Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ವಿಧಾನಸಭೆ ಚುನಾವಣೆ: ‘ಕರ್ನಾಟಕದ ಸಿಂಗಂ’ ಅಣ್ಣಾ ಮಲೈ ಸ್ಪರ್ಧಿಸುತ್ತಿರುವ ಕ್ಷೇತ್ರ ಯಾವುದು? ಆ ಕ್ಷೇತ್ರದ ಮಹಿಮೆ ಏನು?

K Annamalai | ಅರವಾಕುರಿಚಿ ಕ್ಷೇತ್ರದ ಮತದಾರರು 53 ವರ್ಷಗಳಿಂದ ದ್ರಾವಿಡ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾ ಬಂದಿದ್ದಾರೆ. ಆದರೆ ಕ್ಷೇತ್ರದ ಅಭಿವೃದ್ಧಿಗಾಗಿ ಏನೂ ಮಾಡಿಲ್ಲ. ಜವಳಿ ಕ್ಷೇತ್ರದ ಅಗ್ರಗಣ್ಯನೆನಿಸಿರುವ ತಿರುಪ್ಪೂರ್​ ಅನ್ನು ಮೀರಿಸಿ ಬೆಳೆಯುವ ಎಲ್ಲ ಅವಕಾಶಗಳೂ ಈ ಅರವಾಕುರಿಚಿಗೆ ಇದೆ. ಆದರೆ ದ್ರಾವಿಡ ಅಭ್ಯರ್ಥಿಗಳಿಗೆ ಕ್ಷೇತ್ರದ ಅಭಿವೃದ್ಧಿ ಬೇಕಾಗಿರಲಿಲ್ಲ ಎಂದು ಅಣ್ಣಾಮಲೈ ಕಿಡಿಕಾರಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ: ‘ಕರ್ನಾಟಕದ ಸಿಂಗಂ’ ಅಣ್ಣಾ ಮಲೈ ಸ್ಪರ್ಧಿಸುತ್ತಿರುವ ಕ್ಷೇತ್ರ ಯಾವುದು? ಆ ಕ್ಷೇತ್ರದ ಮಹಿಮೆ ಏನು?
‘ಕರ್ನಾಟಕ ಸಿಂಗಂ’ ಅಣ್ಣಾ ಮಲೈ ಸ್ಪರ್ಧಿಸುತ್ತಿರುವ ಕ್ಷೇತ್ರ ಯಾವುದು? ಆ ಕ್ಷೇತ್ರದ ಮಹಿಮೆ ಏನು?
Follow us
ಸಾಧು ಶ್ರೀನಾಥ್​
| Updated By: ganapathi bhat

Updated on:Mar 12, 2021 | 7:03 PM

ಭಾರತೀಯ ಆಡಳಿತ ಸೇವೆಯಲ್ಲಿ ಸುಭದ್ರ ನೌಕರಿ ಹೊಂದಿದ್ದ, ತನ್ಮೂಲಕ ‘ಕರ್ನಾಟಕದ ಸಿಂಗಂ’ ಎಂದು ಜನಜನಿತರಾದ ಕೆ. ಅಣ್ಣಾಮಲೈ ಎಂಬ ಯುವ ಪೊಲೀಸ್​ ಅಧಿಕಾರಿ ದಿಢೀರನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಕರ್ನಾಟಕದಿಂದ ಸೀದಾ ಎದ್ದು ಹೋಗಿ ತಮ್ಮ ಸ್ವ ರಾಜ್ಯ ತಮಿಳುನಾಡನ್ನು ಸೇರಿಕೊಂಡಿದ್ದು ಎಲ್ಲರಿಗೂ ತಿಳಿದೇ ಇದೆ. ಈ ಮಧ್ಯೆ, ತಮಿಳುನಾಡು ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗಿದ್ದು, ಅದಕ್ಕೂ ಮುನ್ನ ಅಣ್ಣಾಮಲೈ ಬಿಜೆಪಿ ಪಕ್ಷವನ್ನು ಅಪ್ಪಿಕೊಂಡಿದ್ದಾರೆ. ಬಿಜೆಪಿ ಸಹ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ದಯಪಾಲಿಸಿದೆ. ಆಡಳಿತಾರೂಢ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಅಣ್ಣಾಮಲೈ ಅವರನ್ನು ಚುನಾವಣಾ ಕಣಕ್ಕೆ ಇಳಿಸಲು ನಿರ್ಧರಿಸಿದೆ. ಹಾಗಾದರೆ ಅಣ್ಣಾಮಲೈ ಸ್ಪರ್ಧಿಸುತ್ತಿರುವ ಆ ವಿಧಾನಸಭಾ ಕ್ಷೇತ್ರ ಯಾವುದು? ಆ ಕ್ಷೇತ್ರದ ಮಹಿಮೆ ಏನು? ಎಂಬುದನ್ನು ನೋಡಿದಾಗ..

ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಅರವಾಕುರಿಚಿ (Aravakurichi) ಎಂಬುದು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾಗಿದೆ. ಡಿಎಂಕೆ ಪಕ್ಷದ ವಿ ಸೆಂಥಿಲ್​ ಬಾಲಾಜಿ ಕ್ಷೇತ್ರದ ಹಾಲಿ ಶಾಸಕ. ವಲಸೆ ಹಕ್ಕಿಯಾಗಿ ಕ್ಷೇತ್ರಗಳನ್ನು ಬದಲಾಯಿಸುತ್ತಾ.. ಕಳೆದ ಬಾರಿ ಅರವಾಕುರಿಚಿ ಕ್ಷೇತ್ರದಿಂದ ಅರಸಿ ಬಂದ್ದಿದಾರೆ. ಇತ್ತೀಚೆಗೆ ಸಭೆಯೊಂದರಲ್ಲಿ ಓಪನ್ ಚಾಲೆಂಜ್​ ಹಾಕಿದ ಅಣ್ಣಾಮಲೈ ಕ್ಷೇತ್ರದಲ್ಲಿ ಈ ಬಾರಿ ಡಿಎಂಕೆ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಡಲಿದೆ. ಈ ಬಾರಿ ಗೆಲುವು ನಿಮ್ಮದಲ್ಲ. ನಮ್ಮದೇ ಎಂದು ಡಿಎಂಕೆ ಹಾಲಿ ಶಾಸಕ ಸೆಂಥಿಲ್​ಗೆ ಹೇಳುವ ಮೂಲಕ ಪರೋಕ್ಷವಾಗಿ ಕ್ಷೇತ್ರದ ಅಭ್ಯರ್ಥಿ ತಾವೇ ಎಂಬ ಸುಳಿವು ನೀಡಿದ್ದಾರೆ ಅಣ್ಣಾಮಲೈ.

ಅರವಾಕುರಿಚಿ ಕ್ಷೇತ್ರದ ಮತದಾರರು ಕಳೆದ 53 ವರ್ಷಗಳಿಂದ ದ್ರಾವಿಡ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾ ಬಂದಿದ್ದಾರೆ. ಆದರೆ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಏನೂ ಮಾಡಿಲ್ಲ. ಜವಳಿ ಕ್ಷೇತ್ರದ ಅಗ್ರಗಣ್ಯನೆನಿಸಿರುವ ತಿರುಪ್ಪೂರ್​ ಅನ್ನು ಮೀರಿಸಿ ಬೆಳೆಯುವ ಎಲ್ಲ ಅವಕಾಶಗಳೂ ಈ ಅರವಾಕುರಿಚಿಗೆ ಇದೆ. ಆದರೆ ದ್ರಾವಿಡ ಅಭ್ಯರ್ಥಿಗಳಿಗೆ ಕ್ಷೇತ್ರದ ಅಭಿವೃದ್ಧಿ ಬೇಕಾಗಿರಲಿಲ್ಲ ಎಂದು ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಅಣ್ಣಾಮಲೈ ಸಭೆಯಲ್ಲಿ ಕಿಡಿಕಾರಿದರು.

ಮುಂದಿನ ತಿಂಗಳು ಏಪ್ರಿಲ್ 6ರಂದು ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು AIADMK ಮತ್ತು BJP ಮಧ್ಯೆ ಮೈತ್ರಿ ಏರ್ಪಟ್ಟಿದೆ. ಅದರಂತೆ ಆಡಳಿತಾರೂಢ ಎಐಎಡಿಎಂಕೆ ಪಕ್ಷವು ಬಿಜೆಪಿಗೆ 20 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಅದರಲ್ಲಿ ಅರವಾಕುರಿಚಿ ಕ್ಷೇತ್ರವೂ ಒಂದಾಗಿದೆ. ಅಣ್ಣಾಮಲೈ ಈ ಮೊದಲು ಕಿನತುಕೊಡವು ಕ್ಷೇತ್ರದಿಂದ ಸ್ಪರ್ಧಿಸಬಯಸಿದ್ದಾರಾದರೂ ಪಕ್ಷದ ಎಣಿಕೆ ಬೇರೆಯೇ ಆಗಿದ್ದು, ಇದೀಗ ಅರವಾಕುರಿಚಿ ಕ್ಷೇತ್ರದಿಂದ ಕಣಕ್ಕಿಳಿಯುವುದು ದಿಟವಾಗಿದೆ.ಇನ್ನು ತಾರಾ ನಟಿಯರಾದ ಅವರು ಖುಷ್ಬು ಛೆಪಾಕ್​-ತಿರುವಳ್ಳಿಕೇಣಿ ಕ್ಷೇತ್ರದಿಂದಲೂ ಮತ್ತು ಗೌತಮಿ ಅವರು ರಾಜಪಾಳ್ಯಂ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ:  ಅವರು ಹೇಳಿದ್ದಕ್ಕೆ ರಾಜೀನಾಮೆ ಕೊಟ್ಟೆ -ಕೊನೆಗೂ ರಹಸ್ಯ ಬಿಚ್ಚಿಟ್ಟ ಕರುನಾಡ ‘ಸಿಂಗಂ’ ಅಣ್ಣಾಮಲೈ!

Published On - 1:35 pm, Fri, 12 March 21

ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್