AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರುದ್ಧವಾಗಿ ಯಾರೇ ನಿಂತ್ರೂ ಗೆಲ್ಲುವುದು ಡಿಎಂಕೆ ಮಾತ್ರ: ಉದಯನಿಧಿ ಸ್ಟಾಲಿನ್

ವಿರುದ್ಧವಾಗಿ ಯಾರೇ ನಿಂತರೂ ಚುನಾವಣೆಯಲ್ಲಿ ಗೆಲ್ಲುವುದು ಡಿಎಂಕೆ ಮಾತ್ರ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. 2026ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರೇ ವಿರೋಧವಾಗಿ ಬಂದರೂ ತಮ್ಮ ಪಕ್ಷವೇ ಗೆಲ್ಲಲಿದೆ ಎಂದು ಉದಯನಿಧಿ ಸ್ಟಾಲಿನ್ ಪರೋಕ್ಷವಾಗಿ ವಿಜಯ್ ಎಚ್ಚರಿಕೆ ನೀಡಿದ್ದಾರೆ.

ವಿರುದ್ಧವಾಗಿ ಯಾರೇ ನಿಂತ್ರೂ ಗೆಲ್ಲುವುದು ಡಿಎಂಕೆ ಮಾತ್ರ: ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್ Image Credit source: The federal
ನಯನಾ ರಾಜೀವ್
|

Updated on: Nov 06, 2024 | 12:10 PM

Share

ವಿರುದ್ಧವಾಗಿ ಯಾರೇ ನಿಂತರೂ ತಮಿಳುನಾಡು ಚುನಾವಣೆಯಲ್ಲಿ ಗೆಲ್ಲುವುದು ಡಿಎಂಕೆ ಮಾತ್ರ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. 2026ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರೇ ವಿರೋಧವಾಗಿ ಬಂದರೂ ತಮ್ಮ ಪಕ್ಷವೇ ಗೆಲ್ಲಲಿದೆ ಎಂದು ಉದಯನಿಧಿ ಸ್ಟಾಲಿನ್ ಪರೋಕ್ಷವಾಗಿ ವಿಜಯ್ ಎಚ್ಚರಿಕೆ ನೀಡಿದ್ದಾರೆ.

ನಟ, ರಾಜಕಾರಣಿ ವಿಜಯ್ ಅಕ್ಟೋಬರ್ 27 ರಂದು ಹೊಸದಾಗಿ ಪ್ರಾರಂಭಿಸಲಾದ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ (TVK) ಉದ್ಘಾಟನಾ ಸಮಾವೇಶವನ್ನು ನಡೆಸಿದರು.

ವಿಲ್ಲುಪುರಂ ಜಿಲ್ಲೆಯ ವಿಕ್ರವಾಂಡಿಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ವಿಜಯ್ ಅವರು ತಮ್ಮ ಮೊದಲ ರಾಜಕೀಯ ಭಾಷಣವನ್ನು ಮಾಡಿದರು. ಅವರು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಬಿಜೆಪಿಯನ್ನು ಹೆಸರಿಸದೆ ವಿರುದ್ಧ ಮಾತನಾಡಿದ್ದರು.

ಅದಕ್ಕೆ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯಿಸಿದ್ದು, 2026ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮನ್ನು ವಿರೋಧಿಸಲು ಯಾರು ನಿರ್ಧರಿಸಿದರೂ, ಯಾವುದೇ ಮೈತ್ರಿ ಮಾಡಿಕೊಂಡರೂ ಡಿಎಂಕೆಯೇ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಜಯ್ ಜೊತೆ ಬಹಳ ದಿನಗಳಿಂದ ಗೆಳೆತನ ಹೊಂದಿರುವ ಉದಯನಿಧಿ, ತಮ್ಮ ಚೊಚ್ಚಲ ರಾಜಕೀಯ ಸಮಾವೇಶಕ್ಕೆ ಸಹ ನಟನಿಗೆ ಶುಭ ಹಾರೈಸಿದ್ದರು.

ಮತ್ತಷ್ಟು ಓದಿ: Thalapathy Vijay: ತಮಿಳುನಾಡು ಚುನಾವಣೆಗೆ ನಟ ದಳಪತಿ ವಿಜಯ್ ಸಿದ್ಧತೆ, ಪಕ್ಷದ ಚಿಹ್ನೆ ಬಿಡುಗಡೆ

ವಿಜಯ್ ಏನು ಹೇಳಿದ್ದರು? ಮೊದಲ ಸಭೆಯಲ್ಲಿ ದಳಪತಿ ವಿಜಯ್ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆ ಒಂದು ಕುಟುಂಬ ತಮಿಳುನಾಡನ್ನು ಲೂಟಿ ಮಾಡುತ್ತಿದೆ ಎಂದಿದ್ದರು. ದ್ರಾವಿಡ ರಾಜಕಾರಣ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದಾರೆ. ವಿಜಯ್ ವೇದಿಕೆಯಲ್ಲಿ ಡಿಎಂಕೆ ಮತ್ತು ಬಿಜೆಪಿ ವಿರುದ್ಧ ತೀವ್ರ ಟೀಕೆ ಮಾಡಿದ್ದರು. ನಮ್ಮಲ್ಲಿ ಯಾವುದೇ ರಾಜಿ ರಾಜಕಾರಣ ಇಲ್ಲ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದೂ ವಿಜಯ್ ಘೋಷಿಸಿದ್ರು. ತಮಿಳಿಗ ವೆಟ್ರಿ ಕಳಗಂನ ಮೊದಲ ಸಮ್ಮೇಳನದಲ್ಲಿ ವಿಜಯ್ ಮಾಡಿದ ಭಾಷಣ ಡಿಎಂಕೆ ವಿರುದ್ಧ ಮಾತನಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ