AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Assembly Elections 2021: ಚುನಾವಣಾ ಮೈತ್ರಿಗಾಗಿ ಕಮಲ್ ಹಾಸನ್ ಭೇಟಿ ಮಾಡಿದ ಶರತ್ ಕುಮಾರ್

Tamil Nadu: ಮೈತ್ರಿ ಬಗ್ಗೆ ಕಮಲ್ ಹಾಸನ್ ಜತೆ ಮಾತನಾಡಿದ್ದು ಅವರಿಂದ ಸಕಾರಾತ್ಮಕ ಉತ್ತರ ನಿರೀಕ್ಷಿಸುತ್ತಿದ್ದೇನೆ ಎಂದು ಆಲ್ ಇಂಡಿಯಾ ಸಮತ್ವ ಮಕ್ಕಳ್ ಕಾಟ್ಚಿ (AISMK) ಸಂಸ್ಥಾಪಕ ಮತ್ತು ನಟ ಶರತ್ ಕುಮಾರ್ ಹೇಳಿದ್ದಾರೆ.

Tamil Nadu Assembly Elections 2021: ಚುನಾವಣಾ ಮೈತ್ರಿಗಾಗಿ ಕಮಲ್ ಹಾಸನ್ ಭೇಟಿ ಮಾಡಿದ ಶರತ್ ಕುಮಾರ್
ಕಮಲ್ ಹಾಸನ್ ಅವರನ್ನು ಭೇಟಿ ಮಾಡಿದ ಶರತ್ ಕುಮಾರ್ (ಟ್ವಿಟರ್ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 27, 2021 | 2:28 PM

Share

ಚೆನ್ನೈ: ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು ಆಲ್ ಇಂಡಿಯಾ ಸಮತ್ವ ಮಕ್ಕಳ್ ಕಾಟ್ಚಿ (AISMK) ಸಂಸ್ಥಾಪಕ ಮತ್ತು ನಟ ಶರತ್ ಕುಮಾರ್ ಅವರು ಮಕ್ಕಳ್ ನೀದಿ ಮೈಯಂ (MNM) ಮುಖ್ಯಸ್ಥ, ನಟ ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಚುನಾವಣಾ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಮೈತ್ರಿ ಬಗ್ಗೆ ಕಮಲ್ ಹಾಸನ್ ಜತೆ ಮಾತನಾಡಿದ್ದು ಅವರಿಂದ ಸಕಾರಾತ್ಮಕ ಉತ್ತರ ನಿರೀಕ್ಷಿಸುತ್ತಿದ್ದೇನೆ. ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಚುನಾವಣೆ ನಂತರವೇ ತಿಳಿಯಲಿದೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಶರತ್ ಕುಮಾರ್ ಹೇಳಿದ್ದಾರೆ.

ಕಮಲ್ ಹಾಸನ್ ಅವರ ಜತೆಗಿನ ಮಾತುಕತೆ ಪೂರ್ಣವಾಗಿಲ್ಲ. ನಮ್ಮ ಪಕ್ಷವು ಜನರ ಒಳಿತಿಗಾಗಿ ಕೆಲಸ ಮಾಡಲಿದೆ ಎಂದು ಹೇಳಿದ ಶರತ್ ಕುಮಾರ್ ಹಣದ ಆಸೆಗಾಗಿ ಮತಚಲಾಯಿಸಬೇಡಿ ಎಂದು  ಮತದಾರರಲ್ಲಿ ಮನವಿ ಮಾಡಿದ್ದಾರೆ. ಜಯಲಲಿತಾ ಅವರ ಹುಟ್ಟುಹಬ್ಬದ ಆಚರಣೆ ವೇಳೆ ಶರತ್ ಕುಮಾರ್, ಅವರ ಪತ್ನಿ ರಾಧಿಕಾ ವಿ.ಕೆ.ಶಶಿಕಲಾ ಅವರನ್ನು ಭೇಟಿ ಮಾಡಿದ್ದರು.

ಈ ಹಿಂದೆ ಎಐಎಡಿಎಂಕೆ ಮೈತ್ರಿ ಪಕ್ಷವಾಗಿದ್ದ ಶರತ್ ಕುಮಾರ್ ಅವರ ಪಕ್ಷ ಎಐಎಸ್ಎಂಕೆ ಮುಂಬರುವ ಚುನಾವಣೆಯಲ್ಲಿ ಪೆರಂಬಲೂರ್ ಸಂಸದ, ಟಿ.ಆರ್. ಪಚ್ಚಮುತ್ತು ಅವರ ಇಂದಿಯಾ ಜನನಾಯಕ ಕಾಟ್ಚಿ (IJK) ಜತೆ ಸ್ಪರ್ಧಿಸುವುದಾಗಿ ಶುಕ್ರವಾರ ಘೋಷಿಸಿತ್ತು. ಲೋಕಸಭಾ ಚುನಾವಣೆಯಲ್ಲಿ ಐಜೆಕೆ ಪಕ್ಷ ಡಿಎಂಕೆ ಮೈತ್ರಿಕೂಟದಲ್ಲಿತ್ತು.

ಮಾರ್ಚ್ 3ರಿಂದ ಚುನಾವಣಾ ಪ್ರಚಾರ: ಕಮಲ್ ಹಾಸನ್ ಮಾರ್ಚ್ 3ನೇ ತಾರೀಖಿನಿಂದ ಚುನಾವಣಾ ಪ್ರಚಾರ ಆರಂಭಿಸುತ್ತೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡ ನಂತರ ನಾನು ಮಾತನಾಡುತ್ತೇನೆ. ಮಾರ್ಚ್ 7ರಂದು ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಕ್ಕಳ್ ನೀಧಿ ಮೈಯ್ಯಂ ಮುಖ್ಯಸ್ಥ ಕಮಲ್ ಹಾಸನ್ ಹೇಳಿದ್ದಾರೆ.

ಎಐಎಡಿಎಂಕೆ ಜತೆ ಬಿಜೆಪಿ ನಾಯಕರ ಮಾತುಕತೆ

ಸೀಟು ಹಂಚಿಕೆ ಬಗ್ಗೆ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮಾತುಕತೆ ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡು ಉಸ್ತುವಾರಿ ವಹಿಸಿರುವ ಸಿಟಿ ರವಿ, ಕೇಂದ್ರದ ರಾಜ್ಯ ಖಾತೆಗಳ ಸಚಿವ ಕಿಶನ್ ರೆಡ್ಡಿ, ವಿ.ಕೆ.ಸಿಂಗ್ ಮತ್ತು ತಮಿಳುನಾಡು ಬಿಜೆಪಿ ಮುಖ್ಯಸ್ಥ ಎಲ್. ಮುರುಗನ್ ನೇತೃತ್ವದ ತಂಡವು ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಜತೆ ಅವರ ನಿವಾಸದಲ್ಲಿ ಶುಕ್ರವಾರ ಮಾತುಕತೆ ನಡೆಸಿದೆ.

ತಮಿಳುನಾಡು,ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಶುಕ್ರವಾರ ಘೋಷಿಸಿತ್ತು. ಏಪ್ರಿಲ್ 6ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದ್ದು ಮೇ.2ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ, ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿಕೂಟ ಮಾಡಿಕೊಂಡಿದ್ದು ಪ್ರಾದೇಶಿಕ ಪಕ್ಷಗಳು ಇಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಇದನ್ನೂ ಓದಿ: Tamil Nadu Politics: ರಾಜಕೀಯ ವಿಶ್ಲೇಷಣೆ | ಶಶಿಕಲಾ ಆಡೋದು ಗೆಲ್ಲುವ ಆಟವೋ? ಒಡೆಯುವ ಆಟವೋ?

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!