AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Assembly Elections 2021: ಸಿಪಿಎಂ-ಡಿಎಂಕೆ ಮೈತ್ರಿ ಘೋಷಣೆ; 6 ಕ್ಷೇತ್ರಗಳಲ್ಲಿ ಸಿಪಿಎಂ ಸ್ಪರ್ಧೆ

ಇಲ್ಲಿಯವರೆಗೆ ದ್ರಾವಿಡ ಮುನ್ನೇತ್ರ ಕಳಗಂ (DMK) ಒಟ್ಟು 54 ಕ್ಷೇತ್ರಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ. CPM, CPI, MDMK ಹಾಗೂ VCK ಪಕ್ಷಕ್ಕೆ ತಲಾ 6 ಕ್ಷೇತ್ರಗಳು, ಕಾಂಗ್ರೆಸ್​ಗೆ 25 ಕ್ಷೇತ್ರಗಳು, IUMLಗೆ 3 ಮತ್ತು MMKಗೆ 2 ಸೀಟ್​ಗಳನ್ನು ನೀಡಿದೆ.

Tamil Nadu Assembly Elections 2021: ಸಿಪಿಎಂ-ಡಿಎಂಕೆ ಮೈತ್ರಿ ಘೋಷಣೆ; 6 ಕ್ಷೇತ್ರಗಳಲ್ಲಿ ಸಿಪಿಎಂ ಸ್ಪರ್ಧೆ
ಡಿಎಂಕೆ ನಾಯಕ ಸ್ಟಾಲಿನ್ ಹಾಗೂ ಸಿಪಿಐಎಂ ನಾಯಕ ಬಾಲಕೃಷ್ಣನ್
Follow us
TV9 Web
| Updated By: ganapathi bhat

Updated on:Apr 06, 2022 | 7:19 PM

ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷಗಳು ಭರ್ಜರಿ ತಯಾರಿಯಲ್ಲಿವೆ. DMK ಪಕ್ಷ AIADMK ಹಾಗೂ ಬಿಜೆಪಿ ಮೈತ್ರಿ ಪಕ್ಷವನ್ನು ಮಣಿಸಲು ಸರ್ವ ಸನ್ನದ್ಧವಾಗುತ್ತಿದೆ. ಇಂದು (ಮಾರ್ಚ್ 8) CPI(M) ಡಿಎಂಕೆ ಜತೆಗೆ ಮೈತ್ರಿ ಘೋಷಣೆ ಮಾಡಿದ್ದು, ವಿಧಾನಸಭಾ ಚುನಾವಣೆಗೆ 6 ಸೀಟ್​ಗಳನ್ನು ಪಡೆದುಕೊಂಡಿದೆ. ನಾವು ಎಲ್ಲಾ 234 ಕ್ಷೇತ್ರಗಳಲ್ಲೂ AIDMK-BJP ಪಕ್ಷವನ್ನು ಸೋಲಿಸಲು ಕೆಲಸ ಮಾಡುತ್ತೇವೆ ಎಂದು ತಮಿಳುನಾಡು CPI(M) ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣನ್ ಹೇಳಿದ್ದಾರೆ.

ಇಲ್ಲಿಯವರೆಗೆ ದ್ರಾವಿಡ ಮುನ್ನೇತ್ರ ಕಳಗಂ (DMK) ಒಟ್ಟು 54 ಕ್ಷೇತ್ರಗಳನ್ನು ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ. CPM, CPI, MDMK ಹಾಗೂ VCK ಪಕ್ಷಕ್ಕೆ ತಲಾ 6 ಕ್ಷೇತ್ರಗಳು, ಕಾಂಗ್ರೆಸ್​ಗೆ 25 ಕ್ಷೇತ್ರಗಳು, IUMLಗೆ 3 ಮತ್ತು MMKಗೆ 2 ಸೀಟ್​ಗಳನ್ನು ನೀಡಿದೆ.

ದ್ರಾವಿಡ ಮುನ್ನೇತ್ರ ಕಳಗಂ (DMK) ತನ್ನ ಮೈತ್ರಿ ಪಕ್ಷವಾದ ಕಾಂಗ್ರೆಸ್​ಗೆ 25 ಸೀಟುಗಳನ್ನು ನೀಡುವುದಾಗಿ ಭಾನುವಾರ ತೀರ್ಮಾನ ಕೈಗೊಂಡಿತ್ತು. ಭಾನುವಾರ ಬೆಳಗ್ಗೆ ನಡೆದ ಸಭೆಯಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮುಖ್ಯಸ್ಥ ಕೆ.ಎಸ್.ಅಳಗಿರಿ ಸೀಟು ಹಂಚಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದರು.

25 ವಿಧಾನಸಭೆ ಕ್ಷೇತ್ರ ಮತ್ತು ಕನ್ಯಾಕುಮಾರಿಯಲ್ಲಿ ಒಂದು ಲೋಕಸಭಾ ಸ್ಥಾನದಲ್ಲಿ ಕಾಂಗ್ರೆಸ್ ಸ್ಪರ್ಧೆಗಿಳಿಯಲಿದೆ. ಕಳೆದ ವರ್ಷ ಕಾಂಗ್ರೆಸ್ ಸಂಸದ ಹೆಚ್. ವಸಂತಕುಮಾರ್ ಕೊವಿಡ್ ನಿಂದ ನಿಧನರಾದ ಹಿನ್ನೆಲೆಯಲ್ಲಿ ಕನ್ಯಾಕುಮಾರಿ ಲೋಕಸಭಾ ಸ್ಥಾನ ಖಾಲಿಯಾಗಿ ಉಳಿದಿತ್ತು.

ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅಳಗಿರಿ, ಡಿಎಂಕೆ ಜತೆಗಿನ ಸೀಟು ಹಂಚಿಕೆ ಒಪ್ಪಂದಕ್ಕೆ ನಾವು ಸಹಿ ಹಾಕಿದ್ದೇವೆ. 25 ವಿಧಾನಸಭಾ ಸ್ಥಾನಗಳಲ್ಲಿ ಹಾಗೂ ಕನ್ಯಾಕುಮಾರಿ ಲೋಕಸಭಾ ಸ್ಥಾನಕ್ಕಾಗಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಹೇಳಿದ್ದರು.

ರೇಷನ್ ಕಾರ್ಡ್ ಹೊಂದಿದ ಗೃಹಿಣಿಯರಿಗೆ ಮಾಸಿಕ 1,000 ರೂ. ವಿತರಣೆ ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷ ಅಧಿಕಾರಕ್ಕೆ ಬಂದರೆ, ರೇಷನ್ ಕಾರ್ಡ್ ಹೊಂದಿದ ಗೃಹಿಣಿಯರಿಗೆ ಪ್ರತಿ ತಿಂಗಳು 1,000 ರೂಪಾಯಿ ನೀಡುವುದಾಗಿ DMK ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಘೋಷಣೆ ಮಾಡಿದ್ದಾರೆ. ಇದರಿಂದ ಎಲ್ಲಾ ಮಹಿಳೆಯರು ಆಹಾರ, ಅಗತ್ಯ ಸಾಮಾಗ್ರಿಗಳನ್ನು ಪಡೆಯುವಂತಾಗಲಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಸುಮಾರು 2.8 ಕೋಟಿ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ಅಷ್ಟೂ ಕುಟುಂಬದ ಮಹಿಳೆಯರಿಗೆ ಮಾಸಿಕ 1,000 ರೂ.ನಂತೆ ನೀಡಿದರೆ, ವಾರ್ಷಿಕ 33,600 ಕೋಟಿ ವೆಚ್ಚ ಉಂಟಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Tamil Nadu Assembly Elections 2021: ತಮಿಳುನಾಡು ಚುನಾವಣೆಯಲ್ಲಿ ಎಐಎಡಿಎಂಕೆ, ಬಿಜೆಪಿ, ಪಿಎಂಕೆ ಮೈತ್ರಿ ಕೂಟಕ್ಕೆ ಗೆಲುವು ನಿಶ್ಚಿತ: ಅಮಿತ್ ಶಾ

Tamil Nadu Assembly Elections 2021: ತಮಿಳುನಾಡಿನ ಸಂಪ್ರದಾಯ ಮತ್ತು ಸಂಸ್ಕೃತಿಗೆ ಅವಮಾನವೆಸಗಲು ಬಿಡಬಾರದು: ರಾಹುಲ್ ಗಾಂಧಿ

Published On - 1:25 pm, Mon, 8 March 21

ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು