ಮೇ 24ರೊಳಗೆ ತಮಿಳುನಾಡು ವಿಧಾನಸಭೆ ಚುನಾವಣೆ, ಶೀಘ್ರ ದಿನಾಂಕ ಘೋಷಣೆ: ಚುನಾವಣಾ ಆಯೋಗ

Tamilnadu assembly election 2021 ತಮಿಳುನಾಡು ವಿಧಾನಸಭೆ ಜತೆಗೆ ಕನ್ಯಾಕುಮಾರಿ ಲೋಕಸಭೆ ಉಪಚನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಚುನಾವಣೆ ನಡೆಸುವ ಕುರಿತು ರಾಜಕೀಯ ನಾಯಕರ ಜತೆ ಚರ್ಚೆ ಮಾಡಿದ್ದೇವೆ ಎಂದು ಸುನೀಲ್​ ಅರೋರ ಮಾಹಿತಿ ನೀಡಿದರು.

ಮೇ 24ರೊಳಗೆ ತಮಿಳುನಾಡು ವಿಧಾನಸಭೆ ಚುನಾವಣೆ, ಶೀಘ್ರ ದಿನಾಂಕ ಘೋಷಣೆ: ಚುನಾವಣಾ ಆಯೋಗ
ಸುನೀಲ್​ ಅರೋರಾ
Follow us
| Updated By: ಸಾಧು ಶ್ರೀನಾಥ್​

Updated on: Feb 11, 2021 | 4:51 PM

ಚೆನ್ನೈ: ಮೇ 24ರೊಳಗೆ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಸುತ್ತೇವೆ. ಈ ಬಗ್ಗೆ ಶೀಘ್ರವೇ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರ ಹೇಳಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಕುರಿತು ಚೆನ್ನೈನಲ್ಲಿ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 24ಕ್ಕೆ ತಮಿಳುನಾಡು ವಿಧಾನಸಭೆ ಅವಧಿ ಪೂರ್ಣಗೊಳ್ಳುತ್ತದೆ. ಹೀಗಾಗಿ, ಈ ಅವಧಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನಾವು ದೆಹಲಿಗೆ ಹೋದ ನಂತರ ಚುನಾವಣೆ ದಿನಾಂಕವನ್ನು ‌ಬಹಿರಂಗಪಡಿಸಲಾಗುವುದು ಎಂದರು.

ಕನ್ಯಾಕುಮಾರಿ ಲೋಕಸಭೆ ಉಪಚನಾವಣೆಯೂ ನಡೆಯಲಿದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮತದಾನ ನಡೆಸುತ್ತೇವೆ ಎಂದಿರುವ ಸುನೀಲ್ ಅರೋರ, ತಮಿಳುನಾಡು ವಿಧಾನಸಭೆ ಜತೆಗೆ ಕನ್ಯಾಕುಮಾರಿ ಲೋಕಸಭೆ ಉಪಚನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಚುನಾವಣೆ ನಡೆಸುವ ಕುರಿತು ರಾಜಕೀಯ ನಾಯಕರ ಜತೆ ಚರ್ಚೆ ಮಾಡಿದ್ದೇವೆ. ಕೊರೊನಾ‌ ಮಾರ್ಗಸೂಚಿ ಪ್ರಕಾರವೇ ಮುಂಜಾಗ್ರತಾ ಕ್ರಮ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಮತದಾನ ಕೇಂದ್ರಗಳನ್ನು ಹೆಚ್ಚಾಗಿ ಸ್ಥಾಪಿಸುವ ಬಗ್ಗೆಯೂ ಮಾಹಿತಿ ನೀಡಿರುವ ಸುನೀಲ್ ಅರೋರ, 25 ಸಾವಿರ ಮತದಾನ ಕೇಂದ್ರಗಳನ್ನು ಹೆಚ್ಚಾಗಿ ಸ್ಥಾಪಿಸಲಾಗುವುದು. ಕಳೆದಬಾರಿ 68 ಸಾವಿರ ಇದ್ದ ಮತಗಟ್ಟೆ ಈ ಬಾರಿ 93 ಸಾವಿರಕ್ಕೆ ಏರಿಕೆ ಆಗುವ ಸಾಧ್ಯತೆ ಇದೆ. ರಾಜಕೀಯ ನಾಯಕರು ಕೂಡ ಕೆಲ ಸಲಹೆಗಳನ್ನು ನೀಡಿದ್ದಾರೆ. ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ರಾಷ್ಟ್ರೀಯ ಮತದಾರರ ದಿನಾಚರಣೆ | ರಿಮೋಟ್​ ವೋಟಿಂಗ್ ತಂತ್ರಜ್ಞಾನ ಅಭಿವೃದ್ಧಿಗೆ ಆಯೋಗ ಪ್ರಯತ್ನ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ