಿಜೆಪಿ, ಎಐಎಡಿಎಂಕೆ ಶಾಸಕರು
ತಮಿಳುನಾಡು ವಿಧಾನಸಭೆ
TV9 Web
| Updated By: Lakshmi Hegde|

Updated on:Aug 28, 2021 | 12:17 PM

Share

ಚೆನ್ನೈ: ಕೇಂದ್ರ ಸರ್ಕಾರ (Central Government)ದ ಮೂರು ಕೃಷಿ ಕಾಯ್ದೆ (Farm Laws)ಗಳ ವಿರುದ್ಧ ತಮಿಳುನಾಡು ವಿಧಾನಸಭೆ (Tamil Nadu Assembly )ಇಂದು ನಿರ್ಣಯ ಅಂಗೀಕಾರ ಮಾಡಿದೆ. ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin)​ ನಿರ್ಣಯ ಮಂಡಿಸಿದ್ದರು. ಇಂದು ಧ್ವನಿ ಮತದ ಮೂಲಕ ಮೂರು ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಅಂಗೀಕಾರ ಮಾಡಲಾಗಿದೆ.  

ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅನೇಕ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಪ್ರತಿಭಟನೆ ಶುರು ಮಾಡಿ ವರ್ಷಕ್ಕೆ ಬಂತು. ಈ ಮಧ್ಯೆ ಅನೇಕ ರೈತರ ವಿರುದ್ಧ ಪ್ರಕರಣ ದಾಖಲಾಗಿದೆ. ಅದನ್ನೆಲ್ಲ ಕೇಂದ್ರ ಸರ್ಕಾರ ಹಿಂಪಡೆಯಬೇಕು. ಎಲ್ಲ ರೈತರ ವಿರುದ್ಧ ದಾಖಲಾದ ಕೇಸ್​ಗಳೂ ರದ್ದಾಗಬೇಕು ಎಂದು ಒತ್ತಾಯಿಸಿದರು.  ಹಾಗೇ, ವಿಧಾನಸಭೆಯಲ್ಲಿ ನಿರ್ಣಯ ಮಂಡನೆಯಾಗುವಾಗ, ಅದನ್ನು ವಿರೋಧಿಸಿ ಬಿಜೆಪಿ ಶಾಸಕರೆಲ್ಲ ಹೊರನಡೆದಿದ್ದಾರೆ.

ಇನ್ನು ಎಐಎಡಿಎಂಕೆ ಶಾಸಕರೂ ಕೂಡ ಅದೇ ದಾರಿ ತುಳಿದರು. ಅವರೂ ಸಹ ವಿಧಾನಸಭೆಯಿಂದ ಹೊರನಡೆದು, ಕೃಷಿ ಕಾಯ್ದೆಗಳ ವಿರುದ್ಧ ತರಾತುರಿಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆಯಬೇಕು. ರಾಜ್ಯದ ರೈತರ ಅಭಿಪ್ರಾಯ ಸಂಗ್ರಹ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಭೇದಿಸಲು 5 ಜಿಲ್ಲೆಗಳ 26 ಪರಿಣಿತ ಪೊಲೀಸರ ನಿಯೋಜನೆ

ಕಾಶ್ಮೀರ ಕಣಿವೆಯ ಭಯೋತ್ಪಾದನೆ ಶೀಘ್ರವೇ ಅಂತ್ಯಗೊಳ್ಳಲಿದೆ: ಫಾರೂಕ್​ ಅಬ್ದುಲ್ಲಾ

Published On - 12:16 pm, Sat, 28 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!