AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಮಾಮೂಲು ಕೊಡಲು ನಿರಾಕರಿಸಿದ್ದಕ್ಕೆ ಹೋಟೆಲ್ ಮ್ಯಾನೇಜರ್ ಮೇಲೆ ಹಲ್ಲೆ, ಡಿಎಂಕೆ ಅವಧಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ: ಅಣ್ಣಾಮಲೈ

ಚೆನ್ನೈನ ತಿರುಮಂಗಲಂನಲ್ಲಿ ಹೋಟೆಲ್ ಮ್ಯಾನೇಜರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ವಿಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದು, ಡಿಎಂಕೆ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ದೂರಿದ್ದಾರೆ.

ಚೆನ್ನೈ: ಮಾಮೂಲು ಕೊಡಲು ನಿರಾಕರಿಸಿದ್ದಕ್ಕೆ ಹೋಟೆಲ್ ಮ್ಯಾನೇಜರ್ ಮೇಲೆ ಹಲ್ಲೆ, ಡಿಎಂಕೆ ಅವಧಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ: ಅಣ್ಣಾಮಲೈ
ಹೋಟೆಲ್
ನಯನಾ ರಾಜೀವ್
|

Updated on: Nov 15, 2023 | 9:37 AM

Share

ಚೆನ್ನೈನ ತಿರುಮಂಗಲಂನಲ್ಲಿ ಹೋಟೆಲ್ ಮ್ಯಾನೇಜರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ವಿಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದು, ಡಿಎಂಕೆ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ ಎಂದು ದೂರಿದ್ದಾರೆ.

ಡಿಎಂಕೆ ಅವಧಿಯಲ್ಲಿ ಪೆಟ್ರೋಲ್ ಬಾಂಬ್​ ದಾಳಿ, ಮದ್ಯ, ಡ್ರಗ್ಸ್​ ಮಾರಾಟ, ಹಾಡಹಗಲೇ ಕೊಲೆಗಳು, ಮಹಿಳೆಗೆ ಸುರಕ್ಷತೆ ಇಲ್ಲದ ಬೀದಿಗಳು, ಹೆಚ್ಚುತ್ತಿರುವ ಪುಂಡರ ಗುಂಪು ಇದೆಲ್ಲವೂ ತಮಿಳುನಾಡಿನ ಭ್ರಷ್ಟ ಡಿಎಂಕೆ ಸರ್ಕಾರದ ವಿಜಯವಾಗಿದೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈನ ತಿರುಮಂಗಲಂನಲ್ಲಿ ಮಾಮೂಲು ಕೊಡಲಿಲ್ಲ ಎನ್ನುವ ಕಾರಣಕ್ಕೆ ಹೋಟೆಲ್ ಮ್ಯಾನೇಜರ್​ನನ್ನು ದುಷ್ಕರ್ಮಿಗಳು ಥಳಿಸಿರುವ ಘಟನೆ ಇದಾಗಿದೆ.

ಬಿಜೆಪಿ ರಾಜ್ಯ ಕಾರ್ಯದರ್ಶಿ ಕರುಪು ಮುರುಗನಂತಂ ಟ್ವೀಟ್​ ಮಾಡಿ, ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. ಹೋಟೆಲ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ದಾಳಿಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮ್ಯಾನೇಜರ್ ಕುಳಿತಿದ್ದ ಕ್ಯಾಶ್ ಕೌಂಟರ್‌ಗೆ ಐದು ಜನರ ಗುಂಪು ನುಗ್ಗಿ ಅವರನ್ನು ಹೊರಗೆಳೆಯಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕೆಲವು ಸೆಕೆಂಡ್‌ಗಳ ನಂತರ ಅವರು ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಅವರಿಗೆ ರಕ್ತಸ್ರಾವವಾಗುತ್ತಿದ್ದರೂ ರೌಡಿಗಳು ತಮ್ಮ ಕೃತ್ಯ ಮುಂದುವರೆಸಿದ್ದರು.

ಹೋಟೆಲ್ ಮ್ಯಾನೇಜರ್​ನಿಂದ ದೂರು ಸ್ವೀಕರಿಸಿದ ಹೊರತಾಗಿಯೂ ಪೊಲೀಸ್ ಇಲಾಖೆಯು ದಾಳಿಯ ಹಿಂದಿನ ಜನರನ್ನು ಬಂಧಿಸಿಲ್ಲ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ