AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ: ಟಿಟಿವಿ ದಿನಕರನ್ ಜೊತೆ ಅಸಾದುದ್ದೀನ್ ಓವೈಸಿ ಮೈತ್ರಿ

Tamil Nadu Assembly Elections 2021: ಎರಡೂ ಪಕ್ಷಗಳ ಸೀಟು ಹಂಚಿಕೆ ವಿವರದಂತೆ ಅಸಾದುದ್ದೀನ್ ಓವೈಸಿಯ AIMIM ಪಕ್ಷ ತಮಿಳುನಾಡಿನ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ತಮಿಳುನಾಡು ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ: ಟಿಟಿವಿ ದಿನಕರನ್ ಜೊತೆ ಅಸಾದುದ್ದೀನ್ ಓವೈಸಿ ಮೈತ್ರಿ
ಅಸಾದುದ್ದೀನ್​ ಓವೈಸಿ
Follow us
TV9 Web
| Updated By: ganapathi bhat

Updated on:Apr 06, 2022 | 7:19 PM

ಚೆನ್ನೈ: ಅಸಾದುದ್ದೀನ್ ಓವೈಸಿ ನೇತೃತ್ವದ AIMIM ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಗೆ ಟಿಟಿವಿ ದಿನಕರನ್ ನೇತೃತ್ವದ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (AMMK) ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಈ ಮೂಲಕ AIMIM ಪಾರ್ಟಿ AMMK ಪಕ್ಷ ಮುಂಬರುವ ವಿಧಾನಸಭಾ ಚುನಾವಣೆಯನ್ನು ಜತೆಯಾಗಿ ಎದುರಿಸುವುದು ಖಚಿತವಾಗಿದೆ. ಎರಡೂ ಪಕ್ಷಗಳ ಸೀಟು ಹಂಚಿಕೆ ವಿವರದಂತೆ ಅಸಾದುದ್ದೀನ್ ಓವೈಸಿಯ AIMIM ಪಕ್ಷ ತಮಿಳುನಾಡಿನ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. 234 ಸೀಟ್​ಗಳ ಪೈಕಿ ವನಿಯಂಬಾಡಿ, ಕೃಷ್ಣಗಿರಿ ಹಾಗೂ ಶಂಕರಪುರಂನಲ್ಲಿ AIMIM ಸ್ಪರ್ಧಿಸಲಿದೆ.

ವಿ.ಕೆ.ಶಶಿಕಲಾ ಇತ್ತೀಚೆಗಷ್ಟೇ ತಮ್ಮ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದರು. ಹಾಗಾಗಿ, ಸದ್ಯ ಒಬ್ಬಂಟಿಯಾಗಿದ್ದ ಟಿಟಿವಿ ದಿನಕರನ್​ಗೆ ಓವೈಸಿ ಬಲ ಜತೆಯಾಗಿದೆ. ಟಿಟಿವಿ ದಿನಕರನ್​ರ AMMK ಪಕ್ಷವನ್ನು ಜತೆ ಸೇರಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸಿತ್ತು. AIADMK ಮತಗಳು ಹಂಚಿಹೋಗಬಾರದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲು ಹೊರಟಿತ್ತು. ಆದರೆ, ಎಡಪ್ಪಡಿ ಪಳನಿಸ್ವಾಮಿ ಈ ನಡೆಗೆ ವಿರೋಧ ವ್ಯಕ್ತಪಡಿಸಿದ್ದರು. ದಿನಕರನ್ AIADMK ಜತೆಯಾದರೆ, ಶಶಿಕಲಾ ಪಕ್ಷದ ಉನ್ನತ ಸ್ಥಾನ ಹೊಂದಬಹುದು ಎಂಬ ಕಾರಣಕ್ಕೆ AMMKಯನ್ನು ದೂರವಿರಿಸಲಾಗಿತ್ತು ಎಂಬ ಮಾತುಗಳು ಕೇಳಿಬಂದಿದ್ದವು. ಬಿಜೆಪಿ ಲೆಕ್ಕಾಚಾರದಂತೆ AMMK ಸುಮಾರು 40 ಕ್ಷೇತ್ರಗಳಲ್ಲಿ ಮತಗಳಿಕೆ ಮೇಲೆ ಪ್ರಭಾವ ಬೀರಬಹುದು.

ಆಸಾದುದ್ದೀನ್ ಓವೈಸಿಯ AIMIM ಪಕ್ಷ DMK-Congress ಜತೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ, ಕಾಂಗ್ರೆಸ್ ಜತೆಗೆ ಇಂಡಿಯನ್ ಮುಸ್ಲಿಂ ಲೀಗ್​ನಂಥಾ ಇತರ ಮುಸ್ಲಿಂ ಪಕ್ಷಗಳು ಇರುವ ಕಾರಣ ಕಾಂಗ್ರೆಸ್ ಜತೆಯಾಗುವ ನಿರ್ಧಾರವನ್ನು AIMIM ಕೈಬಿಟ್ಟಿತು ಎಂದು ಹೇಳಲಾಗುತ್ತಿದೆ.

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಮತ ಎಣಿಕೆ ದಿನಾಂಕಗಳು ಪ್ರಕಟವಾಗಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ಎಲ್ಲ ರಾಜ್ಯಗಳಲ್ಲಿಯೂ ಮೇ 2 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: Tamil Nadu Assembly Elections 2021: ಸಿಪಿಎಂ-ಡಿಎಂಕೆ ಮೈತ್ರಿ ಘೋಷಣೆ; 6 ಕ್ಷೇತ್ರಗಳಲ್ಲಿ ಸಿಪಿಎಂ ಸ್ಪರ್ಧೆ

Tamil Nadu Assembly Elections 2021: ತಮಿಳುನಾಡು ಚುನಾವಣೆಯಲ್ಲಿ ಎಐಎಡಿಎಂಕೆ, ಬಿಜೆಪಿ, ಪಿಎಂಕೆ ಮೈತ್ರಿ ಕೂಟಕ್ಕೆ ಗೆಲುವು ನಿಶ್ಚಿತ: ಅಮಿತ್ ಶಾ

Published On - 8:39 pm, Mon, 8 March 21

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!