ನೀಟ್ ರದ್ದುಗೊಳಿಸುವ ಮಸೂದೆಗೆ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರ

TV9 Digital Desk

| Edited By: Rashmi Kallakatta

Updated on: Sep 13, 2021 | 8:08 PM

Tamil Nadu: 12ನೇ ತರಗತಿಯ ಅಂಕಗಳನ್ನು ಆಧರಿಸಿ ಇದು ವೈದ್ಯಕೀಯ, ದಂತವೈದ್ಯಶಾಸ್ತ್ರ, ಭಾರತೀಯ ಔಷಧ ಮತ್ತು ಹೋಮಿಯೋಪತಿಯ ಯುಜಿ ಕೋರ್ಸ್‌ಗಳಿಗೆ ಪ್ರವೇಶವನ್ನು ಒದಗಿಸಲಿದೆ. ಸರ್ಕಾರದ ನಡೆಯನ್ನು ವಿರೋಧಿಸಿ ಬಿಜೆಪಿ ವಿಧಾನಸಭೆಯಿಂದ ಹೊರನಡೆದಿದೆ.

ನೀಟ್ ರದ್ದುಗೊಳಿಸುವ ಮಸೂದೆಗೆ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ . ಸ್ಟಾಲಿನ್

ಚೆನ್ನೈ: ತಮಿಳುನಾಡು ವಿಧಾನಸಭೆಯು ಸೋಮವಾರ ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆಯನ್ನು (NEET) ತಿರಸ್ಕರಿಸುವ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಲು 12 ನೇ ತರಗತಿ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ನೀಡುವ ಮಸೂದೆಯನ್ನು ಅಂಗೀಕರಿಸಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (M K Stalin) ಮಸೂದೆಯನ್ನು ಮಂಡಿಸಿದರು ಮತ್ತು ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಮತ್ತು ಅದರ ಮಿತ್ರ ಪಕ್ಷ ಪಿಎಂಕೆ ಸೇರಿದಂತೆ ಎಲ್ಲಾ ಪಕ್ಷಗಳು, ಕಾಂಗ್ರೆಸ್ ನಂತಹ ಇತರ ಪಕ್ಷಗಳು ಮಸೂದೆಯನ್ನು ಬೆಂಬಲಿಸಿದವು.

12ನೇ ತರಗತಿಯ ಅಂಕಗಳನ್ನು ಆಧರಿಸಿ ಇದು ವೈದ್ಯಕೀಯ, ದಂತವೈದ್ಯಶಾಸ್ತ್ರ, ಭಾರತೀಯ ಔಷಧ ಮತ್ತು ಹೋಮಿಯೋಪತಿಯ ಯುಜಿ ಕೋರ್ಸ್‌ಗಳಿಗೆ ಪ್ರವೇಶವನ್ನು ಒದಗಿಸಲಿದೆ. ಸರ್ಕಾರದ ನಡೆಯನ್ನು ವಿರೋಧಿಸಿ ಬಿಜೆಪಿ ವಿಧಾನಸಭೆಯಿಂದ ಹೊರನಡೆದಿದೆ.

ಸ್ಟಾಲಿನ್ ಜುಲೈನಲ್ಲಿ ತನ್ನ ವರದಿಯನ್ನು ಸಲ್ಲಿಸಿದ ನಿವೃತ್ತ ನ್ಯಾಯಾಧೀಶ ಎ.ಕೆ ರಾಜನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಮಸೂದೆಯನ್ನು ಮಂಡಿಸಿದರು. ನಿವೃತ್ತ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರು ವಿವಿಧ ಮಧ್ಯಸ್ಥಗಾರರಿಂದ ಸುಮಾರು 86,000 ಪ್ರತಿನಿಧಿಗಳನ್ನು ಪರಿಶೀಲಿಸಿದ ನಂತರ ವರದಿಯನ್ನು ಸಿದ್ಧಪಡಿಸಲಾಗಿದೆ ಮತ್ತು ಅವರಲ್ಲಿ ಹೆಚ್ಚಿನವರು ನೀಟ್ ಬಯಸುವುದಿಲ್ಲ ಎಂದು ಹೇಳಿದರು.

ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಉನ್ನತ ಮಟ್ಟದ ಸಮಿತಿಯ ಶಿಫಾರಸನ್ನು ಎಚ್ಚರಿಕೆಯಿಂದ ಪರಿಗಣಿಸಿದ ನಂತರ ರಾಜ್ಯ ಸರ್ಕಾರವು ನೀಟ್ ರದ್ದುಗೊಳಿಸಲು ನಿರ್ಧರಿಸಿದೆ ಎಂದು ಸ್ಟಾಲಿನ್ ಹೇಳಿದರು. ಎಮ್‌ಬಿಬಿಎಸ್ ಮತ್ತು ಉನ್ನತ ವೈದ್ಯಕೀಯ ಅಧ್ಯಯನಗಳಲ್ಲಿ ನೀಟ್ ಸಾಮಾಜಿಕ ಪ್ರಾತಿನಿಧ್ಯವನ್ನು ದುರ್ಬಲಗೊಳಿಸಿದೆ ಎಂದು ಸಮಿತಿಯು ವರದಿ ಮಾಡಿದೆ. ಮುಖ್ಯವಾಗಿ ಸಮಾಜದ ಕೈಗೆಟುಕುವ ಮತ್ತು ಶ್ರೀಮಂತ ವರ್ಗಗಳಿಗೆ ಅನುಕೂಲ ಮಾಡಿಕೊಡುತ್ತದೆ ಮತ್ತು ಹಿಂದುಳಿದ ಸಾಮಾಜಿಕ ಗುಂಪುಗಳ ಕನಸುಗಳನ್ನು ವಿಫಲಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ಏತನ್ಮಧ್ಯೆ ಪರೀಕ್ಷೆಯ ಫಲಿತಾಂಶಕ್ಕೆ ಹೆದರಿ ವೈದ್ಯಕೀಯ ಆಕಾಂಕ್ಷಿಯ ಆತ್ಮಹತ್ಯೆ ಸದನದಲ್ಲಿ ಪ್ರತಿಧ್ವನಿಸಿತು, ಈ ಘಟನೆಯ ಕುರಿತು ಸರ್ಕಾರದ ವಿರುದ್ಧ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ ಟೀಕಾ ಪ್ರಹಾರ ನಡೆಸಿದೆ.

ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ಈ ವರ್ಷ ನೀಟ್ ನಡೆಯುತ್ತದೆಯೋ ಇಲ್ಲವೋ ಎಂಬ ಬಗ್ಗೆ ಸ್ಪಷ್ಟೀಕರಣವನ್ನು ನೀಡಲು ವಿಫಲವಾಗಿದೆ. ಇದು 19 ವರ್ಷದ ನೀಟ್ ಆಕಾಂಕ್ಷಿ ಧನುಷ್ ಸಾವಿಗೆ ಕಾರಣ ಎಂದು ಟೀಕಿಸಿದ್ದಾರೆ.

“ಡಿಎಂಕೆ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ನೀಟ್ ರದ್ದಾಗುತ್ತದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದರು ಅದು ಆಗಲಿಲ್ಲ. ಸರ್ಕಾರವು ಸರಿಯಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ, ಇದರಿಂದಾಗಿ ವಿದ್ಯಾರ್ಥಿಗಳು, ಪೋಷಕರು ಕಂಗಾಲಾಗಿದ್ದಾರೆ. ಸ್ಟಾಲಿನ್ ಮತ್ತು ಇತರ ಡಿಎಂಕೆ ಮಂತ್ರಿಗಳು ನೀಟ್ ಅನ್ನು ರದ್ದುಗೊಳಿಸಲಾಗುವುದು ಎಂದು ನಿರಂತರವಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದರಿಂದ, ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲು 100 ಪ್ರತಿಶತ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ ಮತ್ತು ಇದು ಧನುಷ್ ಸಾವಿಗೆ ಕಾರಣವಾಯಿತು ಎಂದು ಎಡಪ್ಪಾಡಿ ಹೇಳಿದರು.

ಈ ಮಧ್ಯೆ ಧನುಷ್ ಮತ್ತು ಇನ್ನೊಬ್ಬ ನೀಟ್ ಆಕಾಂಕ್ಷಿ ಅನಿತಾ ಸಾವಿಗೆ ಎಐಎಡಿಎಂಕೆ ಹೊಣೆ ಎಂದು ಸ್ಟಾಲಿನ್ ಹೇಳಿದ್ದಾರೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಹಿಂದಿನ ಎಐಎಡಿಎಂಕೆ ಸರ್ಕಾರವು ಸಿಎಎ ಮತ್ತು ರೈತ ಕಾನೂನುಗಳ ಪರವಾಗಿ ಮತ ಚಲಾಯಿಸುವ ಮೊದಲು ತಮಿಳುನಾಡಿಗೆ ನೀಟ್‌ನಿಂದ ವಿನಾಯಿತಿ ನೀಡುವಂತೆ ಬಿಜೆಪಿಯನ್ನು ಒತ್ತಾಯಿಸಬಹುದಿತ್ತು, ಆದರೆ ಅದನ್ನು ಮಾಡಲು ಅವರಿಗೆ ಧೈರ್ಯವಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಅಬ್ಬಾ ಜಾನ್ ಹೇಳಿಕೆ ಖಂಡಿಸಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ಅರ್ಜಿ

ಇದನ್ನೂ ಓದಿ: NEET Exam 2021ನೀಟ್ ಪರೀಕ್ಷೆಗೆ ಮುನ್ನ ಸೋಲಿನ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ; ನೀಟ್​​ನಿಂದ ಶಾಶ್ವತ ವಿನಾಯಿತಿ ಕೋರಿ ಮಸೂದೆ ಮಂಡಿಸುವುದಾಗಿ ಹೇಳಿದ ಸ್ಟಾಲಿನ್

(Tamil Nadu Assembly on Monday passed a Bill to dispense with NEET BJP stages walkout)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada